ಪ್ರಧಾನಿ ನರೇಂದ್ರ ಮೋದಿ 3ನೇ ಅವಧಿಯ ಪ್ರಧಾನಿಯಾಗಿ ಕೆಲಸ ಆರಂಭ: ಕಿಸಾನ್ ಸಮ್ಮಾನ್ ಯೋಜನೆಯಡಿ 9.3 ಕೋಟಿ ರೈತರಿಗೆ ಒಟ್ಟು 20,000 ಕೋಟಿ ರೂಪಾಯಿ ಮೊತ್ತದ ಹಣ ಬಿಡುಗಡೆ ಮಾಡುವ ಕಡತಕ್ಕೆ ಸಹಿ

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಕೆಲಸ ಪ್ರಾರಂಭಿಸಿದ್ದಾರೆ. ನಿನ್ನೆಯಷ್ಟೇ(ಜೂ.09) ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರು ಇಂದು ಪ್ರಧಾನಿ ಕಚೇರಿಗೆ ಆಗಮಿಸಿ‌ ಮೊಟ್ಟಮೊದಲಿಗೆ ರೈತರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ರೈತರ ಖಾತೆಗೆ ಒಟ್ಟು 20,000 ಕೋಟಿ ರೂಪಾಯಿ ಜಮೆ ಮಾಡಲಾಗಿದೆ. ಕಿಸಾನ್ ನಿಧಿ ಸಮ್ಮಾನ್ 17ನೇ ಕಂತನ್ನು ಮೋದಿ ಬಿಡುಗಡೆ ಮಾಡಿದ್ದಾರೆ. ಬರೋಬ್ಬರಿ 9.3 ಕೋಟಿ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಜಮೆ ಮಾಡಿದ್ದಾರೆ.

ರೈತರಿಗೆ ಸಹಾಯ ಮಾಡುವ ಈ ಯೋಜನೆಯ 16 ಕಂತುಗಳಲ್ಲಿ ಇದುವರೆಗೆ 12 ಕೋಟಿ 33 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ 3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಡಿಬಿಟಿ ಮೂಲಕ ನೇರವಾಗಿ ವಿತರಿಸಲಾಗಿದೆ.

ಕಡತಕ್ಕೆ ಸಹಿ ಹಾಕಿದ ನಂತರ ಪ್ರಧಾನಿ ಮೋದಿ ಮಾತನಾಡಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರವಾಗಿದೆ. ಆದ್ದರಿಂದ ಅಧಿಕಾರ ವಹಿಸಿಕೊಂಡ ಮೇಲೆ ಸಹಿ ಮಾಡಿದ ಮೊದಲ ಕಡತ ರೈತ ಕಲ್ಯಾಣಕ್ಕೆ ಸಂಬಂಧಿಸಿದೆ. ಮುಂದಿನ ದಿನಗಳಲ್ಲಿ ನಾವು ರೈತರು ಮತ್ತು ಕೃಷಿ ಕ್ಷೇತ್ರಕ್ಕಾಗಿ ಇನ್ನಷ್ಟು ಕೆಲಸ ಮಾಡಬೇಕೆಂದು ಬಯಸುತ್ತೇವೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

37 minutes ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

44 minutes ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

13 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

14 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

1 day ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

1 day ago