ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಕೇಂದ್ರ ಬಿಜೆಪಿ (BJP) ಸರ್ಕಾರದ ಕ್ರಮ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುಜಿಸಿ ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ಕರಡು ನಿಯಮಾಳಿಗಳನ್ನು ನಮ್ಮ ಸರ್ಕಾರ ಪರಿಶೀಲಿಸಿ, ಇದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಈಗಿರುವ ನಿಯಮಾವಳಿಗಳ ಪ್ರಕಾರ ಉಪಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರ ಶೋಧನಾ ಸಮಿತಿಯನ್ನು ರಚಿಸುತ್ತಿತ್ತು. ಅದರಲ್ಲಿ ಕುಲಪತಿಗಳಾಗಿರುವ ರಾಜ್ಯಪಾಲರು ಶಿಫಾರಸು ಮಾಡುವ ವ್ಯಕ್ತಿಗಳು ಕೂಡಾ ಸದಸ್ಯರಾಗಿರುತ್ತಿದ್ದರು. ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಇದು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದ ಮೇಲಿನ ನೇರ ಸವಾರಿಯಾಗಿದೆ ಎಂದರು.
ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಗಾಗಿ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅರ್ಜಿಗಳನ್ನು ಆಹ್ವಾನಿಸಬೇಕೆಂದು ಯುಜಿಸಿ ಹೊಸ ನಿಯಮಾವಳಿಗಳು ಹೇಳುತ್ತಿದೆ. ಇಲ್ಲಿಯ ವರೆಗೆ ಆಯಾ ರಾಜ್ಯಗಳ ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ರಾಜ್ಯಪಾಲರ ಹುದ್ದೆ ಹೊಸ ನಿಯಮಗಳು ಜಾರಿಗೆ ಬಂದರೆ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸ್ಥಾನದಲ್ಲಿ ಅನ್ಯಭಾಷಿಕರು ಬಂದು ಕೂರುವ ಅಪಾಯ ಇದೆ ಎಂದು ತಿಳಿಸಿದರು.
ಉಪಕುಲಪತಿಗಳ ನೇಮಕಾತಿಯ ಅರ್ಹತೆಗೆ ಸಂಬಂಧಿಸಿದಂತೆಯೂ ಕೆಲವು ಪ್ರಮುಖ ಬದಲಾವಣಿಗಳನ್ನು ಮಾಡಲಾಗಿದೆ. ಹೊಸ ನಿಯಮಗಳ ಪ್ರಕಾರ ಉಪಕುಲಪತಿಗಳನ್ನು ಕೇವಲ ಅಕಾಡೆಮಿಕ್ ವಲಯದಿಂದ ಮಾತ್ರ ನೇಮಿಸಿಕೊಳ್ಳದೆ, ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದ ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರನ್ನು ನೇಮಕಮಾಡಿಕೊಳ್ಳಬಹುದಾಗಿದೆ. ಇದು ಕನ್ನಡಿಗರಿಗೆ ಬಗೆಯುವ ದ್ರೋಹವಾಗಿದೆ ಎಂದರು.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರು ಅನಗತ್ಯವಾಗಿ ಮೂಗುತೂರಿಸುತ್ತಾ ಬಂದಿದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ರಾಜ್ಯ ಸರ್ಕಾರದ ಶಿಫಾರಸನ್ನು ನಿರ್ಲಕ್ಷಿಸಿ ತಮ್ಮ ಆಯ್ಕೆಯನ್ನು ನಮ್ಮ ಮೇಲೆ ಹೇರುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ನಿರ್ವಹಣೆ ರಾಜ್ಯ ಸರ್ಕಾರದ ಪರಮಾಧಿಕಾರವಾಗಿದ್ದು ಇದರಲ್ಲಿ ಅನಗತ್ಯವಾದ ಮಧ್ಯಪ್ರವೇಶದಿಂದಾಗಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಘರ್ಷಣೆ ಏರ್ಪಡುವ ಸಾಧ್ಯತೆ ಇದೆ ಎಂದರು.
ಒಕ್ಕೂಟ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂತಹ ಇಂತಹ ನಡವಳಿಕೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಜೊತೆಯಲ್ಲಿ ಈ ಬಗ್ಗೆ ಚರ್ಚಿಸಿ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…