ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಕೆಲಸ ಪ್ರಾರಂಭಿಸಿದ್ದಾರೆ. ನಿನ್ನೆಯಷ್ಟೇ(ಜೂ.09) ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರು ಇಂದು ಪ್ರಧಾನಿ ಕಚೇರಿಗೆ ಆಗಮಿಸಿ ಮೊಟ್ಟಮೊದಲಿಗೆ ರೈತರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ರೈತರ ಖಾತೆಗೆ ಒಟ್ಟು 20,000 ಕೋಟಿ ರೂಪಾಯಿ ಜಮೆ ಮಾಡಲಾಗಿದೆ. ಕಿಸಾನ್ ನಿಧಿ ಸಮ್ಮಾನ್ 17ನೇ ಕಂತನ್ನು ಮೋದಿ ಬಿಡುಗಡೆ ಮಾಡಿದ್ದಾರೆ. ಬರೋಬ್ಬರಿ 9.3 ಕೋಟಿ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಜಮೆ ಮಾಡಿದ್ದಾರೆ.
ರೈತರಿಗೆ ಸಹಾಯ ಮಾಡುವ ಈ ಯೋಜನೆಯ 16 ಕಂತುಗಳಲ್ಲಿ ಇದುವರೆಗೆ 12 ಕೋಟಿ 33 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ 3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಡಿಬಿಟಿ ಮೂಲಕ ನೇರವಾಗಿ ವಿತರಿಸಲಾಗಿದೆ.
ಕಡತಕ್ಕೆ ಸಹಿ ಹಾಕಿದ ನಂತರ ಪ್ರಧಾನಿ ಮೋದಿ ಮಾತನಾಡಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರವಾಗಿದೆ. ಆದ್ದರಿಂದ ಅಧಿಕಾರ ವಹಿಸಿಕೊಂಡ ಮೇಲೆ ಸಹಿ ಮಾಡಿದ ಮೊದಲ ಕಡತ ರೈತ ಕಲ್ಯಾಣಕ್ಕೆ ಸಂಬಂಧಿಸಿದೆ. ಮುಂದಿನ ದಿನಗಳಲ್ಲಿ ನಾವು ರೈತರು ಮತ್ತು ಕೃಷಿ ಕ್ಷೇತ್ರಕ್ಕಾಗಿ ಇನ್ನಷ್ಟು ಕೆಲಸ ಮಾಡಬೇಕೆಂದು ಬಯಸುತ್ತೇವೆ ಎಂದು ಹೇಳಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…