ಪ್ರಧಾನಿ ನರೇಂದ್ರ ಮೋದಿ ಬೇಸಿಕ್ ಎಕನಾಮಿಕ್ಸ್ ಕೂಡ ತಿಳಿದಿಲ್ಲ: ಬಡವರ ಅನ್ನವನ್ನು ಪ್ರಧಾನಿ ಮೋದಿ ಕಿತ್ತುಕೊಂಡಿದ್ದಾರೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಟೀಕೆ

ಬಡವರ ಕೈಗೆ ಹಣ ಕೊಟ್ಟರೆ ಅದು ದ್ವಿಗುಣವಾಗುತ್ತದೆ. ಆದರೆ ಶ್ರೀಮಂತರಿಗೆ ಕೊಟ್ಟರೆ ದಾಸ್ತಾನು ಆಗುತ್ತದೆ. ಇದಕ್ಕೆ ಶಕ್ತಿ ಯೋಜನೆಯೆ ಸಾಕ್ಷಿ. ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳ ಲಾಭ ಹೆಚ್ಚಾಗ್ತಿದೆ. ಇದರ ಕುರಿತು ಬೆಸಿಕ್ ಎಕನಾಮಿಕ್ಸ್ ಕೂಡ ಪ್ರಧಾನಿ ಮೋದಿಗೆ ಅರ್ಥವಾಗಲ್ಲ. ನಾವು ಕೊಟ್ಟಿರುವ ಎಲ್ಲಾ ಆಶ್ವಾಸನೆ ಈಡೇರಿಸುತ್ತೇವೆ. ಅವರಿಗೆ ಕೇವಲ ಲೂಟಿ ಮಾಡುವುದಷ್ಟೆ ಗೊತ್ತಿರುವುದು ಎಂದು ಟೀಕೆ ಮಾಡಿದರು.

ನಗರದ ಪ್ರವಾಸಿ ಮಂದರದಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ ನಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನಾವು ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ದೇಶದ ಜನಸಾಮಾನ್ಯರ ಖಾತೆಗೆ 15 ಲಕ್ಷ ರೂ. ಜಮೆ ಮಾಡುತ್ತೇವೆ ಎಂದು ಹೇಳಿ ಈವರೆಗೆ ಮಾಡಿಲ್ಲ. ಉದ್ಯೋಗ ಸೃಷ್ಟಿಸಲಿದ್ದೇವೆ ಎಂದು ಹೇಳಿ ಇದ್ದ ಕೆಲಸಗಳನ್ನು ಕೂಡ ಕಿತ್ತಿಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರದಿಂದ ಬೇಸತ್ತ ಜನ ಬಿಜೆಪಿಯನ್ನು ಮಕಾಡೆ ಮಲಗಿಸಿದ್ದಾರೆ.

ವಿಶ್ವಸಂಸ್ಥೆಯಲ್ಲಿ 2030ರ ವೇಳೆಗೆ ಹಸಿವು ಮುಕ್ತ ದೇಶ ನಿರ್ಮಾದ ನಿರ್ಣಯವಾಗಿದ್ದು. ಈ ನಿರ್ಣಯಕ್ಕೆ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಸಹಿ ಹಾಕಿದ್ದಾರೆ. ಇದು ನಮ್ಮ ದೇಶದಲ್ಲಿಯೂ ಜಾರಿ ಇದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿಗೆ ತರಲಾಗಿದೆ. ಎಫ್ ಸಿ ಐನವರು ಗೋಡಾನ್ ನಲ್ಲಿ 29.5 ಲಕ್ಷ ಟನ್ ಅಕ್ಕಿ ಸ್ಟಾಕ್ ಇದ್ದರಿಂದಲೇ ಅನುಮತಿ ನೀಡಿತ್ತು. ಆದರೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅನ್ನವನ್ನು ಕಿತ್ತುಕೊಂಡಿದ್ದಾರೆ. ಬಡವರ ಅಕ್ಕಿಯನ್ನು ಮದ್ಯದ ಪ್ರಾಡಕ್ಟ್ ಎಥನಾಲ್ ತಯಾರಿಸಲು ಬಳಸುತ್ತಿದ್ದಾರೆ. ಆದರೆ ಜನರಿಗೆ ನೀಡಲು ಪ್ರಧಾನಿ ಮೋದಿ, ಅಮಿತ್ ಶಾಗೆ ಮನಸ್ಸು ಬರಲಿಲ್ಲ ಕಿಡಿಕಾರಿದರು.

ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಗಳನ್ನು ನಿಗದಿತ ಅವಧಿಯಲ್ಲಿಯೇ ಜನರಿಗೆ ತಲುಪಿಸುತ್ತೇವೆ. ಈಗಾಗಲೇ ಎರಡು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಆದರೆ ಕೇಂದ್ರ ಸರ್ಕಾರದ ಪ್ರಧಾನಿ ಮೋದಿ ಕೇವಲ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ, ಕೇಂದ್ರ ಮಂತ್ರಿ ವೀರಪ್ಪ ಮೊಯ್ಲಿ ಟೀಕಿಸಿದರು.

ಎತ್ತಿನಹೊಳೆ ಯೋಜನೆ ಬಿಜೆಪಿ, ಜೆಡಿಎಸ್ ನವರಿಗೆ ರಾಜಕೀಯದಾಳ:

ಕಾಂಗ್ರೆಸ್ ಸರ್ಕಾರ ಎತ್ತಿನಹೊಳೆ ಯೋಜನೆಗೆ ಅಗತ್ಯ ಅನುದಾನವನ್ನು ಕಾಲಮಿತಿಯಲ್ಲಿ ಬಿಡುಗಡೆ ಮಾಡಿ ಯೋಜನೆ ಕಾರ್ಯಗತಕ್ಕೆ ಶ್ರಮಿಸಿದೆ. ಬಿಜೆಪಿ, ಜೆಡಿಎಸ್ ನವರು ಟೀಕೆ ಮಾಡುವುದರಲ್ಲೇ ಕಾಲಕಳೆದು, ಚುನಾವಣಾ ವೇಳೆ ರಾಜಕೀಯ ದಾಳವನ್ನಾಗಿ ಮಾಡಿಕೊಂಡಿವೆ ಎಂದರು.

ಇನ್ನೂ ಎರಡು ಎಂಪಿ ಚುನಾವಣೆಗೆ ಸ್ಪರ್ಧಿಸಬಲ್ಲೆ:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ವೀರಪ್ಪ ಮೊಯ್ಲಿ ಅವರು ನನ್ನಲ್ಲಿ ಇನ್ನೂ ಎರಡು ಚುನಾವಣೆ ಅಂದರೆ 10 ವರ್ಷ ಕೆಲಸ ಮಾಡುವಷ್ಟು ಮಾನಸಿಕ, ದೈಹಿಕ ಶಕ್ತಿ ಎರಡು ಇದೆ. ಪಕ್ಷಕ್ಕಾಗಿ ದುಡಿದ ಯಾರಿಗೆ ಟಿಕೆಟ್ ನೀಡಿದರು ಸ್ವಾಗತ ಎಂದರು.

ಈ ವೇಳೆ ಮಾಜಿ‌ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಲಕ್ಷ್ಮಿಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

7 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

14 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

15 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago