ಪ್ರಧಾನಿ ನರೇಂದ್ರ ಮೋದಿ ಬೇಸಿಕ್ ಎಕನಾಮಿಕ್ಸ್ ಕೂಡ ತಿಳಿದಿಲ್ಲ: ಬಡವರ ಅನ್ನವನ್ನು ಪ್ರಧಾನಿ ಮೋದಿ ಕಿತ್ತುಕೊಂಡಿದ್ದಾರೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಟೀಕೆ

ಬಡವರ ಕೈಗೆ ಹಣ ಕೊಟ್ಟರೆ ಅದು ದ್ವಿಗುಣವಾಗುತ್ತದೆ. ಆದರೆ ಶ್ರೀಮಂತರಿಗೆ ಕೊಟ್ಟರೆ ದಾಸ್ತಾನು ಆಗುತ್ತದೆ. ಇದಕ್ಕೆ ಶಕ್ತಿ ಯೋಜನೆಯೆ ಸಾಕ್ಷಿ. ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳ ಲಾಭ ಹೆಚ್ಚಾಗ್ತಿದೆ. ಇದರ ಕುರಿತು ಬೆಸಿಕ್ ಎಕನಾಮಿಕ್ಸ್ ಕೂಡ ಪ್ರಧಾನಿ ಮೋದಿಗೆ ಅರ್ಥವಾಗಲ್ಲ. ನಾವು ಕೊಟ್ಟಿರುವ ಎಲ್ಲಾ ಆಶ್ವಾಸನೆ ಈಡೇರಿಸುತ್ತೇವೆ. ಅವರಿಗೆ ಕೇವಲ ಲೂಟಿ ಮಾಡುವುದಷ್ಟೆ ಗೊತ್ತಿರುವುದು ಎಂದು ಟೀಕೆ ಮಾಡಿದರು.

ನಗರದ ಪ್ರವಾಸಿ ಮಂದರದಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ ನಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನಾವು ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ದೇಶದ ಜನಸಾಮಾನ್ಯರ ಖಾತೆಗೆ 15 ಲಕ್ಷ ರೂ. ಜಮೆ ಮಾಡುತ್ತೇವೆ ಎಂದು ಹೇಳಿ ಈವರೆಗೆ ಮಾಡಿಲ್ಲ. ಉದ್ಯೋಗ ಸೃಷ್ಟಿಸಲಿದ್ದೇವೆ ಎಂದು ಹೇಳಿ ಇದ್ದ ಕೆಲಸಗಳನ್ನು ಕೂಡ ಕಿತ್ತಿಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರದಿಂದ ಬೇಸತ್ತ ಜನ ಬಿಜೆಪಿಯನ್ನು ಮಕಾಡೆ ಮಲಗಿಸಿದ್ದಾರೆ.

ವಿಶ್ವಸಂಸ್ಥೆಯಲ್ಲಿ 2030ರ ವೇಳೆಗೆ ಹಸಿವು ಮುಕ್ತ ದೇಶ ನಿರ್ಮಾದ ನಿರ್ಣಯವಾಗಿದ್ದು. ಈ ನಿರ್ಣಯಕ್ಕೆ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಸಹಿ ಹಾಕಿದ್ದಾರೆ. ಇದು ನಮ್ಮ ದೇಶದಲ್ಲಿಯೂ ಜಾರಿ ಇದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿಗೆ ತರಲಾಗಿದೆ. ಎಫ್ ಸಿ ಐನವರು ಗೋಡಾನ್ ನಲ್ಲಿ 29.5 ಲಕ್ಷ ಟನ್ ಅಕ್ಕಿ ಸ್ಟಾಕ್ ಇದ್ದರಿಂದಲೇ ಅನುಮತಿ ನೀಡಿತ್ತು. ಆದರೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅನ್ನವನ್ನು ಕಿತ್ತುಕೊಂಡಿದ್ದಾರೆ. ಬಡವರ ಅಕ್ಕಿಯನ್ನು ಮದ್ಯದ ಪ್ರಾಡಕ್ಟ್ ಎಥನಾಲ್ ತಯಾರಿಸಲು ಬಳಸುತ್ತಿದ್ದಾರೆ. ಆದರೆ ಜನರಿಗೆ ನೀಡಲು ಪ್ರಧಾನಿ ಮೋದಿ, ಅಮಿತ್ ಶಾಗೆ ಮನಸ್ಸು ಬರಲಿಲ್ಲ ಕಿಡಿಕಾರಿದರು.

ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಗಳನ್ನು ನಿಗದಿತ ಅವಧಿಯಲ್ಲಿಯೇ ಜನರಿಗೆ ತಲುಪಿಸುತ್ತೇವೆ. ಈಗಾಗಲೇ ಎರಡು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಆದರೆ ಕೇಂದ್ರ ಸರ್ಕಾರದ ಪ್ರಧಾನಿ ಮೋದಿ ಕೇವಲ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ, ಕೇಂದ್ರ ಮಂತ್ರಿ ವೀರಪ್ಪ ಮೊಯ್ಲಿ ಟೀಕಿಸಿದರು.

ಎತ್ತಿನಹೊಳೆ ಯೋಜನೆ ಬಿಜೆಪಿ, ಜೆಡಿಎಸ್ ನವರಿಗೆ ರಾಜಕೀಯದಾಳ:

ಕಾಂಗ್ರೆಸ್ ಸರ್ಕಾರ ಎತ್ತಿನಹೊಳೆ ಯೋಜನೆಗೆ ಅಗತ್ಯ ಅನುದಾನವನ್ನು ಕಾಲಮಿತಿಯಲ್ಲಿ ಬಿಡುಗಡೆ ಮಾಡಿ ಯೋಜನೆ ಕಾರ್ಯಗತಕ್ಕೆ ಶ್ರಮಿಸಿದೆ. ಬಿಜೆಪಿ, ಜೆಡಿಎಸ್ ನವರು ಟೀಕೆ ಮಾಡುವುದರಲ್ಲೇ ಕಾಲಕಳೆದು, ಚುನಾವಣಾ ವೇಳೆ ರಾಜಕೀಯ ದಾಳವನ್ನಾಗಿ ಮಾಡಿಕೊಂಡಿವೆ ಎಂದರು.

ಇನ್ನೂ ಎರಡು ಎಂಪಿ ಚುನಾವಣೆಗೆ ಸ್ಪರ್ಧಿಸಬಲ್ಲೆ:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ವೀರಪ್ಪ ಮೊಯ್ಲಿ ಅವರು ನನ್ನಲ್ಲಿ ಇನ್ನೂ ಎರಡು ಚುನಾವಣೆ ಅಂದರೆ 10 ವರ್ಷ ಕೆಲಸ ಮಾಡುವಷ್ಟು ಮಾನಸಿಕ, ದೈಹಿಕ ಶಕ್ತಿ ಎರಡು ಇದೆ. ಪಕ್ಷಕ್ಕಾಗಿ ದುಡಿದ ಯಾರಿಗೆ ಟಿಕೆಟ್ ನೀಡಿದರು ಸ್ವಾಗತ ಎಂದರು.

ಈ ವೇಳೆ ಮಾಜಿ‌ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಲಕ್ಷ್ಮಿಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

3 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

16 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

19 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

20 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

22 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

23 hours ago