Categories: ರಾಜ್ಯ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಿಡಿದೆದ್ದ ಸಿದ್ದರಾಮಯ್ಯ

ಕನ್ನಡಿಗರ ಆಸ್ತಿಯಾದ ನಂದಿನಿಯನ್ನು ಗುಜರಾತಿನ ಮಾರ್ವಾಡಿಗಳ ಅಮೂಲ್‌ ಉತ್ಪನ್ನಗಳಿಗೆ ಅಡ ಇಡಲು ಹೊರಟಿರುವ ಕೇಂದ್ರ, ರಾಜ್ಯ ಸರಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಮಾಜಿ‌‌ ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕನ್ನಡಿಗರು ಕಟ್ಟಿದ್ದ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳನ್ನು ಮುಕ್ಕಿ ತಿಂದಾಯಿತು. ಈಗ ನಮ್ಮ ನಂದಿನಿಯನ್ನು ಮುಕ್ಕಲು ಹೊರಟಿದ್ದೀರಾ?

ನಮ್ಮ ವಿಜಯಾ ಬ್ಯಾಂಕನ್ನು ನುಂಗಿದ ಬರೋಡಾ ಬ್ಯಾಂಕ್ ಗುಜರಾತ್ ನದ್ದು, ಬಂದರು, ಏರ್ ಪೋರ್ಟ್ ನುಂಗಿದ್ದ ಅದಾನಿ ಗುಜರಾತ್ ನವರು, ಈಗ ಕೆಎಂಎಫ್ ನುಂಗಲು ಹೊರಟಿರುವ ಅಮುಲ್ ಗುಜರಾತ್ ನದ್ದು.

ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?
ಈ ಗುಜರಾತಿ ಆಕ್ರಮಣ ಇನ್ನು ಸಹಿಸಲು ಸಾಧ್ಯ ಇಲ್ಲ. ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟವನ್ನು ಗೌರವಪೂರ್ವಕವಾಗಿ ನಿಲ್ಲಿಸಿ. ಕನ್ನಡಿಗರ ನಾಡಪ್ರೇಮ, ಸ್ವಾಭಿಮಾನವನ್ನು ಕೆಣಕಲು ಹೋಗಬೇಡಿ, ಪರಿಣಾಮ ನೆಟ್ಟಗಾಗದು..!

ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಅಮುಲ್ ಜೊತೆ ಕೆಎಂಎಫ್ ವಿಲೀನದ ಪ್ರಸ್ತಾವ ಮಾಡಿದ ದಿನದಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಪ್ರಹಾರ ಶುರುವಾಗಿದೆ, ಏನಿದು ನಿಮ್ಮ ಕರಾಮತ್ತು? ಇದ್ದಕ್ಕಿದ್ದ ಹಾಗೆ ಮಾರುಕಟ್ಟೆಯಿಂದ ನಂದಿನಿ ಹಾಲು ಮತ್ತಿತರ ಉತ್ಪನ್ನಗಳು ಮಾಯವಾಗುತ್ತಿವೆ.

ಗುಜರಾತ್ ನಿಂದ ನೀವು ಕಳುಹಿಸುತ್ತಿರುವ ಅಮುಲ್ ಹಾಲು ಮತ್ತು ಉತ್ಪನ್ನಗಳ ಮಾರಾಟದ ಬಿರುಸು ಹೆಚ್ಚಾಗಿದೆ. ಇವೆಲ್ಲವೂ ಸಹಜ ಬೆಳವಣಿಗೆಯೇ?
ಭರವಸೆ ನೀಡಿದಂತೆ ಯುವಜನರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡಲಿಲ್ಲ, ಬದಲಿಗೆ ನಮ್ಮ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳಲ್ಲಿನ ಕನ್ನಡಿಗರ ಉದ್ಯೋಗಗಳನ್ನು ಕಿತ್ತುಕೊಂಡಾಯಿತು. ಈಗ ರೈತರ ಹೊಟ್ಟೆಗೆ ಹೊಡೆಯುವ ಹುನ್ನಾರವೇ?

ನಾನು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಕ್ಷೀರಧಾರೆ ಮತ್ತು ಕ್ಷೀರಭಾಗ್ಯ ಯೋಜನೆಗಳು ಅನ್ನಭಾಗ್ಯ ಯೋಜನೆಯ ರೀತಿಯಲ್ಲಿಯೇ ನನಗೆ ಸಂತೃಪ್ತಿ ತಂದ ಯೋಜನೆಗಳು. ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸೆನ್ಸ್ ಕೊಡುವುದೇ ಮೋದಿ ಜೀ?
ಹಾಲಿನ ಸಬ್ಸಿಡಿಯನ್ನು ಲೀಟರಿಗೆ 5 ರೂ.ಹೆಚ್ಚಿಸಿ ನಾನು ಕ್ಷೀರಧಾರೆ ಯೋಜನೆ ಜಾರಿಗೊಳಿಸಿದ್ದೆ. ಇದರಿಂದಾಗಿ 20-12-2013 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017 ರ ವೇಳೆಗೆ 73 ಲಕ್ಷ ಲೀಟರಿಗೆ ಏರಿಕೆಯಾಗಿತ್ತು.
ಹಾಲು ಹೆಚ್ಚಾಯಿತು ಎಂದು ನಾವು ಖರೀದಿ ಕಡಿಮೆ ಮಾಡಿರಲಿಲ್ಲ. ಹೆಚ್ಚುವರಿ ಹಾಲನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ನೀಡಲು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಇದು ಗೋಸಂಪತ್ತು, ರೈತ ಸಂಪತ್ತು ಮತ್ತು ಮಕ್ಕಳ ಸಂಪತ್ತು ಬೆಳೆಸಿದ ನಮ್ಮ ಆಡಳಿತಶೈಲಿ. ನಿಮ್ಮದೇನು?

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹಾಲಿನ ಸಂಗ್ರಹ ಕಡಿಮೆಯಾಗುತ್ತಿದೆ. 99 ಲಕ್ಷ ಲೀಟರ್ ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರ್ ಸಂಗ್ರಹವಾಗುತ್ತಿದೆ. ಇದು ನೀವು ಮತ್ತು ಅಮಿತ್ ಶಾ ಕೂಡಿ ಕೆಎಂಎಫ್ ವಿರುದ್ಧ ಮಾಡಿರುವ ಷಡ್ಯಂತ್ರವೇ?
ಕೆಎಂಎಫ್ ಹಾಲು ಖರೀದಿಸುತ್ತಿಲ್ಲ ಎಂದು ಹಳ್ಳಿಗಳಲ್ಲಿ ಪಶುಪಾಲಕರು ಗೋಳಾಡುತ್ತಿದ್ದಾರೆ. ಹಾಲು ಸಂಗ್ರಹದ ಪ್ರಮಾಣ ಕಡಿಮೆಯಾಗಿರುವ ಕಾರಣದಿಂದಾಗಿ ಪ್ರತಿದಿನ ಸುಮಾರು 11 ಕೋಟಿ ರೂಪಾಯಿ ಹಣ ರೈತರ ಕೈತಪ್ಪಿ ಹೋಗುತ್ತಿದೆ. ಇದೇನಾ ನಿಮ್ಮ ರೈತರ ಆದಾಯ ದುಪ್ಟಟ್ಟುಗೊಳಿಸುವ ಯೋಜನೆ?

ಗುಜರಾತ್ ರಾಜ್ಯದ ಅಮುಲ್ ಪ್ರವೇಶದಿಂದ ನಂದಿನಿಯ ಬೇಡಿಕೆ ಇನ್ನಷ್ಟು ಕುಸಿದು ಕೆಎಂಎಫ್ ಹಾಲಿನ ಸಂಗ್ರಹ ಕಡಿಮೆಯಾಗಲಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರ ಪ್ರಮುಖ ಆದಾಯದ ಮೂಲವಾದ  ಹೈನುಗಾರಿಕೆಗೆ ಯಾಕೆ ಕಲ್ಲು ಹಾಕುತ್ತಿದ್ದೀರಾ?
ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಬರ್ವಾಲ್‌ಗಳು, ಬಿಂದ್ರಾಗಳು, ಜೈನ್‌ಗಳು, ಶರ್ಮಾಗಳ ಬೀಫ್ ರಫ್ತು ಪ್ರಮಾಣ ಸಾವಿರಾರು ಕೋಟಿಗಳಿಗೆ ಏರಿಕೆಯಾಗಿರುವುದಾಗಿ ವರದಿಗಳಿವೆ.  ಇವರ ಮೇಲಿರುವ ಕೃಪಕಟಾಕ್ಷ ಯಾರದ್ದು?

