ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಾಮಾನ್ಯ ಜನ, ರೈತ, ಕಾರ್ಮಿಕ ವಿರೋಧಿ ಯೋಜನೆ, ನೀತಿಗಳನ್ನು ಜಾರಿಗೊಳಿಸಿರುವುದನ್ನು ವಿರೋಧಿಸಿ ಆಗಸ್ಟ್ 1ರಿಂದ 14 ರವರೆಗೆ ದೇಶವ್ಯಾಪಿ ಪ್ರಚಾರಾಂದೋಲನಕ್ಕೆ ಕರೆ ನೀಡಲಾಗಿದೆ. ಆಗಸ್ಟ್ 14ರ ಸಂಜೆಯಿಂದ ಆ.15ರ ಬೆಳಗಿನ ಜಾವವರೆಗೆ ಸರ್ಕಾರದ ಜನ ವಿರೋಧಿ ನೀತಿಗಳನ್ನು ತಿಳಿಸಲು ಅಹೋರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಪ್ರಾಂತ ಸಂಘದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ತಿಳಿಸಿದರು.
ನಗರದಲ್ಲಿ ಸಿಐಟಿಯು, ಎಐಕೆಎಸ್, ಪ್ರಾಂತ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ಸೋಮವಾರ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಜನ ವಿರೋಧಿ ನಿತಿಗಳ ಪ್ರಚಾರೋಂದಲನದಲ್ಲಿ ಅವರು ಮಾತನಾಡಿ, ದೇಶಾದ್ಯಂತ ಪೆಟ್ರೋಲ್, ಡೀಸೆಲ್, ಹಾಲು, ಅಡುಗೆ ಎಣ್ಣೆ, ತರಕಾರಿ, ಗ್ಯಾಸ್ ಸೇರಿದಂತೆ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ, ತೆರಿಗೆ ವಿಧಿಸಿ ಬಡ, ಮಧ್ಯಮ ವರ್ಗದ ಜನರ ಜೀವನದ ಜೊತೆ ಪ್ರಧಾನಿ ನರೇಂದ್ರ ಮೊದಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿಎ.ವೆಂಕಟೇಶ ಮಾತನಾಡಿ, ಪ್ರಧಾನಿ ಮೋದಿ ಅವರು ಜನರ ಕಷ್ಟಗಳನ್ನು ನೇರವಾಗಿ ಕೇಳದೆ ಮನ್ ಕೀ ಬಾತ್ ಮಾಡಿ ಅವರಷ್ಟಕ್ಕೆ ಅವರೆ ಮಾತನಾಡಿಕೊಳ್ಳುತ್ತಿದ್ದಾರೆ. 9 ವರ್ಷಗಳ ಅಧಿಕಾರಾವಧಿಯಲ್ಲಿ ಇಲ್ಲಿವರೆಗೆ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಸಾಧನೆ ಬಗ್ಗೆ ಹಾಗೂ ಜನರ ಅಹವಾಲು ಸ್ವೀಕರಿಸಿಲ್ಲ. ಹಲವು ದೇಶಗಳಿಗೆ ಪ್ರಧಾನಿ ಮೋದಿ ಹೋಗಿ ಬಂದಿದ್ದಾರೆ ಅದರ ಪ್ರತಿಫಲವೇನು, 20ಲಕ್ಷ ಕೋಟಿ ಕೋವಿಡ್ ಪರಿಹಾರ ಧನ ಎಲ್ಲಿಗೆ ಹೋಯ್ತು..? ಪ್ರಧಾನಿ ಕೇರ್ಸ್ ಫಂಡ್ ಖಾತೆಗೆ ಜನರು ಹಾಕಿದ ದುಡ್ಡಿಗೆ ಲೆಕ್ಕವನ್ನು ನೀಡಿಲ್ಲ. ರೈಲು, ಬ್ಯಾಂಕ್, ಬಂದರು, ಶಿಕ್ಷಣ, ಆರೋಗ್ಯ ಕ್ಷೇತ್ರಗಳನ್ನು ಖಾಸಗೀಕರಣ ಮಾಡಲು ಹೊರಟ್ಟಿದ್ದಾರೆ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…