ಪ್ರಧಾನಿ‌ ಮೋದಿ ಕೈ ಬಲಪಡಿಸಲು ಸುಧಾಕರ್ ಅವರನ್ನು ಗೆಲ್ಲಿಸಬೇಕು- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶಗೌಡ ಅವರ ನೇತೃತ್ವದಲ್ಲಿ ಸರಣಿ ಸಭೆಗಳನ್ನು ನಡೆಸಿ, ಚಿಕ್ಕಬಳ್ಳಾಪುರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ‌ ಮತಯಾಚನೆ ಮಾಡಲಾಯಿತು.

ಹೊನ್ನಾವರ ಗ್ರಾಮದ ವೀರಭದ್ರಸ್ವಾಮಿ ದೇವಾಲಯ ಆವರಣದಲ್ಲಿ ಜೆಡಿಎಸ್- ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರ ಸಭೆ‌ ನಡೆಸಿದ ಮುಖಂಡರು, 3ನೇ ಅವಧಿಗೆ ಮೋದಿ ಪ್ರಧಾನಿಯಾಗಿ ದೇಶವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಮತ ಹಾಕುವಂತೆ ಮನವಿ ಮಾಡಿದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಮಾತನಾಡಿ, ಚಿಕ್ಕಬಳ್ಳಾಪುರದಲ್ಲಿ ಪ್ರಧಾನಿ ನರೇಂದ್ರ‌ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನೀಡಿರುವ ಆಶ್ವಾಸನೆಗಳನ್ನು ಮನದಲ್ಲಿಟ್ಟುಕೊಂಡು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಕೆಲಸ ಮಾಡಬೇಕು. ಸ್ಥಳೀಯವಾಗಿ ಉಭಯ ಪಕ್ಷಗಳ ಮುಖಂಡರ ಎಷ್ಟೇ ವೈಮನಸ್ಸಿದ್ದರೂ ಮರೆತು ಪ್ರಧಾನಿ‌ ಮೋದಿ ಕೈ ಬಲಪಡಿಸಲು ಸುಧಾಕರ್ ಅವರನ್ನು ಗೆಲ್ಲಿಸಬೇಕು ಎಂದು ಕೋರಿದರು.

ಶಾಸಕ ಧೀರಜ್ ಮುನಿರಾಜು ಮಾತನಾಡಿ, ಕಾಂಗ್ರೆಸ್ ಸರ್ಕಾರವು ಗ್ಯಾರೆಂಟಿ ಯೋಜನೆಗಳಿಗೆ ರಾಜ್ಯದ ಜನರ ತೆರಿಗೆ ಹಣ ಬಳಸುತ್ತಿದ್ದು, ಬೊಕ್ಕಸ ಬರಿದು ಮಾಡುತ್ತಿದೆ. ಉಚಿತ ಗ್ಯಾರೆಂಟಿಗಳಿಗೆ ಯಾವುದೇ ಗ್ಯಾರೆಂಟಿ ಇಲ್ಲ. ಸುಳ್ಳು ಭರವಸೆಗಳ ಮೂಲಕ ಜನರ ದಾರಿ ತಪ್ಪಿಸಲಾಗುತ್ತಿದೆ. ಹಿಂದೂ ಸಮಾಜದ ಹೆಣ್ಣು‌ಮಕ್ಕಳ‌ ಮೇಲೆ ನಿತ್ಯ ದೌರ್ಜನ್ಯ, ಕೊಲೆ, ಅತ್ಯಾಚಾರದಂತಹ ಕುಕೃತ್ಯಗಳು ನಡೆಯುತ್ತಿವೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಎಂದು ಹೇಳಿದರು.

ನಂತರ ಕನಸವಾಡಿ, ಸಿ.ಡಿ.ಅಗ್ರಹಾರ, ದೊಡ್ಡತುಮಕೂರು, ಕಾಡನೂರು, ಹಾದ್ರಿಪುರ ಕೆಸ್ತೂರು ಹಾಗೂ ಕೊಡಿಗೇಹಳ್ಳಿ ಗ್ರಾಮ ಪಂಚಾಯ್ತಿ ಕೇಂದ್ರ ಸ್ಥಾನಗಳಲ್ಲಿ ಎನ್ ಡಿಎ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಪ್ರಚಾರ ನಡೆಸಿ, ಮತಯಾಚಿಸಲಾಯಿತು.

ಹೊನ್ನಾವರ ಗ್ರಾ.ಪಂ.ವ್ಯಾಪ್ತಿಯಲ್ಲಿ‌ ನಡೆದ ಪ್ರಚಾರ ಸಭೆಯಲ್ಲಿ ಬಿಜೆಪಿ‌ ಮುಖಂಡರಾದ ಟಿ.ವಿ.ಲಕ್ಷ್ಮಿನಾರಾಯಣ, ನಾಗೇಶ್, ಜೆಡಿಎಸ್ ಮುಖಂಡರಾದ ಲಕ್ಷ್ಮಿಪತಯ್ಯ, ದೇವರಾಜಮ್ಮ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

6 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

9 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

13 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago