ಬಡವರ ಕೈಗೆ ಹಣ ಕೊಟ್ಟರೆ ಅದು ದ್ವಿಗುಣವಾಗುತ್ತದೆ. ಆದರೆ ಶ್ರೀಮಂತರಿಗೆ ಕೊಟ್ಟರೆ ದಾಸ್ತಾನು ಆಗುತ್ತದೆ. ಇದಕ್ಕೆ ಶಕ್ತಿ ಯೋಜನೆಯೆ ಸಾಕ್ಷಿ. ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳ ಲಾಭ ಹೆಚ್ಚಾಗ್ತಿದೆ. ಇದರ ಕುರಿತು ಬೆಸಿಕ್ ಎಕನಾಮಿಕ್ಸ್ ಕೂಡ ಪ್ರಧಾನಿ ಮೋದಿಗೆ ಅರ್ಥವಾಗಲ್ಲ. ನಾವು ಕೊಟ್ಟಿರುವ ಎಲ್ಲಾ ಆಶ್ವಾಸನೆ ಈಡೇರಿಸುತ್ತೇವೆ. ಅವರಿಗೆ ಕೇವಲ ಲೂಟಿ ಮಾಡುವುದಷ್ಟೆ ಗೊತ್ತಿರುವುದು ಎಂದು ಟೀಕೆ ಮಾಡಿದರು.
ನಗರದ ಪ್ರವಾಸಿ ಮಂದರದಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ ನಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನಾವು ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ದೇಶದ ಜನಸಾಮಾನ್ಯರ ಖಾತೆಗೆ 15 ಲಕ್ಷ ರೂ. ಜಮೆ ಮಾಡುತ್ತೇವೆ ಎಂದು ಹೇಳಿ ಈವರೆಗೆ ಮಾಡಿಲ್ಲ. ಉದ್ಯೋಗ ಸೃಷ್ಟಿಸಲಿದ್ದೇವೆ ಎಂದು ಹೇಳಿ ಇದ್ದ ಕೆಲಸಗಳನ್ನು ಕೂಡ ಕಿತ್ತಿಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರದಿಂದ ಬೇಸತ್ತ ಜನ ಬಿಜೆಪಿಯನ್ನು ಮಕಾಡೆ ಮಲಗಿಸಿದ್ದಾರೆ.
ವಿಶ್ವಸಂಸ್ಥೆಯಲ್ಲಿ 2030ರ ವೇಳೆಗೆ ಹಸಿವು ಮುಕ್ತ ದೇಶ ನಿರ್ಮಾದ ನಿರ್ಣಯವಾಗಿದ್ದು. ಈ ನಿರ್ಣಯಕ್ಕೆ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಸಹಿ ಹಾಕಿದ್ದಾರೆ. ಇದು ನಮ್ಮ ದೇಶದಲ್ಲಿಯೂ ಜಾರಿ ಇದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿಗೆ ತರಲಾಗಿದೆ. ಎಫ್ ಸಿ ಐನವರು ಗೋಡಾನ್ ನಲ್ಲಿ 29.5 ಲಕ್ಷ ಟನ್ ಅಕ್ಕಿ ಸ್ಟಾಕ್ ಇದ್ದರಿಂದಲೇ ಅನುಮತಿ ನೀಡಿತ್ತು. ಆದರೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅನ್ನವನ್ನು ಕಿತ್ತುಕೊಂಡಿದ್ದಾರೆ. ಬಡವರ ಅಕ್ಕಿಯನ್ನು ಮದ್ಯದ ಪ್ರಾಡಕ್ಟ್ ಎಥನಾಲ್ ತಯಾರಿಸಲು ಬಳಸುತ್ತಿದ್ದಾರೆ. ಆದರೆ ಜನರಿಗೆ ನೀಡಲು ಪ್ರಧಾನಿ ಮೋದಿ, ಅಮಿತ್ ಶಾಗೆ ಮನಸ್ಸು ಬರಲಿಲ್ಲ ಕಿಡಿಕಾರಿದರು.
ಎತ್ತಿನಹೊಳೆ ಯೋಜನೆ ಬಿಜೆಪಿ, ಜೆಡಿಎಸ್ ನವರಿಗೆ ರಾಜಕೀಯದಾಳ:
ಕಾಂಗ್ರೆಸ್ ಸರ್ಕಾರ ಎತ್ತಿನಹೊಳೆ ಯೋಜನೆಗೆ ಅಗತ್ಯ ಅನುದಾನವನ್ನು ಕಾಲಮಿತಿಯಲ್ಲಿ ಬಿಡುಗಡೆ ಮಾಡಿ ಯೋಜನೆ ಕಾರ್ಯಗತಕ್ಕೆ ಶ್ರಮಿಸಿದೆ. ಬಿಜೆಪಿ, ಜೆಡಿಎಸ್ ನವರು ಟೀಕೆ ಮಾಡುವುದರಲ್ಲೇ ಕಾಲಕಳೆದು, ಚುನಾವಣಾ ವೇಳೆ ರಾಜಕೀಯ ದಾಳವನ್ನಾಗಿ ಮಾಡಿಕೊಂಡಿವೆ ಎಂದರು.
ಇನ್ನೂ ಎರಡು ಎಂಪಿ ಚುನಾವಣೆಗೆ ಸ್ಪರ್ಧಿಸಬಲ್ಲೆ:
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ವೀರಪ್ಪ ಮೊಯ್ಲಿ ಅವರು ನನ್ನಲ್ಲಿ ಇನ್ನೂ ಎರಡು ಚುನಾವಣೆ ಅಂದರೆ 10 ವರ್ಷ ಕೆಲಸ ಮಾಡುವಷ್ಟು ಮಾನಸಿಕ, ದೈಹಿಕ ಶಕ್ತಿ ಎರಡು ಇದೆ. ಪಕ್ಷಕ್ಕಾಗಿ ದುಡಿದ ಯಾರಿಗೆ ಟಿಕೆಟ್ ನೀಡಿದರು ಸ್ವಾಗತ ಎಂದರು.
ಈ ವೇಳೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಲಕ್ಷ್ಮಿಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…