ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ರೂ.6,000/- ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಸದರಿ ಅನುದಾನವನ್ನು ರೂ.2,000/- ಗಳಂತೆ 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೀಡಲಾಗುತ್ತಿದೆ.
ರಾಜ್ಯ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಯೋಜನೆಯ ರೈತ ಕುಟುಂಬಗಳಿಗೆ ಹೆಚ್ಚುವರಿಯಾಗಿ 2 ಕಂತುಗಳಲ್ಲಿ ವರ್ಷಕ್ಕೆ ರೂ.4.000/- ಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರದ ಈ ಯೋಜನೆಯ ಆರ್ಥಿಕ ನೆರವು ಪಡೆಯಲು ರೈತ ಫಲಾನುಭವಿಗಳು ಇ-ಕೆವೈಸಿ(E KYC) ಮಾಡುವುದು ಕಡ್ಡಾಯವಾಗಿರುತ್ತದೆ,
ಜಿಲ್ಲೆಯಲ್ಲಿ ಈವರೆಗೆ ಶೇ.71 ರಷ್ಟು (ದೇವನಹಳ್ಳಿ ಶೇ.72 ದೊಡ್ಡಬಳ್ಳಾಪುರ ಶೇ.76, ಹೊಸಕೋಟೆ ಶೇ.69, ನೆಲಮಂಗಲ ಶೇ.64) ರೈತರು E KYC ಮಾಡಿಸಿದ್ದು, ಇನ್ನೂ 22,971 ಫಲಾನುಭವಿ ರೈತರು (ಶೇ.29ರಷ್ಟು – ದೇವನಹಳ್ಳಿ ಶೇ.28, ದೊಡ್ಡಬಳ್ಳಾಪುರ ಶೇ.24. ಹೊಸಕೋಟೆ ಶೇ.31 ನೆಲಮಂಗಲ ಶೇ.36) ಬಾಕಿ ಇರುತ್ತಾರೆ.
E KYC ಯನ್ನು ಈ ಕೆಳಕಂಡಂತೆ ಕೈಗೊಳ್ಳಬಹುದಾಗಿರುತ್ತದೆ.
1) ಓ.ಟಿ.ಪಿ ಆಧಾರಿತ E KYC – ಆಧಾರ್ ಕಾರ್ಡಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಫಲಾನುಭವಿಗಳು ಸ್ವತಃ ತಾವೇ ಅಥವಾ ಇತರರ ಸಹಾಯ ಪಡೆದ http://exlink/pmkisan.gov.in/aadharekyc.aspx 0 ಆಧಾರ್ ಸಂಖ್ಯೆ ಮತ್ತು ಓಟಿಪಿಯನ್ನು ನಮೂದಿಸಿ E KYC ಮಾಡಿಕೊಳ್ಳಬಹುದು.
2) ಬಯೋಮೆಟ್ರಿಕ್ ಆಧಾರಿತ E KYC – ಕಾರ್ಡಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗದಿರುವ ಫಲಾನುಭವಿಗಳು ಗ್ರಾಮ ಬಸ್ ಕೇಂದ್ರ, ಸಿಎಸ್ಸಿ ಕೇಂದ್ರದ ಮೂಲಕ ತಮ್ಮ ಹೆಬ್ಬೆಟ್ಟಿನ ಗುರುತಿನ ಆಧಾರದ ಮೇಲೆ E KYC ಮಾಡಿಸಿಕೊಳ್ಳಬಹುದು.
3) PMKISAN FACE RECOGNITION APP E KYC – ಮೇಲಿನ ಎರಡೂ ಪ್ರಕಾರಗಳಲ್ಲಿ E KYC ಮಾಡಿಸಿಕೊಳ್ಳಲು ಆಗದ ಫಲಾನುಭವಿಗಳು PMKISAN FACE RECOGNITION APP ಮೂಲಕ ತಮ್ಮ ಕಣ್ಣಿನ ಗುಡ್ಡೆಯ ಗುರುತಿನ ಆಧಾರದ ಮೇಲೆ ಸ್ವತ: E KYC ಮಾಡಿಕೊಳ್ಳಬಹುದು ಮತ್ತು ಇತರೇ 10 ಜನ ರೈತರ E KYC ಮಾಡಿಕೊಡಬಹುದು.
14ನೇ ಕಂತಿನ ಆರ್ಥಿಕ ನೆರವು ವರ್ಗಾವಣೆಗಾಗಿ ಎಲ್ಲಾ ಫಲಾನುಭವಿಗಳು ಈ ಮೇಲಿನಂತೆ *ಜೂನ್ 30* ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ / ತೋಟಗಾರಿಕೆ ಇಲಾಖೆ / ಕಂದಾಯ ಇಲಾಖೆ / ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಅಧಿಕಾರಿ / ಸಿಬ್ಬಂದಿಗಳನ್ನು ಹಾಗೂ ನಾಗರೀಕ ಸೇವಾ ಕೇಂದ್ರ ಮತ್ತು ಗ್ರಾಮ ಓನ್ ಕೇಂದ್ರಗಳನ್ನು ಸಂಪರ್ಕಿಸಿ, ಕಡ್ಡಾಯವಾಗಿ E KYC ಮಾಡಿಸಿಕೊಳ್ಳುವುದು.
ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಆರ್ಥಿಕ ನೆರವು ವರ್ಗಾವಣೆಯಾಗದಿರುವ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…