ಪ್ರಧಾನಿ ಮೋದಿಯವರೇ… ರಾಷ್ಟ್ರಮಟ್ಟದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ- ಸಿಎಂ ಸಿದ್ದರಾಮಯ್ಯ

‘‘ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ’’ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಎಸ್ ಸಿಎಸ್‌ಪಿ/ಟಿಎಸ್ ಪಿ) ಕಾಯ್ದೆಯನ್ನು ಜಾರಿಗೆ ತಂದು, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡಿ, ಅದರ ನಂತರ ನಮ್ಮ ದಲಿತ ಕಾಳಜಿಯನ್ನು ಪ್ರಶ್ನಿಸಿ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕಿಡಿಕಾರಿದ್ದಾರೆ.

ಪ್ರಸಕ್ತ ಸಾಲಿನ ನಮ್ಮ ಸರ್ಕಾರದ ಬಜೆಟ್ ಗಾತ್ರ ರೂ.3.71,383 ಕೋಟಿ, ಅದರಲ್ಲಿ ರೂ.39,121 ಕೋಟಿಯನ್ನು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಮೀಸಲಿಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ರೂ.48.21 ಲಕ್ಷ ಕೋಟಿಯಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ ರೂ.2,90,401 ಕೋಟಿ ಮಾತ್ರ. ಪ್ರಧಾನಿ ನರೇಂದ್ರ ಮೋದಿ ಅವರೇ, ಇದು ನಿಮ್ಮ ಸರ್ಕಾರದ ದಲಿತ ಕಾಳಜಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಗಿಂತ ಮೊದಲು ರಾಜ್ಯದಲ್ಲಿ ದಲಿತ ಸಮುದಾಯದ ಕಲ್ಯಾಣಕ್ಕಾಗಿಯೇ ಜಾರಿಯಲ್ಲಿದ್ದ ವಿಶೇಷ ಘಟಕ ಯೋಜನೆಯನ್ವಯ 2013-14ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.8,616 ಕೋಟಿಯಾಗಿದ್ದರೆ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಯಾದ ವರ್ಷ (2014-2015)ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ ರೂ.15,894 ಕೋಟಿ. ಈ ಮೊತ್ತ ಈಗ ಹೆಚ್ಚು ಕಡಿಮೆ 40,000 ಕೋಟಿ ರೂಪಾಯಿಗೆ ತಲುಪಿದೆ. ಇದು ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಇರುವ ದಲಿತರ ಬಗೆಗಿನ ಕಾಳಜಿ ಎಂದು ಹೇಳಿದ್ದಾರೆ.

ಇಷ್ಟು ಮಾತ್ರವಲ್ಲ, ನಮ್ಮ ಸರ್ಕಾರ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಸಮಿತಿ ಶಿಫಾರಸಿನನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 3ರಿಂದ 7ಕ್ಕೆ ಹೆಚ್ಚಿಸಿದೆ, ಒಂದು ಕೋಟಿ ರೂಪಾಯಿ ವರೆಗಿನ ಸರ್ಕಾರಿ ಗುತ್ತಿಗೆಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಗುತ್ತಿಗೆದಾರರಿಗೆ ಶೇಕಡಾ 24.1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಗುತ್ತಿಗೆ ಆಧಾರದ ನೇಮಕಾತಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾತಿ ಅನ್ವಯಿಸಲು ನಿರ್ಧರಿಸಲಾಗಿದೆ. ಎಸ್‌ಸಿ/ಎಸ್‌ಟಿ ಕುಟುಂಬಗಳಿಗೆ ಸರ್ಕಾರ ಮಂಜೂರು ಮಾಡಿದ ಜಮೀನುಗಳ ಅನಧಿಕೃತ ಪರಭಾರೆಯನ್ನು ತಡೆಯಲು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಹಂಚಿಕೆಯಾಗುವ ಕೈಗಾರಿಕಾ ನಿವೇಶನಕ್ಕೆ ಶೇಕಡಾ 75ರಷ್ಟು ಸಹಾಯಧನ ನೀಡಲಾಗುತ್ತಿದೆ. ಇವೆಲ್ಲವೂ ಅನುಷ್ಠಾನಕ್ಕೆ ಬಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದರು.

ಕರ್ನಾಟಕದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಲು ದೊಡ್ಡ ಮಟ್ಟದ ಜನಾಂದೋಲಗಳೇನು ನಡೆದಿರಲಿಲ್ಲ. ರಾಜ್ಯದ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಮೇಲಿನ ಪ್ರಾಮಾಣಿಕ ಕಾಳಜಿಯ ಕಾರಣಕ್ಕಾಗಿ ಸ್ವಯಂ ಇಚ್ಛೆಯಿಂದ 2013ರ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ಅಧಿಕಾರಕ್ಕೆ ಬಂದ ನಂತರ 2014-15ರಲ್ಲಿ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದು ನಾವು ನುಡಿದಂತೆ ನಡೆದಿದ್ದೆವು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಅವರೇ, ಈಗಲೂ ಕಾಲ ಮಿಂಚಿಲ್ಲ, ರಾಷ್ಟ್ರಮಟ್ಟದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

36 minutes ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

7 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

17 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

22 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

23 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

1 day ago