ಪ್ರಧಾನಮಂತ್ರಿ ಕಿಸಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ, ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿಸವುದು ಕಡ್ಡಾಯ- ಜಿಲ್ಲಾಧಿಕಾರಿ

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ರೂ.6,000/- ಗಳ ಆರ್ಥಿಕ ನೆರವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ. ಸದರಿ ಅನುದಾನವನ್ನು ರೂ.2,000/- ಗಳಂತೆ 3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೀಡಲಾಗುತ್ತಿದೆ.

ರಾಜ್ಯ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಯೋಜನೆಯ ರೈತ ಕುಟುಂಬಗಳಿಗೆ ಹೆಚ್ಚುವರಿಯಾಗಿ 2 ಕಂತುಗಳಲ್ಲಿ ವರ್ಷಕ್ಕೆ ರೂ.4.000/- ಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರದ ಈ ಯೋಜನೆಯ ಆರ್ಥಿಕ ನೆರವು ಪಡೆಯಲು ರೈತ ಫಲಾನುಭವಿಗಳು ಇ-ಕೆವೈಸಿ(E KYC) ಮಾಡುವುದು ಕಡ್ಡಾಯವಾಗಿರುತ್ತದೆ,
ಜಿಲ್ಲೆಯಲ್ಲಿ ಈವರೆಗೆ ಶೇ.71 ರಷ್ಟು (ದೇವನಹಳ್ಳಿ ಶೇ.72 ದೊಡ್ಡಬಳ್ಳಾಪುರ ಶೇ.76, ಹೊಸಕೋಟೆ ಶೇ.69, ನೆಲಮಂಗಲ ಶೇ.64) ರೈತರು E KYC ಮಾಡಿಸಿದ್ದು, ಇನ್ನೂ 22,971 ಫಲಾನುಭವಿ ರೈತರು (ಶೇ.29ರಷ್ಟು – ದೇವನಹಳ್ಳಿ ಶೇ.28, ದೊಡ್ಡಬಳ್ಳಾಪುರ ಶೇ.24. ಹೊಸಕೋಟೆ ಶೇ.31 ನೆಲಮಂಗಲ ಶೇ.36) ಬಾಕಿ ಇರುತ್ತಾರೆ.

E KYC ಯನ್ನು ಈ ಕೆಳಕಂಡಂತೆ ಕೈಗೊಳ್ಳಬಹುದಾಗಿರುತ್ತದೆ.

1) ಓ.ಟಿ.ಪಿ ಆಧಾರಿತ E KYC – ಆಧಾರ್ ಕಾರ್ಡಿಗೆ ಮೊಬೈಲ್‌ ಸಂಖ್ಯೆ ಜೋಡಣೆಯಾಗಿರುವ ಫಲಾನುಭವಿಗಳು ಸ್ವತಃ ತಾವೇ ಅಥವಾ ಇತರರ ಸಹಾಯ ಪಡೆದ http://exlink/pmkisan.gov.in/aadharekyc.aspx 0 ಆಧಾರ್ ಸಂಖ್ಯೆ ಮತ್ತು ಓಟಿಪಿಯನ್ನು ನಮೂದಿಸಿ E KYC ಮಾಡಿಕೊಳ್ಳಬಹುದು.

2) ಬಯೋಮೆಟ್ರಿಕ್‌ ಆಧಾರಿತ E KYC – ಕಾರ್ಡಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗದಿರುವ ಫಲಾನುಭವಿಗಳು ಗ್ರಾಮ ಬಸ್‌ ಕೇಂದ್ರ, ಸಿಎಸ್‌ಸಿ ಕೇಂದ್ರದ ಮೂಲಕ ತಮ್ಮ ಹೆಬ್ಬೆಟ್ಟಿನ ಗುರುತಿನ ಆಧಾರದ ಮೇಲೆ E KYC ಮಾಡಿಸಿಕೊಳ್ಳಬಹುದು.

3) PMKISAN FACE RECOGNITION APP E KYC – ಮೇಲಿನ ಎರಡೂ ಪ್ರಕಾರಗಳಲ್ಲಿ E KYC ಮಾಡಿಸಿಕೊಳ್ಳಲು ಆಗದ ಫಲಾನುಭವಿಗಳು PMKISAN FACE RECOGNITION APP ಮೂಲಕ ತಮ್ಮ ಕಣ್ಣಿನ ಗುಡ್ಡೆಯ ಗುರುತಿನ ಆಧಾರದ ಮೇಲೆ ಸ್ವತ: E KYC ಮಾಡಿಕೊಳ್ಳಬಹುದು ಮತ್ತು ಇತರೇ 10 ಜನ ರೈತರ E KYC ಮಾಡಿಕೊಡಬಹುದು.

14ನೇ ಕಂತಿನ ಆರ್ಥಿಕ ನೆರವು ವರ್ಗಾವಣೆಗಾಗಿ ಎಲ್ಲಾ ಫಲಾನುಭವಿಗಳು ಈ ಮೇಲಿನಂತೆ *ಜೂನ್ 30* ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ / ತೋಟಗಾರಿಕೆ ಇಲಾಖೆ / ಕಂದಾಯ ಇಲಾಖೆ / ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಅಧಿಕಾರಿ / ಸಿಬ್ಬಂದಿಗಳನ್ನು ಹಾಗೂ ನಾಗರೀಕ ಸೇವಾ ಕೇಂದ್ರ ಮತ್ತು ಗ್ರಾಮ ಓನ್ ಕೇಂದ್ರಗಳನ್ನು ಸಂಪರ್ಕಿಸಿ, ಕಡ್ಡಾಯವಾಗಿ E KYC ಮಾಡಿಸಿಕೊಳ್ಳುವುದು.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಆರ್ಥಿಕ ನೆರವು ವರ್ಗಾವಣೆಯಾಗದಿರುವ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

7 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

8 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

16 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago