ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಾಮಾನ್ಯ ಜನ, ರೈತ, ಕಾರ್ಮಿಕ ವಿರೋಧಿ ಯೋಜನೆ, ನೀತಿಗಳನ್ನು ಜಾರಿಗೊಳಿಸಿರುವುದನ್ನು ವಿರೋಧಿಸಿ ಆಗಸ್ಟ್ 1ರಿಂದ 14 ರವರೆಗೆ ದೇಶವ್ಯಾಪಿ ಪ್ರಚಾರಾಂದೋಲನಕ್ಕೆ ಕರೆ ನೀಡಲಾಗಿದೆ. ಆಗಸ್ಟ್ 14ರ ಸಂಜೆಯಿಂದ ಆ.15ರ ಬೆಳಗಿನ ಜಾವವರೆಗೆ ಸರ್ಕಾರದ ಜನ ವಿರೋಧಿ ನೀತಿಗಳನ್ನು ತಿಳಿಸಲು ಅಹೋರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಪ್ರಾಂತ ಸಂಘದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ತಿಳಿಸಿದರು.
ನಗರದಲ್ಲಿ ಸಿಐಟಿಯು, ಎಐಕೆಎಸ್, ಪ್ರಾಂತ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ಸೋಮವಾರ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಜನ ವಿರೋಧಿ ನಿತಿಗಳ ಪ್ರಚಾರೋಂದಲನದಲ್ಲಿ ಅವರು ಮಾತನಾಡಿ, ದೇಶಾದ್ಯಂತ ಪೆಟ್ರೋಲ್, ಡೀಸೆಲ್, ಹಾಲು, ಅಡುಗೆ ಎಣ್ಣೆ, ತರಕಾರಿ, ಗ್ಯಾಸ್ ಸೇರಿದಂತೆ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ, ತೆರಿಗೆ ವಿಧಿಸಿ ಬಡ, ಮಧ್ಯಮ ವರ್ಗದ ಜನರ ಜೀವನದ ಜೊತೆ ಪ್ರಧಾನಿ ನರೇಂದ್ರ ಮೊದಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿಎ.ವೆಂಕಟೇಶ ಮಾತನಾಡಿ, ಪ್ರಧಾನಿ ಮೋದಿ ಅವರು ಜನರ ಕಷ್ಟಗಳನ್ನು ನೇರವಾಗಿ ಕೇಳದೆ ಮನ್ ಕೀ ಬಾತ್ ಮಾಡಿ ಅವರಷ್ಟಕ್ಕೆ ಅವರೆ ಮಾತನಾಡಿಕೊಳ್ಳುತ್ತಿದ್ದಾರೆ. 9 ವರ್ಷಗಳ ಅಧಿಕಾರಾವಧಿಯಲ್ಲಿ ಇಲ್ಲಿವರೆಗೆ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಸಾಧನೆ ಬಗ್ಗೆ ಹಾಗೂ ಜನರ ಅಹವಾಲು ಸ್ವೀಕರಿಸಿಲ್ಲ. ಹಲವು ದೇಶಗಳಿಗೆ ಪ್ರಧಾನಿ ಮೋದಿ ಹೋಗಿ ಬಂದಿದ್ದಾರೆ ಅದರ ಪ್ರತಿಫಲವೇನು, 20ಲಕ್ಷ ಕೋಟಿ ಕೋವಿಡ್ ಪರಿಹಾರ ಧನ ಎಲ್ಲಿಗೆ ಹೋಯ್ತು..? ಪ್ರಧಾನಿ ಕೇರ್ಸ್ ಫಂಡ್ ಖಾತೆಗೆ ಜನರು ಹಾಕಿದ ದುಡ್ಡಿಗೆ ಲೆಕ್ಕವನ್ನು ನೀಡಿಲ್ಲ. ರೈಲು, ಬ್ಯಾಂಕ್, ಬಂದರು, ಶಿಕ್ಷಣ, ಆರೋಗ್ಯ ಕ್ಷೇತ್ರಗಳನ್ನು ಖಾಸಗೀಕರಣ ಮಾಡಲು ಹೊರಟ್ಟಿದ್ದಾರೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…