ನಮ್ಮ ಸರ್ಕಾರ ಐದು ವರ್ಷಗಳಲ್ಲಿ 1,356 ಕೋಟಿ ರೂಪಾಯಿಗಳನ್ನು ಹಾಲಿನ ಸಬ್ಸಿಡಿ ರೂಪದಲ್ಲಿ ರೈತರಿಗೆ ಕೊಟ್ಟಿತ್ತು. ಆದರೆ ಬಿಜೆಪಿ ಸರ್ಕಾರ 2020 -21 ರಲ್ಲಿ 1,186 ಕೋಟಿ ಖರ್ಚು ಮಾಡಿದ್ದರೆ 2023-24ಕ್ಕೆ ಕೇವಲ 1,200 ಕೋಟಿ ರೂ.ಗಳನ್ನು ಬಜೆಟ್ನಲ್ಲಿ ಒದಗಿಸಿ ಅನ್ಯಾಯ ಮಾಡಿದೆ.

ಕಳೆದ 5 ವರ್ಷಗಳಲ್ಲಿ ಪಶು ಆಹಾರದ ಬೆಲೆಗಳು ಮೂರು ಪಟ್ಟು ಹೆಚ್ಚಾಗಿವೆ. 2017-18ರಲ್ಲಿ 49 ಕೆ.ಜಿ ಬೂಸಾದ ಬೆಲೆ 450 ರೂ. ಇದ್ದದ್ದು ಈಗ 1,350 ರೂ.ಗಳಿಗೆ ಏರಿಕೆಯಾಗಿದೆ. 30 ಕೆಜಿ ಹಿಂಡಿಯ ಬೆಲೆ 400 ರೂ.ಗಳಿಂದ 1,500 ಕ್ಕೇ ಏರಿದೆ. ಏನಿದು?

ರಾಜ್ಯದ ಬಿಜೆಪಿ ಸರ್ಕಾರ ಸರ್ಕಾರಿ ಕಾವಲು ಜಮೀನುಗಳನ್ನು, ಡಿನೋಟಿಫೈ ಮಾಡಿ ಉಳ್ಳವರಿಗೆ, ಆರ್‌ಎಸ್‌ಎಸ್ ನವರಿಗೆ, ಬಂಡವಾಳಿಗರಿಗೆ ಹಂಚಲು ಪ್ರಾರಂಭಿಸಿದೆ. ಟಿಪ್ಪುಸುಲ್ತಾನನ ದೂರದೃಷ್ಟಿಯ ಫಲವಾದ ಲಕ್ಷಾಂತರ ಎಕರೆ ವಿಸ್ತೀರ್ಣದ ಅಮೃತ್ ಮಹಲ್ ಕಾವಲು ಪ್ರದೇಶ ಮಾಯವಾಗುತ್ತಿರುವುದು ಯಾರಿಂದ?

ಆರ್‌ಎಸ್‌ಎಸ್ ಗೆ ಸರ್ಕಾರಿ ಜಮೀನುಗಳನ್ನು ಮನಸೋ ಇಚ್ಛೆ ನೀಡಲಾಗುತ್ತಿದೆ. ನಮ್ಮ ರೈತರ ಜಾನುವಾರುಗಳಿಗೆ ಮೇಯಲು ಜಾಗ ಇಲ್ಲದಂತಾಗಿದೆ. ಇದನ್ನು ಕೂಡಲೆ ನಿಲ್ಲಿಸಿ ರಾಜ್ಯದಲ್ಲಿರುವ ಎಲ್ಲ ಮೇವಿನ ಕ್ಷೇತ್ರಗಳನ್ನು ಉಳಿಸಬೇಕು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

5 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

24 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago