Categories: ರಾಜ್ಯ

ಪ್ರಧಾನಿ ಮೋದಿ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ- ಸಿಎಂ ಸಿದ್ದರಾಮಯ್ಯ

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀವಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅದರಲ್ಲಿ ವಿಫಲರಾದರು. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು‌. ಆಗಲಿಲ್ಲ, ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆ – ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನುಡಿದಂತೆ ನಡೆಯೋದು, ಕೊಟ್ಟ ಮಾತಿನಂತೆ ನಡೆದುಕೊಳ್ಳುವುದು ನಮ್ಮ ಸರ್ಕಾರದ ಸಂಸ್ಕಾರ. ಬಿಜೆಪಿ ಕೊಟ್ಟ ಮಾತುಗಳಲ್ಲಿ ಯಾವುದನ್ನೂ ಈಡೇರಿಸಿಲ್ಲ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಜನ ಜಾನವಾರುಗಳಿಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ, ಜನರು ಗುಳೆ ಹೋಗದಂತೆ ತಡೆದಿದ್ದೇವೆ. ಇದು ನಮ್ಮ ಸಾಧನೆ ಎಂದರು.

ಕಳೆದ ವರ್ಷ ಸೆಪ್ಟೆಂಬರ್ ನಿಂದ ಇವತ್ತಿನವರೆಗೂ ನಾವು ರಾಜ್ಯದ ಪಾಲಿನ ಬರ ಪರಿಹಾರದ ಹಣವನ್ನು ಕೊಡಿ ಎಂದು ಪತ್ರ ಬರೆಯುತ್ತಿದ್ದೇವೆ. ನಾವೇ ಖುದ್ದಾಗಿ ಹೋಗಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡಿದರೂ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿಯನ್ನು ರಾಜ್ಯಕ್ಕೆ ನೀಡಿಲ್ಲ ಎಂದು ಗುಡುಗಿದರು.

ರಾಜ್ಯದ ಜನ ಪ್ರತಾಪ್ ಸಿಂಹ ಸೇರಿ 25 ಮಂದಿ ಎಂಪಿಗಳನ್ನು ಗೆಲ್ಲಿಸಿದರು. ಒಬ್ಬೇ ಒಬ್ಬ ಬಿಜೆಪಿ ಸಂಸದರು ರಾಜ್ಯಕ್ಕೆ ಒಂದೇ ಒಂದು ರೂಪಾಯಿ ಬರ ಪರಿಹಾರ ತರಲಿಲ್ಲ, “ಮಿಸ್ಟರ್ ಪ್ರತಾಪ್ ಸಿಂಹ ಏಕೆ ಒಂದೇ ಒಂದು ರೂಪಾಯಿ ತರಲಿಲ್ಲ. ಇಷ್ಟು ಎಂಪಿಗಳಿದ್ದು ನಾಚಿಕೆ ಆಗುವುದಿಲ್ಲವೇ?” ಎಂದು ಪ್ರಶ್ನೆ ಮಾಡಿದರು.

ದೇವೇಗೌಡರು ಈಗ ಪ್ರದಾನಿ ಮೋದಿ ಮತ್ತು ಬಿಜೆಪಿ ಜತೆ ತಮ್ಮ ಅಸ್ತಿತ್ವಕ್ಕಾಗಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಪ್ರಧಾನಿಗಳಿಗೆ ಹೇಳಿ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರವನ್ನು ದೊರಕಿಸಿ ಕೊಡಲಿ. ಜಾತ್ಯತೀತ ಎಂದು ಪಕ್ಷದ ಹೆಸರಿಟ್ಟುಕೊಂಡು ಈಗ ಕೋಮುವಾದಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ರಾಜ್ಯದ ಒಂದು ಕೋಟಿ 30 ಲಕ್ಷ ಕುಟುಂಬಗಳ ನಾಲ್ಕೂವರೆ ಕೋಟಿ ಜನರಿಗೆ ಪ್ರತೀ ತಿಂಗಳು 4 ರಿಂದ 6 ಸಾವಿರ ರೂಪಾಯಿ ಕೈ ಸೇರುವ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೇವೆ. ಇಲ್ಲಿಯವರೆಗೂ 139 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು ಜಮೆ ಆಗುತ್ತಿದೆ. ನಾವು ನುಡಿದಂತೆ ನಡೆಯುತ್ತಿದ್ದೇವೆ ಎಂದರು.

ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ, ನಾವೂ ರಾಮನನ್ನು ಭಜಿಸುತ್ತೇವೆ‌. ಜನದ್ರೋಹವನ್ನು ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿಯನ್ನು ಕ್ಷಮಿಸಬೇಡಿ, ಬೆಂಬಲಿಸಬೇಡಿ ಎಂದು ತಿಳಿಸಿದರು.

ಪಿರಿಯಾಪಟ್ಟಣದ ಜನ, ಜಾನವಾರು, ಕೃಷಿಯ ಅನುಕೂಲಕ್ಕಾಗಿ ಮತ್ತು ಇಲ್ಲಿನ ಅಂತರ್ಜಲ ಹೆಚ್ಚಳಕ್ಕೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಈಗ ಈ ಯೋಜನೆಯನ್ನು ಉದ್ಘಾಟಿಸಿದ್ದೇನೆ. 79 ಹಳ್ಳಿ 93 ಸಾವಿರ ಜನರಿಗೆ ಇದರಿಂದ ಲಾಭ ಆಗುತ್ತಿದೆ. ಇದು ನಮ್ಮ ಸರ್ಕಾರ ಪಿರಿಯಾಪಟ್ಟಣದಲ್ಲಿ ನಿರ್ವಹಿಸಿದ ಜವಾಬ್ದಾರಿ ಎಂದರು.

ನಮ್ಮ ಸರ್ಕಾರದ ಒಂದು ಯೋಜನೆ ಕೋಲಾರ, ಚಿಕ್ಕಬಳ್ಳಾಪುರದ ಕೆರೆಗಳಿಗೆ ಮರು ಹುಟ್ಟು ನೀಡಿದೆ. ಇದೇ ರೀತಿ ಪಿರಿಯಾಪಟ್ಟಣದ ಕೆರೆಗಳಿಗೆ ಮರು ಜೀವ ನೀಡಿ ಇಲ್ಲಿನ ಅಂತರ್ಜಲ ವೃದ್ಧಿಗೆ ಈ ಯೋಜನೆ ಜೀವದಾನವಾಗಲಿದೆ ಎಂದು ಹೇಳಿದರು‌.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

12 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

12 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

15 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago