ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ- ಸಿಎಂ ಸಿದ್ದರಾಮಯ್ಯ

ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿರುವ ಕೇಂದ್ರ ಕೇಂದ್ರ ಬಿಜೆಪಿ (BJP) ಸರ್ಕಾರದ ಕ್ರಮ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುಜಿಸಿ ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ಕರಡು ನಿಯಮಾಳಿಗಳನ್ನು ನಮ್ಮ ಸರ್ಕಾರ ಪರಿಶೀಲಿಸಿ, ಇದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಈಗಿರುವ ನಿಯಮಾವಳಿಗಳ ಪ್ರಕಾರ ಉಪಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರ ಶೋಧನಾ ಸಮಿತಿಯನ್ನು ರಚಿಸುತ್ತಿತ್ತು. ಅದರಲ್ಲಿ ಕುಲಪತಿಗಳಾಗಿರುವ ರಾಜ್ಯಪಾಲರು ಶಿಫಾರಸು ಮಾಡುವ ವ್ಯಕ್ತಿಗಳು ಕೂಡಾ ಸದಸ್ಯರಾಗಿರುತ್ತಿದ್ದರು. ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಇದು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದ ಮೇಲಿನ ನೇರ ಸವಾರಿಯಾಗಿದೆ ಎಂದರು.

ರಾಜ್ಯದ ವಿಶ‍್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಗಾಗಿ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅರ್ಜಿಗಳನ್ನು ಆಹ್ವಾನಿಸಬೇಕೆಂದು ಯುಜಿಸಿ ಹೊಸ ನಿಯಮಾವಳಿಗಳು ಹೇಳುತ್ತಿದೆ. ಇಲ್ಲಿಯ ವರೆಗೆ ಆಯಾ ರಾಜ್ಯಗಳ ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ರಾಜ್ಯಪಾಲರ ಹುದ್ದೆ ಹೊಸ ನಿಯಮಗಳು ಜಾರಿಗೆ ಬಂದರೆ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸ್ಥಾನದಲ್ಲಿ ಅನ್ಯಭಾಷಿಕರು ಬಂದು ಕೂರುವ ಅಪಾಯ ಇದೆ ಎಂದು ತಿಳಿಸಿದರು.

ಉಪಕುಲಪತಿಗಳ ನೇಮಕಾತಿಯ ಅರ್ಹತೆಗೆ ಸಂಬಂಧಿಸಿದಂತೆಯೂ ಕೆಲವು ಪ್ರಮುಖ ಬದಲಾವಣಿಗಳನ್ನು ಮಾಡಲಾಗಿದೆ. ಹೊಸ ನಿಯಮಗಳ ಪ್ರಕಾರ ಉಪಕುಲಪತಿಗಳನ್ನು ಕೇವಲ ಅಕಾಡೆಮಿಕ್ ವಲಯದಿಂದ ಮಾತ್ರ ನೇಮಿಸಿಕೊಳ್ಳದೆ, ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದ ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರನ್ನು ನೇಮಕಮಾಡಿಕೊಳ್ಳಬಹುದಾಗಿದೆ. ಇದು ಕನ್ನಡಿಗರಿಗೆ ಬಗೆಯುವ ದ್ರೋಹವಾಗಿದೆ ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರು ಅನಗತ್ಯವಾಗಿ ಮೂಗುತೂರಿಸುತ್ತಾ ಬಂದಿ‍ದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ರಾಜ್ಯ ಸರ್ಕಾರದ ಶಿಫಾರಸನ್ನು ನಿರ್ಲಕ್ಷಿಸಿ ತಮ್ಮ ಆಯ್ಕೆಯನ್ನು ನಮ್ಮ ಮೇಲೆ ಹೇರುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ನಿರ್ವಹಣೆ ರಾಜ್ಯ ಸರ್ಕಾರದ ಪರಮಾಧಿಕಾರವಾಗಿದ್ದು ಇದರಲ್ಲಿ ಅನಗತ್ಯವಾದ ಮಧ್ಯಪ್ರವೇಶದಿಂದಾಗಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಘರ್ಷಣೆ ಏರ್ಪಡುವ ಸಾಧ್ಯತೆ ಇದೆ ಎಂದರು.

ಒಕ್ಕೂಟ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂತಹ ಇಂತಹ ನಡವಳಿಕೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಜೊತೆಯಲ್ಲಿ ಈ ಬಗ್ಗೆ ಚರ್ಚಿಸಿ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

5 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

15 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago