ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ- ಸಿಎಂ ಸಿದ್ದರಾಮಯ್ಯ

ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿರುವ ಕೇಂದ್ರ ಕೇಂದ್ರ ಬಿಜೆಪಿ (BJP) ಸರ್ಕಾರದ ಕ್ರಮ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುಜಿಸಿ ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ಕರಡು ನಿಯಮಾಳಿಗಳನ್ನು ನಮ್ಮ ಸರ್ಕಾರ ಪರಿಶೀಲಿಸಿ, ಇದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಈಗಿರುವ ನಿಯಮಾವಳಿಗಳ ಪ್ರಕಾರ ಉಪಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರ ಶೋಧನಾ ಸಮಿತಿಯನ್ನು ರಚಿಸುತ್ತಿತ್ತು. ಅದರಲ್ಲಿ ಕುಲಪತಿಗಳಾಗಿರುವ ರಾಜ್ಯಪಾಲರು ಶಿಫಾರಸು ಮಾಡುವ ವ್ಯಕ್ತಿಗಳು ಕೂಡಾ ಸದಸ್ಯರಾಗಿರುತ್ತಿದ್ದರು. ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಇದು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದ ಮೇಲಿನ ನೇರ ಸವಾರಿಯಾಗಿದೆ ಎಂದರು.

ರಾಜ್ಯದ ವಿಶ‍್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಗಾಗಿ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅರ್ಜಿಗಳನ್ನು ಆಹ್ವಾನಿಸಬೇಕೆಂದು ಯುಜಿಸಿ ಹೊಸ ನಿಯಮಾವಳಿಗಳು ಹೇಳುತ್ತಿದೆ. ಇಲ್ಲಿಯ ವರೆಗೆ ಆಯಾ ರಾಜ್ಯಗಳ ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ರಾಜ್ಯಪಾಲರ ಹುದ್ದೆ ಹೊಸ ನಿಯಮಗಳು ಜಾರಿಗೆ ಬಂದರೆ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸ್ಥಾನದಲ್ಲಿ ಅನ್ಯಭಾಷಿಕರು ಬಂದು ಕೂರುವ ಅಪಾಯ ಇದೆ ಎಂದು ತಿಳಿಸಿದರು.

ಉಪಕುಲಪತಿಗಳ ನೇಮಕಾತಿಯ ಅರ್ಹತೆಗೆ ಸಂಬಂಧಿಸಿದಂತೆಯೂ ಕೆಲವು ಪ್ರಮುಖ ಬದಲಾವಣಿಗಳನ್ನು ಮಾಡಲಾಗಿದೆ. ಹೊಸ ನಿಯಮಗಳ ಪ್ರಕಾರ ಉಪಕುಲಪತಿಗಳನ್ನು ಕೇವಲ ಅಕಾಡೆಮಿಕ್ ವಲಯದಿಂದ ಮಾತ್ರ ನೇಮಿಸಿಕೊಳ್ಳದೆ, ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದ ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರನ್ನು ನೇಮಕಮಾಡಿಕೊಳ್ಳಬಹುದಾಗಿದೆ. ಇದು ಕನ್ನಡಿಗರಿಗೆ ಬಗೆಯುವ ದ್ರೋಹವಾಗಿದೆ ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರು ಅನಗತ್ಯವಾಗಿ ಮೂಗುತೂರಿಸುತ್ತಾ ಬಂದಿ‍ದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ರಾಜ್ಯ ಸರ್ಕಾರದ ಶಿಫಾರಸನ್ನು ನಿರ್ಲಕ್ಷಿಸಿ ತಮ್ಮ ಆಯ್ಕೆಯನ್ನು ನಮ್ಮ ಮೇಲೆ ಹೇರುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ನಿರ್ವಹಣೆ ರಾಜ್ಯ ಸರ್ಕಾರದ ಪರಮಾಧಿಕಾರವಾಗಿದ್ದು ಇದರಲ್ಲಿ ಅನಗತ್ಯವಾದ ಮಧ್ಯಪ್ರವೇಶದಿಂದಾಗಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಘರ್ಷಣೆ ಏರ್ಪಡುವ ಸಾಧ್ಯತೆ ಇದೆ ಎಂದರು.

ಒಕ್ಕೂಟ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂತಹ ಇಂತಹ ನಡವಳಿಕೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಜೊತೆಯಲ್ಲಿ ಈ ಬಗ್ಗೆ ಚರ್ಚಿಸಿ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

5 hours ago

ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…

7 hours ago

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

21 hours ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

22 hours ago

ಸ್ನೇಹಿತರ ದಿನದ ಅಂಗವಾಗಿ ನಂದಿಬೆಟ್ಟಕ್ಕೆ ತೆರಳಿದ್ದ ಸ್ನೇಹಿತರು: ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…

1 day ago

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

2 days ago