ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶಗೌಡ ಅವರ ನೇತೃತ್ವದಲ್ಲಿ ಸರಣಿ ಸಭೆಗಳನ್ನು ನಡೆಸಿ, ಚಿಕ್ಕಬಳ್ಳಾಪುರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಮತಯಾಚನೆ ಮಾಡಲಾಯಿತು.
ಹೊನ್ನಾವರ ಗ್ರಾಮದ ವೀರಭದ್ರಸ್ವಾಮಿ ದೇವಾಲಯ ಆವರಣದಲ್ಲಿ ಜೆಡಿಎಸ್- ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರ ಸಭೆ ನಡೆಸಿದ ಮುಖಂಡರು, 3ನೇ ಅವಧಿಗೆ ಮೋದಿ ಪ್ರಧಾನಿಯಾಗಿ ದೇಶವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಮತ ಹಾಕುವಂತೆ ಮನವಿ ಮಾಡಿದರು.
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಮಾತನಾಡಿ, ಚಿಕ್ಕಬಳ್ಳಾಪುರದಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನೀಡಿರುವ ಆಶ್ವಾಸನೆಗಳನ್ನು ಮನದಲ್ಲಿಟ್ಟುಕೊಂಡು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಕೆಲಸ ಮಾಡಬೇಕು. ಸ್ಥಳೀಯವಾಗಿ ಉಭಯ ಪಕ್ಷಗಳ ಮುಖಂಡರ ಎಷ್ಟೇ ವೈಮನಸ್ಸಿದ್ದರೂ ಮರೆತು ಪ್ರಧಾನಿ ಮೋದಿ ಕೈ ಬಲಪಡಿಸಲು ಸುಧಾಕರ್ ಅವರನ್ನು ಗೆಲ್ಲಿಸಬೇಕು ಎಂದು ಕೋರಿದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ, ಕಾಂಗ್ರೆಸ್ ಸರ್ಕಾರವು ಗ್ಯಾರೆಂಟಿ ಯೋಜನೆಗಳಿಗೆ ರಾಜ್ಯದ ಜನರ ತೆರಿಗೆ ಹಣ ಬಳಸುತ್ತಿದ್ದು, ಬೊಕ್ಕಸ ಬರಿದು ಮಾಡುತ್ತಿದೆ. ಉಚಿತ ಗ್ಯಾರೆಂಟಿಗಳಿಗೆ ಯಾವುದೇ ಗ್ಯಾರೆಂಟಿ ಇಲ್ಲ. ಸುಳ್ಳು ಭರವಸೆಗಳ ಮೂಲಕ ಜನರ ದಾರಿ ತಪ್ಪಿಸಲಾಗುತ್ತಿದೆ. ಹಿಂದೂ ಸಮಾಜದ ಹೆಣ್ಣುಮಕ್ಕಳ ಮೇಲೆ ನಿತ್ಯ ದೌರ್ಜನ್ಯ, ಕೊಲೆ, ಅತ್ಯಾಚಾರದಂತಹ ಕುಕೃತ್ಯಗಳು ನಡೆಯುತ್ತಿವೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಎಂದು ಹೇಳಿದರು.
ನಂತರ ಕನಸವಾಡಿ, ಸಿ.ಡಿ.ಅಗ್ರಹಾರ, ದೊಡ್ಡತುಮಕೂರು, ಕಾಡನೂರು, ಹಾದ್ರಿಪುರ ಕೆಸ್ತೂರು ಹಾಗೂ ಕೊಡಿಗೇಹಳ್ಳಿ ಗ್ರಾಮ ಪಂಚಾಯ್ತಿ ಕೇಂದ್ರ ಸ್ಥಾನಗಳಲ್ಲಿ ಎನ್ ಡಿಎ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಪ್ರಚಾರ ನಡೆಸಿ, ಮತಯಾಚಿಸಲಾಯಿತು.
ಹೊನ್ನಾವರ ಗ್ರಾ.ಪಂ.ವ್ಯಾಪ್ತಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಬಿಜೆಪಿ ಮುಖಂಡರಾದ ಟಿ.ವಿ.ಲಕ್ಷ್ಮಿನಾರಾಯಣ, ನಾಗೇಶ್, ಜೆಡಿಎಸ್ ಮುಖಂಡರಾದ ಲಕ್ಷ್ಮಿಪತಯ್ಯ, ದೇವರಾಜಮ್ಮ ಇತರರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…