ಪ್ರಧಾನಿ ನರೇಂದ್ರ ಮೋದಿ ಬೇಸಿಕ್ ಎಕನಾಮಿಕ್ಸ್ ಕೂಡ ತಿಳಿದಿಲ್ಲ: ಬಡವರ ಅನ್ನವನ್ನು ಪ್ರಧಾನಿ ಮೋದಿ ಕಿತ್ತುಕೊಂಡಿದ್ದಾರೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಟೀಕೆ

ಬಡವರ ಕೈಗೆ ಹಣ ಕೊಟ್ಟರೆ ಅದು ದ್ವಿಗುಣವಾಗುತ್ತದೆ. ಆದರೆ ಶ್ರೀಮಂತರಿಗೆ ಕೊಟ್ಟರೆ ದಾಸ್ತಾನು ಆಗುತ್ತದೆ. ಇದಕ್ಕೆ ಶಕ್ತಿ ಯೋಜನೆಯೆ ಸಾಕ್ಷಿ. ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳ ಲಾಭ ಹೆಚ್ಚಾಗ್ತಿದೆ. ಇದರ ಕುರಿತು ಬೆಸಿಕ್ ಎಕನಾಮಿಕ್ಸ್ ಕೂಡ ಪ್ರಧಾನಿ ಮೋದಿಗೆ ಅರ್ಥವಾಗಲ್ಲ. ನಾವು ಕೊಟ್ಟಿರುವ ಎಲ್ಲಾ ಆಶ್ವಾಸನೆ ಈಡೇರಿಸುತ್ತೇವೆ. ಅವರಿಗೆ ಕೇವಲ ಲೂಟಿ ಮಾಡುವುದಷ್ಟೆ ಗೊತ್ತಿರುವುದು ಎಂದು ಟೀಕೆ ಮಾಡಿದರು.

ನಗರದ ಪ್ರವಾಸಿ ಮಂದರದಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ ನಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನಾವು ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ದೇಶದ ಜನಸಾಮಾನ್ಯರ ಖಾತೆಗೆ 15 ಲಕ್ಷ ರೂ. ಜಮೆ ಮಾಡುತ್ತೇವೆ ಎಂದು ಹೇಳಿ ಈವರೆಗೆ ಮಾಡಿಲ್ಲ. ಉದ್ಯೋಗ ಸೃಷ್ಟಿಸಲಿದ್ದೇವೆ ಎಂದು ಹೇಳಿ ಇದ್ದ ಕೆಲಸಗಳನ್ನು ಕೂಡ ಕಿತ್ತಿಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರದಿಂದ ಬೇಸತ್ತ ಜನ ಬಿಜೆಪಿಯನ್ನು ಮಕಾಡೆ ಮಲಗಿಸಿದ್ದಾರೆ.

ವಿಶ್ವಸಂಸ್ಥೆಯಲ್ಲಿ 2030ರ ವೇಳೆಗೆ ಹಸಿವು ಮುಕ್ತ ದೇಶ ನಿರ್ಮಾದ ನಿರ್ಣಯವಾಗಿದ್ದು. ಈ ನಿರ್ಣಯಕ್ಕೆ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಸಹಿ ಹಾಕಿದ್ದಾರೆ. ಇದು ನಮ್ಮ ದೇಶದಲ್ಲಿಯೂ ಜಾರಿ ಇದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿಗೆ ತರಲಾಗಿದೆ. ಎಫ್ ಸಿ ಐನವರು ಗೋಡಾನ್ ನಲ್ಲಿ 29.5 ಲಕ್ಷ ಟನ್ ಅಕ್ಕಿ ಸ್ಟಾಕ್ ಇದ್ದರಿಂದಲೇ ಅನುಮತಿ ನೀಡಿತ್ತು. ಆದರೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅನ್ನವನ್ನು ಕಿತ್ತುಕೊಂಡಿದ್ದಾರೆ. ಬಡವರ ಅಕ್ಕಿಯನ್ನು ಮದ್ಯದ ಪ್ರಾಡಕ್ಟ್ ಎಥನಾಲ್ ತಯಾರಿಸಲು ಬಳಸುತ್ತಿದ್ದಾರೆ. ಆದರೆ ಜನರಿಗೆ ನೀಡಲು ಪ್ರಧಾನಿ ಮೋದಿ, ಅಮಿತ್ ಶಾಗೆ ಮನಸ್ಸು ಬರಲಿಲ್ಲ ಕಿಡಿಕಾರಿದರು.

ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಗಳನ್ನು ನಿಗದಿತ ಅವಧಿಯಲ್ಲಿಯೇ ಜನರಿಗೆ ತಲುಪಿಸುತ್ತೇವೆ. ಈಗಾಗಲೇ ಎರಡು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಆದರೆ ಕೇಂದ್ರ ಸರ್ಕಾರದ ಪ್ರಧಾನಿ ಮೋದಿ ಕೇವಲ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ, ಕೇಂದ್ರ ಮಂತ್ರಿ ವೀರಪ್ಪ ಮೊಯ್ಲಿ ಟೀಕಿಸಿದರು.

ಎತ್ತಿನಹೊಳೆ ಯೋಜನೆ ಬಿಜೆಪಿ, ಜೆಡಿಎಸ್ ನವರಿಗೆ ರಾಜಕೀಯದಾಳ:

ಕಾಂಗ್ರೆಸ್ ಸರ್ಕಾರ ಎತ್ತಿನಹೊಳೆ ಯೋಜನೆಗೆ ಅಗತ್ಯ ಅನುದಾನವನ್ನು ಕಾಲಮಿತಿಯಲ್ಲಿ ಬಿಡುಗಡೆ ಮಾಡಿ ಯೋಜನೆ ಕಾರ್ಯಗತಕ್ಕೆ ಶ್ರಮಿಸಿದೆ. ಬಿಜೆಪಿ, ಜೆಡಿಎಸ್ ನವರು ಟೀಕೆ ಮಾಡುವುದರಲ್ಲೇ ಕಾಲಕಳೆದು, ಚುನಾವಣಾ ವೇಳೆ ರಾಜಕೀಯ ದಾಳವನ್ನಾಗಿ ಮಾಡಿಕೊಂಡಿವೆ ಎಂದರು.

ಇನ್ನೂ ಎರಡು ಎಂಪಿ ಚುನಾವಣೆಗೆ ಸ್ಪರ್ಧಿಸಬಲ್ಲೆ:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ವೀರಪ್ಪ ಮೊಯ್ಲಿ ಅವರು ನನ್ನಲ್ಲಿ ಇನ್ನೂ ಎರಡು ಚುನಾವಣೆ ಅಂದರೆ 10 ವರ್ಷ ಕೆಲಸ ಮಾಡುವಷ್ಟು ಮಾನಸಿಕ, ದೈಹಿಕ ಶಕ್ತಿ ಎರಡು ಇದೆ. ಪಕ್ಷಕ್ಕಾಗಿ ದುಡಿದ ಯಾರಿಗೆ ಟಿಕೆಟ್ ನೀಡಿದರು ಸ್ವಾಗತ ಎಂದರು.

ಈ ವೇಳೆ ಮಾಜಿ‌ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಲಕ್ಷ್ಮಿಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

5 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

16 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

17 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

18 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

20 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago