ಪ್ರಧಾನಿ ಮೋದಿಗೆ ಪತ್ರ‌ ಬರೆದ ಸಿಎಂ ಸಿದ್ದರಾಮಯ್ಯ: ಯಾವ ವಿಚಾರಕ್ಕೆ ಪತ್ರ ಬರೆಯಲಾಗಿದೆ…?

ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ಪತ್ರದಲ್ಲೇನಿದೆ….

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೇ,

ವಿಷಯ: ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮನವಿ

ಕರ್ನಾಟಕದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆ ಸಾರುವ ವೀರ ರಾಣಿ ಕಿತ್ತೂರು ಚೆನ್ನಮ್ಮನ ಸಮಾಧಿ ತಾಣ ಇರುವುದನ್ನು ಸಮಸ್ತ ಕನ್ನಡಿಗರ ಪರವಾಗಿ ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಸಶಸ್ತ್ರ ಹೋರಾಟವನ್ನು ಮುನ್ನಡೆಸಿದ ಮಹಿಳೆಯರಲ್ಲಿ ರಾಣಿ ಚೆನ್ನಮ್ಮ ಮೊದಲಿಗರು. ಅವರ ಶೌರ್ಯ ಮತ್ತು ಅದಮ್ಯ ಚೈತನ್ಯ ಯುವಜನತೆಗೆ ಸ್ಫೂರ್ತಿದಾಯಕವಾಗಿದೆ.

ಈ ಅಪ್ರತಿಮ ನಾಯಕಿಯ ಸಮಾಧಿಯು ಕೇವಲ ವಿಶ್ರಾಂತಿ ಸ್ಥಳವಲ್ಲ, ಬದಲಾಗಿ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಪ್ರತಿನಿಧಿಸುವ ಮಹಾನ್ ಶಕ್ತಿ ಸ್ಥಳವಾಗಿದೆ. 1824ರಲ್ಲಿ ಬ್ರಿಟಿಷ್‌ ಈಸ್ಟ್‌ ಇಂಡಿಯಾ ಕಂಪನಿ ವಿರುದ್ಧ ರಾಣಿ ಚೆನ್ನಮ್ಮ ಕೆಚ್ಚೆದೆಯಿಂದ ಹೋರಾಡಿದ ಕಾರಣ ಇಂದಿಗೂ ಈ ಸಮಾಧಿ ತಾಣವು ಧೈರ್ಯ ಮತ್ತು ತ್ಯಾಗದ ಸಂಕೇತವಾಗಿ ನಿಂತಿದೆ.

ಹೀಗಾಗಿ, ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮನವಿ ಮಾಡುತ್ತೇನೆ. ಈ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿನ ಅವರ ಹೋರಾಟವನ್ನು ಸ್ಮರಿಸಿ, ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಗೌರವಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

ರಾಣಿ ಚೆನ್ನಮ್ಮನ ಸಮಾಧಿ ತಾಣವು ಅಪಾರ ಐತಿಹಾಸಿಕ ಮಹತ್ವವನ್ನು ಹೊಂದಿದೆ. ಆದಾಗ್ಯೂ, ಅದಕ್ಕೆ ಸರಿಯಾದ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯವಿದೆ. ಈ ಸಮಾಧಿ ತಾಣವು ರಾಷ್ಟ್ರೀಯ ಸ್ಮಾರಕ ಆಗುವುದರಿಂದ ದೇಶದ ಪ್ರೇಕ್ಷಣಿಯ ಸ್ಥಳವಾಗಿಯೂ ಗುರುತಿಸಿಕೊಳ್ಳುತ್ತದೆ. ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವುದರೊಂದಿಗೆ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆಯನ್ನು ನೀಡುತ್ತದೆ. ಇದಕ್ಕೂ ಮುಖ್ಯವಾಗಿ ರಾಣಿ ಚೆನ್ನಮ್ಮಳ ಧೈರ್ಯ, ಶೌರ್ಯ, ತ್ಯಾಗವನ್ನು ಮುಂದಿನ ಪೀಳಿಗೆಗೂ ತಿಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಸ್ವಾತಂತ್ರ್ಯ ಹೋರಾಟದ ಮೂಲಕ ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಯನ್ನು ಗೌರವಿಸುವಲ್ಲಿ ಇದು ಒಂದು ಸ್ಮರಣೀಯ ಹೆಜ್ಜೆಯಾಗಿದೆ. ಅಲ್ಲದೇ ಪ್ರಾಚೀನ ಸ್ಮಾರಕಗಳು ಮತ್ತು ಐತಿಹಾಸಿಕ ತಾಣಗಳನ್ನು ಸಂರಕ್ಷಿಸುವಲ್ಲಿ ಭಾರತ ಸರ್ಕಾರದ ಬದ್ಧತೆಯನ್ನು ಇದು ಖಾತ್ರಿಪಡಿಸುತ್ತದೆ.

ಹೀಗಾಗಿ ಈ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವೆಂದು ಮೌಲ್ಯಮಾಪನ ಮಾಡುವ ಮತ್ತು ಘೋಷಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ತಾವು ಸಂಸ್ಕೃತಿ ಸಚಿವಾಲಯ ಮತ್ತು ಭಾರತೀಯ ಪುರಾತತ್ವ ಇಲಾಖೆಗೆ ನಿರ್ದೇಶನ ನೀಡಬೇಕೆಂದು ವಿನಂತಿಸುತ್ತೇನೆ. ಈ ಮೂಲಕ ಶ್ರೀಮಂತ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆ ಹೊಂದಿರುವ ಕರ್ನಾಟಕವು ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಉತ್ಸುಕವಾಗಿದೆ.

Ramesh Babu

Journalist

Recent Posts

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ: ದೂರವಾಣಿ ಸಂಖ್ಯೆ ಇಲ್ಲಿದೆ ನೋಡಿ

ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿಗೆ…

35 minutes ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ-‌ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಕಲಾವತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ…

44 minutes ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27ನೇ ಸಾಲಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ(ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ಲೈನ್…

3 hours ago

ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ: ಮಾದಿಗ ಮಹಾಸಭಾ ವತಿಯಿಂದ ಬೈಕ್ ರ್ಯಾಲಿ, ಬಾಬಾ ಸಾಹೇಬರಿಗೆ ಮಾಲಾರ್ಪಣೆ

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ಮಾದಿಗ ಮಹಾಸಭಾ ವತಿಯಿಂದ…

4 hours ago

ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ: ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವು

ಕ್ಯಾಂಟರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಸ್ನೇಹಿತರ ಜೊತೆಯಲ್ಲಿ ದೇವಾಲಯಕ್ಕೆ ಹೊರಟಿದ್ದ ಯುವಕ ಸಾವನ್ನಪ್ಪಿದ್ದಾನೆ. ಹನುಮಂತ (17) ಮೃತ…

7 hours ago

2100 ಎಕರೆ ಭೂ ಸ್ವಾಧೀನ ಕೈಬಿಡಬೇಕು- ತಪ್ಪು ಸರ್ವೇ ವರದಿ ನೀಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಸಿಎಂಗೆ ಶಾಸಕ ಧೀರಜ್ ಮುನಿರಾಜ್ ಮನವಿ

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳಲ್ಲಿ ಸುಮಾರು 2100 ಎಕರೆ ಕೃಷಿ ಭೂಮಿಯನ್ನು…

7 hours ago