ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ, ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿಸವುದು ಕಡ್ಡಾಯ- ಜಿಲ್ಲಾಧಿಕಾರಿ

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ರೂ.6,000/- ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಸದರಿ ಅನುದಾನವನ್ನು ರೂ.2,000/- ಗಳಂತೆ 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೀಡಲಾಗುತ್ತಿದೆ.

ರಾಜ್ಯ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಯೋಜನೆಯ ರೈತ ಕುಟುಂಬಗಳಿಗೆ ಹೆಚ್ಚುವರಿಯಾಗಿ 2 ಕಂತುಗಳಲ್ಲಿ ವರ್ಷಕ್ಕೆ ರೂ.4.000/- ಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರದ ಈ ಯೋಜನೆಯ ಆರ್ಥಿಕ ನೆರವು ಪಡೆಯಲು ರೈತ ಫಲಾನುಭವಿಗಳು ಇ-ಕೆವೈಸಿ(E KYC) ಮಾಡುವುದು ಕಡ್ಡಾಯವಾಗಿರುತ್ತದೆ,
ಜಿಲ್ಲೆಯಲ್ಲಿ ಈವರೆಗೆ ಶೇ.71 ರಷ್ಟು (ದೇವನಹಳ್ಳಿ ಶೇ.72 ದೊಡ್ಡಬಳ್ಳಾಪುರ ಶೇ.76, ಹೊಸಕೋಟೆ ಶೇ.69, ನೆಲಮಂಗಲ ಶೇ.64) ರೈತರು E KYC ಮಾಡಿಸಿದ್ದು, ಇನ್ನೂ 22,971 ಫಲಾನುಭವಿ ರೈತರು (ಶೇ.29ರಷ್ಟು – ದೇವನಹಳ್ಳಿ ಶೇ.28, ದೊಡ್ಡಬಳ್ಳಾಪುರ ಶೇ.24. ಹೊಸಕೋಟೆ ಶೇ.31 ನೆಲಮಂಗಲ ಶೇ.36) ಬಾಕಿ ಇರುತ್ತಾರೆ.

E KYC ಯನ್ನು ಈ ಕೆಳಕಂಡಂತೆ ಕೈಗೊಳ್ಳಬಹುದಾಗಿರುತ್ತದೆ.

1) ಓ.ಟಿ.ಪಿ ಆಧಾರಿತ E KYC – ಆಧಾರ್ ಕಾರ್ಡಿಗೆ ಮೊಬೈಲ್‌ ಸಂಖ್ಯೆ ಜೋಡಣೆಯಾಗಿರುವ ಫಲಾನುಭವಿಗಳು ಸ್ವತಃ ತಾವೇ ಅಥವಾ ಇತರರ ಸಹಾಯ ಪಡೆದ http://exlink/pmkisan.gov.in/aadharekyc.aspx 0 ಆಧಾರ್ ಸಂಖ್ಯೆ ಮತ್ತು ಓಟಿಪಿಯನ್ನು ನಮೂದಿಸಿ E KYC ಮಾಡಿಕೊಳ್ಳಬಹುದು.

2) ಬಯೋಮೆಟ್ರಿಕ್‌ ಆಧಾರಿತ E KYC – ಕಾರ್ಡಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗದಿರುವ ಫಲಾನುಭವಿಗಳು ಗ್ರಾಮ ಬಸ್‌ ಕೇಂದ್ರ, ಸಿಎಸ್‌ಸಿ ಕೇಂದ್ರದ ಮೂಲಕ ತಮ್ಮ ಹೆಬ್ಬೆಟ್ಟಿನ ಗುರುತಿನ ಆಧಾರದ ಮೇಲೆ E KYC ಮಾಡಿಸಿಕೊಳ್ಳಬಹುದು.

3) PMKISAN FACE RECOGNITION APP E KYC – ಮೇಲಿನ ಎರಡೂ ಪ್ರಕಾರಗಳಲ್ಲಿ E KYC ಮಾಡಿಸಿಕೊಳ್ಳಲು ಆಗದ ಫಲಾನುಭವಿಗಳು PMKISAN FACE RECOGNITION APP ಮೂಲಕ ತಮ್ಮ ಕಣ್ಣಿನ ಗುಡ್ಡೆಯ ಗುರುತಿನ ಆಧಾರದ ಮೇಲೆ ಸ್ವತ: E KYC ಮಾಡಿಕೊಳ್ಳಬಹುದು ಮತ್ತು ಇತರೇ 10 ಜನ ರೈತರ E KYC ಮಾಡಿಕೊಡಬಹುದು.

14ನೇ ಕಂತಿನ ಆರ್ಥಿಕ ನೆರವು ವರ್ಗಾವಣೆಗಾಗಿ ಎಲ್ಲಾ ಫಲಾನುಭವಿಗಳು ಈ ಮೇಲಿನಂತೆ *ಜೂನ್ 30* ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ / ತೋಟಗಾರಿಕೆ ಇಲಾಖೆ / ಕಂದಾಯ ಇಲಾಖೆ / ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಅಧಿಕಾರಿ / ಸಿಬ್ಬಂದಿಗಳನ್ನು ಹಾಗೂ ನಾಗರೀಕ ಸೇವಾ ಕೇಂದ್ರ ಮತ್ತು ಗ್ರಾಮ ಓನ್ ಕೇಂದ್ರಗಳನ್ನು ಸಂಪರ್ಕಿಸಿ, ಕಡ್ಡಾಯವಾಗಿ E KYC ಮಾಡಿಸಿಕೊಳ್ಳುವುದು.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಆರ್ಥಿಕ ನೆರವು ವರ್ಗಾವಣೆಯಾಗದಿರುವ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

10 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

20 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

20 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

1 day ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 day ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

1 day ago