ಪ್ರಧಾನಿ‌ ಮೋದಿ ಕೈ ಬಲಪಡಿಸಲು ಸುಧಾಕರ್ ಅವರನ್ನು ಗೆಲ್ಲಿಸಬೇಕು- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶಗೌಡ ಅವರ ನೇತೃತ್ವದಲ್ಲಿ ಸರಣಿ ಸಭೆಗಳನ್ನು ನಡೆಸಿ, ಚಿಕ್ಕಬಳ್ಳಾಪುರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ‌ ಮತಯಾಚನೆ ಮಾಡಲಾಯಿತು.

ಹೊನ್ನಾವರ ಗ್ರಾಮದ ವೀರಭದ್ರಸ್ವಾಮಿ ದೇವಾಲಯ ಆವರಣದಲ್ಲಿ ಜೆಡಿಎಸ್- ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರ ಸಭೆ‌ ನಡೆಸಿದ ಮುಖಂಡರು, 3ನೇ ಅವಧಿಗೆ ಮೋದಿ ಪ್ರಧಾನಿಯಾಗಿ ದೇಶವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಮತ ಹಾಕುವಂತೆ ಮನವಿ ಮಾಡಿದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಮಾತನಾಡಿ, ಚಿಕ್ಕಬಳ್ಳಾಪುರದಲ್ಲಿ ಪ್ರಧಾನಿ ನರೇಂದ್ರ‌ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನೀಡಿರುವ ಆಶ್ವಾಸನೆಗಳನ್ನು ಮನದಲ್ಲಿಟ್ಟುಕೊಂಡು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಕೆಲಸ ಮಾಡಬೇಕು. ಸ್ಥಳೀಯವಾಗಿ ಉಭಯ ಪಕ್ಷಗಳ ಮುಖಂಡರ ಎಷ್ಟೇ ವೈಮನಸ್ಸಿದ್ದರೂ ಮರೆತು ಪ್ರಧಾನಿ‌ ಮೋದಿ ಕೈ ಬಲಪಡಿಸಲು ಸುಧಾಕರ್ ಅವರನ್ನು ಗೆಲ್ಲಿಸಬೇಕು ಎಂದು ಕೋರಿದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ, ಕಾಂಗ್ರೆಸ್ ಸರ್ಕಾರವು ಗ್ಯಾರೆಂಟಿ ಯೋಜನೆಗಳಿಗೆ ರಾಜ್ಯದ ಜನರ ತೆರಿಗೆ ಹಣ ಬಳಸುತ್ತಿದ್ದು, ಬೊಕ್ಕಸ ಬರಿದು ಮಾಡುತ್ತಿದೆ. ಉಚಿತ ಗ್ಯಾರೆಂಟಿಗಳಿಗೆ ಯಾವುದೇ ಗ್ಯಾರೆಂಟಿ ಇಲ್ಲ. ಸುಳ್ಳು ಭರವಸೆಗಳ ಮೂಲಕ ಜನರ ದಾರಿ ತಪ್ಪಿಸಲಾಗುತ್ತಿದೆ. ಹಿಂದೂ ಸಮಾಜದ ಹೆಣ್ಣು‌ಮಕ್ಕಳ‌ ಮೇಲೆ ನಿತ್ಯ ದೌರ್ಜನ್ಯ, ಕೊಲೆ, ಅತ್ಯಾಚಾರದಂತಹ ಕುಕೃತ್ಯಗಳು ನಡೆಯುತ್ತಿವೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಎಂದು ಹೇಳಿದರು.

ನಂತರ ಕನಸವಾಡಿ, ಸಿ.ಡಿ.ಅಗ್ರಹಾರ, ದೊಡ್ಡತುಮಕೂರು, ಕಾಡನೂರು, ಹಾದ್ರಿಪುರ ಕೆಸ್ತೂರು ಹಾಗೂ ಕೊಡಿಗೇಹಳ್ಳಿ ಗ್ರಾಮ ಪಂಚಾಯ್ತಿ ಕೇಂದ್ರ ಸ್ಥಾನಗಳಲ್ಲಿ ಎನ್ ಡಿಎ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಪ್ರಚಾರ ನಡೆಸಿ, ಮತಯಾಚಿಸಲಾಯಿತು.

ಹೊನ್ನಾವರ ಗ್ರಾ.ಪಂ.ವ್ಯಾಪ್ತಿಯಲ್ಲಿ‌ ನಡೆದ ಪ್ರಚಾರ ಸಭೆಯಲ್ಲಿ ಬಿಜೆಪಿ‌ ಮುಖಂಡರಾದ ಟಿ.ವಿ.ಲಕ್ಷ್ಮಿನಾರಾಯಣ, ನಾಗೇಶ್, ಜೆಡಿಎಸ್ ಮುಖಂಡರಾದ ಲಕ್ಷ್ಮಿಪತಯ್ಯ, ದೇವರಾಜಮ್ಮ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ.‌ ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…

20 minutes ago

ಜಾತ್ರೆ ನಡೆದ ಮರು ದಿನವೇ ದೇವಾಲಯದಲ್ಲಿ ಕಳ್ಳತನ: 9 ತಾಳಿ, ಬೆಳ್ಳಿ ಕಿರೀಟ, ಹುಂಡಿ ಕಳವು

ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…

2 hours ago

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…

3 hours ago

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

12 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

12 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

1 day ago