ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ- ರಾಜ್ಯದ ಬರ ಪರಿಸ್ಥಿತಿಯನ್ನ ವಿವರಿಸಿ, ಶೀಘ್ರವೇ  18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ  18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ರಾಜ್ಯದ 236 ತಾಲೂಕುಗಳಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು.

ಎನ್‌.ಡಿ.ಆರ್‌.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ.

ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು.

ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು.

ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

8 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

9 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago