ಪ್ರಧಾನಿ ನರೇಂದ್ರ ಮೋದಿ ಬೇಸಿಕ್ ಎಕನಾಮಿಕ್ಸ್ ಕೂಡ ತಿಳಿದಿಲ್ಲ: ಬಡವರ ಅನ್ನವನ್ನು ಪ್ರಧಾನಿ ಮೋದಿ ಕಿತ್ತುಕೊಂಡಿದ್ದಾರೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಟೀಕೆ

ಬಡವರ ಕೈಗೆ ಹಣ ಕೊಟ್ಟರೆ ಅದು ದ್ವಿಗುಣವಾಗುತ್ತದೆ. ಆದರೆ ಶ್ರೀಮಂತರಿಗೆ ಕೊಟ್ಟರೆ ದಾಸ್ತಾನು ಆಗುತ್ತದೆ. ಇದಕ್ಕೆ ಶಕ್ತಿ ಯೋಜನೆಯೆ ಸಾಕ್ಷಿ. ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳ ಲಾಭ ಹೆಚ್ಚಾಗ್ತಿದೆ. ಇದರ ಕುರಿತು ಬೆಸಿಕ್ ಎಕನಾಮಿಕ್ಸ್ ಕೂಡ ಪ್ರಧಾನಿ ಮೋದಿಗೆ ಅರ್ಥವಾಗಲ್ಲ. ನಾವು ಕೊಟ್ಟಿರುವ ಎಲ್ಲಾ ಆಶ್ವಾಸನೆ ಈಡೇರಿಸುತ್ತೇವೆ. ಅವರಿಗೆ ಕೇವಲ ಲೂಟಿ ಮಾಡುವುದಷ್ಟೆ ಗೊತ್ತಿರುವುದು ಎಂದು ಟೀಕೆ ಮಾಡಿದರು.

ನಗರದ ಪ್ರವಾಸಿ ಮಂದರದಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ ನಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನಾವು ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ದೇಶದ ಜನಸಾಮಾನ್ಯರ ಖಾತೆಗೆ 15 ಲಕ್ಷ ರೂ. ಜಮೆ ಮಾಡುತ್ತೇವೆ ಎಂದು ಹೇಳಿ ಈವರೆಗೆ ಮಾಡಿಲ್ಲ. ಉದ್ಯೋಗ ಸೃಷ್ಟಿಸಲಿದ್ದೇವೆ ಎಂದು ಹೇಳಿ ಇದ್ದ ಕೆಲಸಗಳನ್ನು ಕೂಡ ಕಿತ್ತಿಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರದಿಂದ ಬೇಸತ್ತ ಜನ ಬಿಜೆಪಿಯನ್ನು ಮಕಾಡೆ ಮಲಗಿಸಿದ್ದಾರೆ.

ವಿಶ್ವಸಂಸ್ಥೆಯಲ್ಲಿ 2030ರ ವೇಳೆಗೆ ಹಸಿವು ಮುಕ್ತ ದೇಶ ನಿರ್ಮಾದ ನಿರ್ಣಯವಾಗಿದ್ದು. ಈ ನಿರ್ಣಯಕ್ಕೆ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಸಹಿ ಹಾಕಿದ್ದಾರೆ. ಇದು ನಮ್ಮ ದೇಶದಲ್ಲಿಯೂ ಜಾರಿ ಇದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿಗೆ ತರಲಾಗಿದೆ. ಎಫ್ ಸಿ ಐನವರು ಗೋಡಾನ್ ನಲ್ಲಿ 29.5 ಲಕ್ಷ ಟನ್ ಅಕ್ಕಿ ಸ್ಟಾಕ್ ಇದ್ದರಿಂದಲೇ ಅನುಮತಿ ನೀಡಿತ್ತು. ಆದರೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅನ್ನವನ್ನು ಕಿತ್ತುಕೊಂಡಿದ್ದಾರೆ. ಬಡವರ ಅಕ್ಕಿಯನ್ನು ಮದ್ಯದ ಪ್ರಾಡಕ್ಟ್ ಎಥನಾಲ್ ತಯಾರಿಸಲು ಬಳಸುತ್ತಿದ್ದಾರೆ. ಆದರೆ ಜನರಿಗೆ ನೀಡಲು ಪ್ರಧಾನಿ ಮೋದಿ, ಅಮಿತ್ ಶಾಗೆ ಮನಸ್ಸು ಬರಲಿಲ್ಲ ಕಿಡಿಕಾರಿದರು.

ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಗಳನ್ನು ನಿಗದಿತ ಅವಧಿಯಲ್ಲಿಯೇ ಜನರಿಗೆ ತಲುಪಿಸುತ್ತೇವೆ. ಈಗಾಗಲೇ ಎರಡು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಆದರೆ ಕೇಂದ್ರ ಸರ್ಕಾರದ ಪ್ರಧಾನಿ ಮೋದಿ ಕೇವಲ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ, ಕೇಂದ್ರ ಮಂತ್ರಿ ವೀರಪ್ಪ ಮೊಯ್ಲಿ ಟೀಕಿಸಿದರು.

ಎತ್ತಿನಹೊಳೆ ಯೋಜನೆ ಬಿಜೆಪಿ, ಜೆಡಿಎಸ್ ನವರಿಗೆ ರಾಜಕೀಯದಾಳ:

ಕಾಂಗ್ರೆಸ್ ಸರ್ಕಾರ ಎತ್ತಿನಹೊಳೆ ಯೋಜನೆಗೆ ಅಗತ್ಯ ಅನುದಾನವನ್ನು ಕಾಲಮಿತಿಯಲ್ಲಿ ಬಿಡುಗಡೆ ಮಾಡಿ ಯೋಜನೆ ಕಾರ್ಯಗತಕ್ಕೆ ಶ್ರಮಿಸಿದೆ. ಬಿಜೆಪಿ, ಜೆಡಿಎಸ್ ನವರು ಟೀಕೆ ಮಾಡುವುದರಲ್ಲೇ ಕಾಲಕಳೆದು, ಚುನಾವಣಾ ವೇಳೆ ರಾಜಕೀಯ ದಾಳವನ್ನಾಗಿ ಮಾಡಿಕೊಂಡಿವೆ ಎಂದರು.

ಇನ್ನೂ ಎರಡು ಎಂಪಿ ಚುನಾವಣೆಗೆ ಸ್ಪರ್ಧಿಸಬಲ್ಲೆ:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ವೀರಪ್ಪ ಮೊಯ್ಲಿ ಅವರು ನನ್ನಲ್ಲಿ ಇನ್ನೂ ಎರಡು ಚುನಾವಣೆ ಅಂದರೆ 10 ವರ್ಷ ಕೆಲಸ ಮಾಡುವಷ್ಟು ಮಾನಸಿಕ, ದೈಹಿಕ ಶಕ್ತಿ ಎರಡು ಇದೆ. ಪಕ್ಷಕ್ಕಾಗಿ ದುಡಿದ ಯಾರಿಗೆ ಟಿಕೆಟ್ ನೀಡಿದರು ಸ್ವಾಗತ ಎಂದರು.

ಈ ವೇಳೆ ಮಾಜಿ‌ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಲಕ್ಷ್ಮಿಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

1 hour ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

17 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

18 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

2 days ago