ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ- ರಾಜ್ಯದ ಬರ ಪರಿಸ್ಥಿತಿಯನ್ನ ವಿವರಿಸಿ, ಶೀಘ್ರವೇ  18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ  18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ರಾಜ್ಯದ 236 ತಾಲೂಕುಗಳಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು.

ಎನ್‌.ಡಿ.ಆರ್‌.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ.

ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು.

ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು.

ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

22 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago