ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಗಗನಯಾತ್ರಿ ಶುಭಾಂಶು ಶುಕ್ಲಾ

ಆಕ್ಸಿಯಮ್‌-4 ಬಾಹ್ಯಾಕಾಶ ಕಾರ್ಯಾಚರಣೆಯ ಭಾಗವಾಗಿದ್ದ ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರು, ಇಂದು (ಆ.18-ಸೋಮವಾರ) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ‌.

ಈ ವೇಳೆ ಭಾರತೀಯ ಗಗನಯಾತ್ರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಪ್ಪುಗೆಯ ಸ್ವಾಗತ ಕೋರಿದ್ದಾರೆ.

ಪ್ರಧಾನಿ ಅಧಿಕೃತ ಕಚೇರಿಗೆ ಭೇಟಿ ನೀಡಿದ ಶುಭಾಂಶು ಶುಕ್ಲಾ ಅವರನ್ನು, ನರೇಂದ್ರ ಮೋದಿ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಶುಕ್ಲಾ ಅವರನ್ನು, “ಭಾರತದ ಬಾಹ್ಯಾಕಾಶ ಯೋಜನೆಯ ಪ್ರತಿನಿಧಿ” ಎಂದು ಪ್ರಧಾನಿ ಮೋದಿ ಕೊಂಡಾಡಿದ್ದಾರೆ.

ಶುಭಾಂಶು ಶುಕ್ಲಾ ಅವರಿಂದ ಆಕ್ಸಿಯಮ್-4 ಬಾಹ್ಯಾಕಾಶ ಕಾರ್ಯಾಚರಣೆಯ ವಿವರ ಪಡೆದುಕೊಂಡ ಪ್ರಧಾನಿ ಮೋದಿ, ಭಾರತೀಯ ಗಗನಯಾತ್ರಿಯ ಬಾಹ್ಯಾಕಾಶ ಯಾತ್ರೆಯ ಅನುಭವಗಳನ್ನು ಕೇಳಿ ರೋಮಾಂಚನಗೊಂಡಿದ್ದಾರೆ.

ಇದೇ ವೇಳೆ ಶುಭಾಂಶು ಶುಕ್ಲಾ ಅವರು ಪ್ರಧಾನಿ ಮೋದಿ ಅವರಿಗೆ, ಆಕ್ಸಿಯಮ್ -4 ಮಿಷನ್ ಪ್ಯಾಚ್‌ವೊಂದನ್ನು ಉಡುಗೊರೆಯಾಗಿ ನೀಡಿದರು. ಪ್ರಧಾನಿ ಮೋದಿ ಈ ಉಡುಗೊರೆಯನ್ನು ಅತ್ಯಂತ ಸಂತಸದಿಂದ ಸ್ವೀಕರಿಸಿದ್ದಾರೆ.

ತಮ್ಮ ಭೇಟಿಯ ಸಂದರ್ಭದಲ್ಲಿಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರು, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ಐಎಸ್‌ಎಸ್‌)ದಿಂದ ಕ್ಲಿಕ್ಕಿಸಿದ ಭೂಮಿಯ ಚಿತ್ರಗಳನ್ನು ಪ್ರಧಾನಿ ಮೋದಿ ಅವರಿಗೆ ತೋರಿಸಿದರು. ಶುಭಾಂಶು ಶುಕ್ಲಾ ಐಎಸ್‌ಎಸ್‌ಗೆ ಭೇಟಿ ನೀಡಿದ ಮೊದಲ ಮತ್ತು ಬಾಹ್ಯಾಕಾಶ ತಲುಪಿದ ಎರಡನೇ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶುಭಾಂಶು ಶುಕ್ಲಾ ಅವರೊಂದಿಗೆ ಉತ್ತಮ ಸಂವಾದ ನಡೆಯಿತು. ಬಾಹ್ಯಾಕಾಶದಲ್ಲಿ ಅವರ ಅನುಭವಗಳು, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಪ್ರಗತಿ ಹಾಗೂ ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್ ಸೇರಿದಂತೆ ವಿವಿಧ ವಿಷಯಗಳ ಕುರಿತು ನಾವು ಚರ್ಚಿಸಿದ್ದೇವೆ. ಅವರ ಸಾಧನೆಯ ಬಗ್ಗೆ ಭಾರತ ಹೆಮ್ಮೆಪಡುತ್ತದೆ.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

2 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

3 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

3 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

6 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

9 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

9 hours ago