ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ- ಸಿಎಂ ಸಿದ್ದರಾಮಯ್ಯ

ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿರುವ ಕೇಂದ್ರ ಕೇಂದ್ರ ಬಿಜೆಪಿ (BJP) ಸರ್ಕಾರದ ಕ್ರಮ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುಜಿಸಿ ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ಕರಡು ನಿಯಮಾಳಿಗಳನ್ನು ನಮ್ಮ ಸರ್ಕಾರ ಪರಿಶೀಲಿಸಿ, ಇದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಈಗಿರುವ ನಿಯಮಾವಳಿಗಳ ಪ್ರಕಾರ ಉಪಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರ ಶೋಧನಾ ಸಮಿತಿಯನ್ನು ರಚಿಸುತ್ತಿತ್ತು. ಅದರಲ್ಲಿ ಕುಲಪತಿಗಳಾಗಿರುವ ರಾಜ್ಯಪಾಲರು ಶಿಫಾರಸು ಮಾಡುವ ವ್ಯಕ್ತಿಗಳು ಕೂಡಾ ಸದಸ್ಯರಾಗಿರುತ್ತಿದ್ದರು. ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಇದು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದ ಮೇಲಿನ ನೇರ ಸವಾರಿಯಾಗಿದೆ ಎಂದರು.

ರಾಜ್ಯದ ವಿಶ‍್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಗಾಗಿ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅರ್ಜಿಗಳನ್ನು ಆಹ್ವಾನಿಸಬೇಕೆಂದು ಯುಜಿಸಿ ಹೊಸ ನಿಯಮಾವಳಿಗಳು ಹೇಳುತ್ತಿದೆ. ಇಲ್ಲಿಯ ವರೆಗೆ ಆಯಾ ರಾಜ್ಯಗಳ ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ರಾಜ್ಯಪಾಲರ ಹುದ್ದೆ ಹೊಸ ನಿಯಮಗಳು ಜಾರಿಗೆ ಬಂದರೆ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸ್ಥಾನದಲ್ಲಿ ಅನ್ಯಭಾಷಿಕರು ಬಂದು ಕೂರುವ ಅಪಾಯ ಇದೆ ಎಂದು ತಿಳಿಸಿದರು.

ಉಪಕುಲಪತಿಗಳ ನೇಮಕಾತಿಯ ಅರ್ಹತೆಗೆ ಸಂಬಂಧಿಸಿದಂತೆಯೂ ಕೆಲವು ಪ್ರಮುಖ ಬದಲಾವಣಿಗಳನ್ನು ಮಾಡಲಾಗಿದೆ. ಹೊಸ ನಿಯಮಗಳ ಪ್ರಕಾರ ಉಪಕುಲಪತಿಗಳನ್ನು ಕೇವಲ ಅಕಾಡೆಮಿಕ್ ವಲಯದಿಂದ ಮಾತ್ರ ನೇಮಿಸಿಕೊಳ್ಳದೆ, ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದ ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರನ್ನು ನೇಮಕಮಾಡಿಕೊಳ್ಳಬಹುದಾಗಿದೆ. ಇದು ಕನ್ನಡಿಗರಿಗೆ ಬಗೆಯುವ ದ್ರೋಹವಾಗಿದೆ ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರು ಅನಗತ್ಯವಾಗಿ ಮೂಗುತೂರಿಸುತ್ತಾ ಬಂದಿ‍ದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ರಾಜ್ಯ ಸರ್ಕಾರದ ಶಿಫಾರಸನ್ನು ನಿರ್ಲಕ್ಷಿಸಿ ತಮ್ಮ ಆಯ್ಕೆಯನ್ನು ನಮ್ಮ ಮೇಲೆ ಹೇರುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ನಿರ್ವಹಣೆ ರಾಜ್ಯ ಸರ್ಕಾರದ ಪರಮಾಧಿಕಾರವಾಗಿದ್ದು ಇದರಲ್ಲಿ ಅನಗತ್ಯವಾದ ಮಧ್ಯಪ್ರವೇಶದಿಂದಾಗಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಘರ್ಷಣೆ ಏರ್ಪಡುವ ಸಾಧ್ಯತೆ ಇದೆ ಎಂದರು.

ಒಕ್ಕೂಟ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂತಹ ಇಂತಹ ನಡವಳಿಕೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಜೊತೆಯಲ್ಲಿ ಈ ಬಗ್ಗೆ ಚರ್ಚಿಸಿ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

2 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

10 hours ago

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

22 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

23 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

23 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

23 hours ago