ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ರೂ.6,000/- ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಸದರಿ ಅನುದಾನವನ್ನು ರೂ.2,000/- ಗಳಂತೆ 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೀಡಲಾಗುತ್ತಿದೆ.
ರಾಜ್ಯ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಯೋಜನೆಯ ರೈತ ಕುಟುಂಬಗಳಿಗೆ ಹೆಚ್ಚುವರಿಯಾಗಿ 2 ಕಂತುಗಳಲ್ಲಿ ವರ್ಷಕ್ಕೆ ರೂ.4.000/- ಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರದ ಈ ಯೋಜನೆಯ ಆರ್ಥಿಕ ನೆರವು ಪಡೆಯಲು ರೈತ ಫಲಾನುಭವಿಗಳು ಇ-ಕೆವೈಸಿ(E KYC) ಮಾಡುವುದು ಕಡ್ಡಾಯವಾಗಿರುತ್ತದೆ,
ಜಿಲ್ಲೆಯಲ್ಲಿ ಈವರೆಗೆ ಶೇ.71 ರಷ್ಟು (ದೇವನಹಳ್ಳಿ ಶೇ.72 ದೊಡ್ಡಬಳ್ಳಾಪುರ ಶೇ.76, ಹೊಸಕೋಟೆ ಶೇ.69, ನೆಲಮಂಗಲ ಶೇ.64) ರೈತರು E KYC ಮಾಡಿಸಿದ್ದು, ಇನ್ನೂ 22,971 ಫಲಾನುಭವಿ ರೈತರು (ಶೇ.29ರಷ್ಟು – ದೇವನಹಳ್ಳಿ ಶೇ.28, ದೊಡ್ಡಬಳ್ಳಾಪುರ ಶೇ.24. ಹೊಸಕೋಟೆ ಶೇ.31 ನೆಲಮಂಗಲ ಶೇ.36) ಬಾಕಿ ಇರುತ್ತಾರೆ.
E KYC ಯನ್ನು ಈ ಕೆಳಕಂಡಂತೆ ಕೈಗೊಳ್ಳಬಹುದಾಗಿರುತ್ತದೆ.
1) ಓ.ಟಿ.ಪಿ ಆಧಾರಿತ E KYC – ಆಧಾರ್ ಕಾರ್ಡಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಫಲಾನುಭವಿಗಳು ಸ್ವತಃ ತಾವೇ ಅಥವಾ ಇತರರ ಸಹಾಯ ಪಡೆದ http://exlink/pmkisan.gov.in/aadharekyc.aspx 0 ಆಧಾರ್ ಸಂಖ್ಯೆ ಮತ್ತು ಓಟಿಪಿಯನ್ನು ನಮೂದಿಸಿ E KYC ಮಾಡಿಕೊಳ್ಳಬಹುದು.
2) ಬಯೋಮೆಟ್ರಿಕ್ ಆಧಾರಿತ E KYC – ಕಾರ್ಡಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗದಿರುವ ಫಲಾನುಭವಿಗಳು ಗ್ರಾಮ ಬಸ್ ಕೇಂದ್ರ, ಸಿಎಸ್ಸಿ ಕೇಂದ್ರದ ಮೂಲಕ ತಮ್ಮ ಹೆಬ್ಬೆಟ್ಟಿನ ಗುರುತಿನ ಆಧಾರದ ಮೇಲೆ E KYC ಮಾಡಿಸಿಕೊಳ್ಳಬಹುದು.
3) PMKISAN FACE RECOGNITION APP E KYC – ಮೇಲಿನ ಎರಡೂ ಪ್ರಕಾರಗಳಲ್ಲಿ E KYC ಮಾಡಿಸಿಕೊಳ್ಳಲು ಆಗದ ಫಲಾನುಭವಿಗಳು PMKISAN FACE RECOGNITION APP ಮೂಲಕ ತಮ್ಮ ಕಣ್ಣಿನ ಗುಡ್ಡೆಯ ಗುರುತಿನ ಆಧಾರದ ಮೇಲೆ ಸ್ವತ: E KYC ಮಾಡಿಕೊಳ್ಳಬಹುದು ಮತ್ತು ಇತರೇ 10 ಜನ ರೈತರ E KYC ಮಾಡಿಕೊಡಬಹುದು.
14ನೇ ಕಂತಿನ ಆರ್ಥಿಕ ನೆರವು ವರ್ಗಾವಣೆಗಾಗಿ ಎಲ್ಲಾ ಫಲಾನುಭವಿಗಳು ಈ ಮೇಲಿನಂತೆ *ಜೂನ್ 30* ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ / ತೋಟಗಾರಿಕೆ ಇಲಾಖೆ / ಕಂದಾಯ ಇಲಾಖೆ / ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಅಧಿಕಾರಿ / ಸಿಬ್ಬಂದಿಗಳನ್ನು ಹಾಗೂ ನಾಗರೀಕ ಸೇವಾ ಕೇಂದ್ರ ಮತ್ತು ಗ್ರಾಮ ಓನ್ ಕೇಂದ್ರಗಳನ್ನು ಸಂಪರ್ಕಿಸಿ, ಕಡ್ಡಾಯವಾಗಿ E KYC ಮಾಡಿಸಿಕೊಳ್ಳುವುದು.
ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಆರ್ಥಿಕ ನೆರವು ವರ್ಗಾವಣೆಯಾಗದಿರುವ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
When it involves on-line gambling enterpris padişahbet günceles, among one of the most tempting deals…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…
Welcome to our thorough overview on the very best online slots online casinos. If you're…