ಪ್ರಧಾನಿ ಮೋದಿ ಅವರನ್ನ ಸಿಎಂ ಸಿದ್ದರಾಮಯ್ಯ ಭೇಟಿ: ಮೋದಿಗೆ ಪತ್ರ ರವಾನೆ: ಪತ್ರದಲ್ಲಿ ಏನಿದೆ…?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ನೀಡಿದ ಪತ್ರದ ಸಾರಾಂಶ ಹೀಗಿದೆ.

ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ ಒದಗಿಸಿರುವ ನಬಾರ್ಡ್ ನೆರವು ಕಡಿತಗೊಳಿಸಿರುವುದರಿಂದ ರಾಜ್ಯದ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಿದೆ. 2023-24ರ ಸಾಲಿನಲ್ಲಿ ರೂ.5600 ಕೋಟಿಗಳನ್ನು ಮಂಜೂರು ಮಾಡಲಾಗಿತ್ತು.
2024 -25ರ ಸಾಲಿನಲ್ಲಿ ರೂ. 2,340 ಕೋಟಿಗಳನ್ನು ಮಂಜೂರು ಮಾಡಲಾಗಿದೆ. ಇದರಿಂದಾಗಿ ನಬಾರ್ಡ್ ನೆರವು ಪ್ರಸಕ್ತ ಸಾಲಿನಲ್ಲಿ ಶೇ.58 ರಷ್ಟು ಕಡಿತವಾಗಿದೆ.

ರಾಜ್ಯವು ಹೆಚ್ಚುವರಿ ಬಡ್ಡಿ ಸಹಾಯಧನವನ್ನು ನೀಡದ ಹೊರತು, ಇದು ರಾಜ್ಯದ ರೈತಾಪಿ ವರ್ಗದ ಆರ್ಥಿಕ ವೆಚ್ಚದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ, ರಾಜ್ಯದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಈ ಕೂಡಲೇ ಇದನ್ನು ಪರಾಮರ್ಶಿಸಿ ನಬಾರ್ಡ್ ನೆರವು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ರಾಜ್ಯದ ರೈತರು ಅಲ್ಪಾವಧಿ ಬೆಳೆ ಸಾಲಗಳನ್ನು ಪಡೆಯಲು ಯಾವುದೇ ರೀತಿಯ ತೊಂದರೆಯಾಗದಂತೆ ತಾವು ಹಣಕಾಸು ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡುತ್ತಿದ್ದೇನೆ.

ಎರಡನೆಯದಾಗಿ, ಈ ಮೊದಲೇ ತಮ್ಮಲ್ಲಿ ಮನವಿ ಮಾಡಿರುವಂತೆ, ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ 2023-24 ರ ಕೇಂದ್ರ ಬಜೆಟ್ ನಲ್ಲಿ ಅನುಮೋದನೆಯಾಗಿರುವ ರೂ. 5300 ಕೋಟಿ ಅನುದಾನ ಬಿಡುಗಡೆ ಮಾಡುವ ಕೇಂದ್ರ ಹಣಕಾಸು ಸಚಿವರ ಭರವಸೆ ಈವರೆಗೆ ಈಡೇರಿಲ್ಲ. ತ್ವರಿತ ನೀರಾವರಿ ಲಾಭ ಕಾರ್ಯಕ್ರಮದಡಿ ನೆರವು ಒದಗಿಸಲು ಸಚಿವ ಸಂಪುಟದ ಟಿಪ್ಪಣಿಯನ್ನು ಸಿದ್ಧಮಾಡಿರುವ ಬಗ್ಗೆ ತಿಳಿದುಬಂದಿದೆ.

ಪ್ರಸಕ್ತ ಯೋಜನೆ ಶೀಘ್ರ ಅನುಮೋದನೆಗೊಂಡಲ್ಲಿ ಭದ್ರಾ ಮೇಲ್ದಂಡೆ ಯೋಜನೆ ವ್ಯಾಪ್ತಿಗೆ ಒಳಪಡುವ ಮಧ್ಯ ಕರ್ನಾಟಕದ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ. ಆದ್ದರಿಂದ ಈ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡಲು ತಮ್ಮಲ್ಲಿ ಮನವಿ ಮಾಡುತ್ತೇನೆ.

ಮೂರನೆಯದಾಗಿ ಶುಷ್ಕ ವಲಯಕ್ಕೆ ಸೇರಿದ ಕರ್ನಾಟಕದಂತಹ ರಾಜ್ಯದಲ್ಲಿ ನೀರಾವರಿ ಸೌಲಭ್ಯ ಸಾಮರ್ಥ್ಯಗಳನ್ನು ಸಬಲಗೊಳಿಸುವುದು ಅತ್ಯಗತ್ಯವಾಗಿದೆ. ಈ ಕಾರ್ಯವನ್ನು ಬಹುತೇಕ ರಾಜ್ಯವು ತನ್ನ ಸಂಪನ್ಮೂಲಗಳಿಂದಲೇ ಭರಿಸುತ್ತಿದೆ. ಆದರೆ, ಜಲ ಶಕ್ತಿ ಸಚಿವಾಲಯ ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಗಳಲ್ಲಿ ಯೋಜನೆಗಳ ತೀರುವಳಿ ಬಾಕಿ ಇರುವುದು ನಮ್ಮ ಯೋಜನೆಗಳನ್ನು ವಿಳಂಬ ಮಾಡಿದೆ.

ಕಾವೇರಿ ನದಿ ಪಾತ್ರದ ಮೇಕೇದಾಟು ಯೋಜನೆ ಹಾಗೂ ಮಹದಾಯಿ ನದಿಯ ಕಳಸಾಬಂಡೂರಿ ಯೋಜನೆಗಳಗತ್ತ ತಾವು ತುರ್ತು ಗಮನ ಹರಿಸಬೇಕಿದೆ ಜಲಶಕ್ತಿ ಹಾಗೂ ಅರಣ್ಯ, ಪರಿಸರ ಸಚಿವಾಲಯಗಳಿಂದ ಶೀಘ್ರ ತೀರುವಳಿ ದೊರಕಿಸಿಕೊಡಲು ಕೋರಲಾಗಿದೆ.

ನಾಲ್ಕನೇಯದ್ದಾಗಿ, ಕರ್ನಾಟಕ ಅತ್ಯಂತ ವೇಗವಾಗಿ ನಗರೀಕರಣಗೊಳ್ಳುತ್ತಿರುವ ರಾಜ್ಯವಾಗಿದ್ದು, 13 ಮಹಾನಗರ ಪಾಲಿಕೆಗಳಿದ್ದು, ಈ ಎರಡನೇ ಸ್ತರದ ನಗರಗಳ ಅಭಿವೃದ್ಧಿಗೆ ಹೆಚ್ಚಿನ ಬಂಡವಾಳ ಅಗತ್ಯವಿದೆ. ಕರ್ನಾಟಕ ರಾಜ್ಯ ಸರ್ಕಾರ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಮುಂದಿನ ಮೂರು ವರ್ಷಗಳ ಅವಧಿಗೆ 2ಸಾವಿರ ಕೋಟಿ ರೂ. ಈ ಉದ್ದೇಶಕ್ಕಾಗಿ ತೆಗೆದಿರಿಸಿದೆ. ಆದರೆ ಈ ನಗರಗಳಿಗೆ ಸಮಗ್ರ ಮೂಲಸೌಕರ್ಯಗಳನ್ನು ಕಲ್ಪಿಸಲು ಈ ಅನುದಾನ ಸಾಕಾಗುವುದಿಲ್ಲ. ಆದ್ದರಿಂದ ಅಮೃತ್ ಅಥವಾ ಇನ್ನಾವುದೇ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ 10ಸಾವಿರ ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಲು ನಾನು ಕೋರುತ್ತೇನೆ.

ಕೊನೆಯದ್ದಾಗಿ, 15ನೇ ಹಣಕಾಸು ಆಯೋಗ ಕರ್ನಾಟಕ ರಾಜ್ಯಕ್ಕೆ ಸರಿಯಾದ ನ್ಯಾಯ ಒದಗಿಸುತ್ತಿಲ್ಲ ಎಂದು ನಾವು ನಿರಂತರವಾಗಿ ಪ್ರಸ್ತಾಪಿಸುತ್ತಾ ಬಂದಿದ್ದೇವೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯದ ಪಾಲನ್ನು ಶೇ.1ರಷ್ಟು ಕಡಿಮೆ ಮಾಡಿರುವ ಶಿಫಾರಸ್ಸನ್ನು ಹಣಕಾಸು ಇಲಾಖೆ ಸರಿಪಡಿಸಬೇಕಾಗಿದೆ. ಹಣಕಾಸು ಆಯೋಗವು ರಾಜ್ಯಕ್ಕೆ ಹಂಚಿಕೆ ಕಡಿಮೆಯಾಗಿರುವುದಕ್ಕೆ ಪರಿಹಾರವಾಗಿ ರೂ.5495 ಕೋಟಿ ಅನುದಾನ ಬಿಡುಗಡೆಗೆ ಮತ್ತು ಪೆರಿಫೆರಲ್ ರಿಂಗ್ ರಸ್ತೆ ಮತ್ತು ನೀರಿನ ಮೂಲಗಳ ಪುನರುಜ್ಜೀವನಕ್ಕೆ ರೂ.6ಸಾವಿರ ಕೋಟಿ ವಿಶೇಷ ಅನುದಾನ ನೀಡುವ ಬಗ್ಗೆ ಶಿಫಾರಸು ಮಾಡಿದೆ. ಕನಿಷ್ಟ ಪಕ್ಷ ಹಣಕಾಸು ಆಯೋಗ ಈ ಎರಡು ಶಿಫಾರಸ್ಸುಗಳನ್ನು ಒಪ್ಪಿಕೊಳ್ಳಬೇಕಾಗಿದೆ.ನಾವು ಇನ್ನೂ 15ನೇ ಹಣಕಾಸು ಆಯೋಗದ ಅವಧಿಯಲ್ಲಿರುವುದರಿಂದ ರಾಜ್ಯಕ್ಕೆ ಹೆಚ್ಚುವರಿ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ನಿರ್ದೇಶನ ನೀಡುವಂತೆ ಪುನಃ ನಾನು ಮನವಿ ಮಾಡುತ್ತೇನೆ.

16ನೇ ಹಣಕಾಸು ಆಯೋಗದ ಅವಧಿಯಲ್ಲಿ ಕೇಂದ್ರದ ತೆರಿಗೆ ಪಾಲಿಗೆ ಹೆಚ್ಚಿನ ದೇಣಿಗೆ ಒದಗಿಸುವ ರಾಜ್ಯಗಳಿಗೆ, ಕೇಂದ್ರದ ತೆರಿಗೆ ಪಾಲಿನಲ್ಲಿ ಭಾರೀ ಕಡಿತ ಮಾಡಿ ಶಿಕ್ಷಿಸದಂತೆ, ಹಣಕಾಸು ಇಲಾಖೆ ಖಾತ್ರಿಪಡಿಸಬೇಕು.

ನಮ್ಮ ಮನವಿಗೆ ಸೂಕ್ತ ಪ್ರತಿಕ್ರಿಯೆ ದೊರಕುವ ನಿರೀಕ್ಷೆ ನಮ್ಮದು.

Ramesh Babu

Journalist

Recent Posts

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

3 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

4 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

6 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

23 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

1 day ago