ಪ್ರಧಾನಿ ನರೇಂದ್ರ ಮೋದಿ ಬೇಸಿಕ್ ಎಕನಾಮಿಕ್ಸ್ ಕೂಡ ತಿಳಿದಿಲ್ಲ: ಬಡವರ ಅನ್ನವನ್ನು ಪ್ರಧಾನಿ ಮೋದಿ ಕಿತ್ತುಕೊಂಡಿದ್ದಾರೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಟೀಕೆ

ಬಡವರ ಕೈಗೆ ಹಣ ಕೊಟ್ಟರೆ ಅದು ದ್ವಿಗುಣವಾಗುತ್ತದೆ. ಆದರೆ ಶ್ರೀಮಂತರಿಗೆ ಕೊಟ್ಟರೆ ದಾಸ್ತಾನು ಆಗುತ್ತದೆ. ಇದಕ್ಕೆ ಶಕ್ತಿ ಯೋಜನೆಯೆ ಸಾಕ್ಷಿ. ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳ ಲಾಭ ಹೆಚ್ಚಾಗ್ತಿದೆ. ಇದರ ಕುರಿತು ಬೆಸಿಕ್ ಎಕನಾಮಿಕ್ಸ್ ಕೂಡ ಪ್ರಧಾನಿ ಮೋದಿಗೆ ಅರ್ಥವಾಗಲ್ಲ. ನಾವು ಕೊಟ್ಟಿರುವ ಎಲ್ಲಾ ಆಶ್ವಾಸನೆ ಈಡೇರಿಸುತ್ತೇವೆ. ಅವರಿಗೆ ಕೇವಲ ಲೂಟಿ ಮಾಡುವುದಷ್ಟೆ ಗೊತ್ತಿರುವುದು ಎಂದು ಟೀಕೆ ಮಾಡಿದರು.

ನಗರದ ಪ್ರವಾಸಿ ಮಂದರದಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ ನಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನಾವು ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ದೇಶದ ಜನಸಾಮಾನ್ಯರ ಖಾತೆಗೆ 15 ಲಕ್ಷ ರೂ. ಜಮೆ ಮಾಡುತ್ತೇವೆ ಎಂದು ಹೇಳಿ ಈವರೆಗೆ ಮಾಡಿಲ್ಲ. ಉದ್ಯೋಗ ಸೃಷ್ಟಿಸಲಿದ್ದೇವೆ ಎಂದು ಹೇಳಿ ಇದ್ದ ಕೆಲಸಗಳನ್ನು ಕೂಡ ಕಿತ್ತಿಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರದಿಂದ ಬೇಸತ್ತ ಜನ ಬಿಜೆಪಿಯನ್ನು ಮಕಾಡೆ ಮಲಗಿಸಿದ್ದಾರೆ.

ವಿಶ್ವಸಂಸ್ಥೆಯಲ್ಲಿ 2030ರ ವೇಳೆಗೆ ಹಸಿವು ಮುಕ್ತ ದೇಶ ನಿರ್ಮಾದ ನಿರ್ಣಯವಾಗಿದ್ದು. ಈ ನಿರ್ಣಯಕ್ಕೆ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಸಹಿ ಹಾಕಿದ್ದಾರೆ. ಇದು ನಮ್ಮ ದೇಶದಲ್ಲಿಯೂ ಜಾರಿ ಇದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿಗೆ ತರಲಾಗಿದೆ. ಎಫ್ ಸಿ ಐನವರು ಗೋಡಾನ್ ನಲ್ಲಿ 29.5 ಲಕ್ಷ ಟನ್ ಅಕ್ಕಿ ಸ್ಟಾಕ್ ಇದ್ದರಿಂದಲೇ ಅನುಮತಿ ನೀಡಿತ್ತು. ಆದರೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅನ್ನವನ್ನು ಕಿತ್ತುಕೊಂಡಿದ್ದಾರೆ. ಬಡವರ ಅಕ್ಕಿಯನ್ನು ಮದ್ಯದ ಪ್ರಾಡಕ್ಟ್ ಎಥನಾಲ್ ತಯಾರಿಸಲು ಬಳಸುತ್ತಿದ್ದಾರೆ. ಆದರೆ ಜನರಿಗೆ ನೀಡಲು ಪ್ರಧಾನಿ ಮೋದಿ, ಅಮಿತ್ ಶಾಗೆ ಮನಸ್ಸು ಬರಲಿಲ್ಲ ಕಿಡಿಕಾರಿದರು.

ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಗಳನ್ನು ನಿಗದಿತ ಅವಧಿಯಲ್ಲಿಯೇ ಜನರಿಗೆ ತಲುಪಿಸುತ್ತೇವೆ. ಈಗಾಗಲೇ ಎರಡು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಆದರೆ ಕೇಂದ್ರ ಸರ್ಕಾರದ ಪ್ರಧಾನಿ ಮೋದಿ ಕೇವಲ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ, ಕೇಂದ್ರ ಮಂತ್ರಿ ವೀರಪ್ಪ ಮೊಯ್ಲಿ ಟೀಕಿಸಿದರು.

ಎತ್ತಿನಹೊಳೆ ಯೋಜನೆ ಬಿಜೆಪಿ, ಜೆಡಿಎಸ್ ನವರಿಗೆ ರಾಜಕೀಯದಾಳ:

ಕಾಂಗ್ರೆಸ್ ಸರ್ಕಾರ ಎತ್ತಿನಹೊಳೆ ಯೋಜನೆಗೆ ಅಗತ್ಯ ಅನುದಾನವನ್ನು ಕಾಲಮಿತಿಯಲ್ಲಿ ಬಿಡುಗಡೆ ಮಾಡಿ ಯೋಜನೆ ಕಾರ್ಯಗತಕ್ಕೆ ಶ್ರಮಿಸಿದೆ. ಬಿಜೆಪಿ, ಜೆಡಿಎಸ್ ನವರು ಟೀಕೆ ಮಾಡುವುದರಲ್ಲೇ ಕಾಲಕಳೆದು, ಚುನಾವಣಾ ವೇಳೆ ರಾಜಕೀಯ ದಾಳವನ್ನಾಗಿ ಮಾಡಿಕೊಂಡಿವೆ ಎಂದರು.

ಇನ್ನೂ ಎರಡು ಎಂಪಿ ಚುನಾವಣೆಗೆ ಸ್ಪರ್ಧಿಸಬಲ್ಲೆ:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ವೀರಪ್ಪ ಮೊಯ್ಲಿ ಅವರು ನನ್ನಲ್ಲಿ ಇನ್ನೂ ಎರಡು ಚುನಾವಣೆ ಅಂದರೆ 10 ವರ್ಷ ಕೆಲಸ ಮಾಡುವಷ್ಟು ಮಾನಸಿಕ, ದೈಹಿಕ ಶಕ್ತಿ ಎರಡು ಇದೆ. ಪಕ್ಷಕ್ಕಾಗಿ ದುಡಿದ ಯಾರಿಗೆ ಟಿಕೆಟ್ ನೀಡಿದರು ಸ್ವಾಗತ ಎಂದರು.

ಈ ವೇಳೆ ಮಾಜಿ‌ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಲಕ್ಷ್ಮಿಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

27 minutes ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

2 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

7 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago