ಪ್ರಧಾನಿ ಮೋದಿ ಸರ್ಕಾರದ ಜನ ವಿರೋಧಿ ನೀತಿಗಳಿಂದ ಜನರ ಆದಾಯ ಕುಸಿತ: ನಿರುದ್ಯೋಗ ಪ್ರಮಾಣ ಏರಿಕೆ- ಆರ್.ಚಂದ್ರತೇಜಸ್ವಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಾಮಾನ್ಯ ಜನ, ರೈತ, ಕಾರ್ಮಿಕ ವಿರೋಧಿ ಯೋಜನೆ, ನೀತಿಗಳನ್ನು ಜಾರಿಗೊಳಿಸಿರುವುದನ್ನು ವಿರೋಧಿಸಿ ಆಗಸ್ಟ್ 1ರಿಂದ 14 ರವರೆಗೆ ದೇಶವ್ಯಾಪಿ ಪ್ರಚಾರಾಂದೋಲನಕ್ಕೆ ಕರೆ ನೀಡಲಾಗಿದೆ. ಆಗಸ್ಟ್ 14ರ ಸಂಜೆಯಿಂದ ಆ.15ರ ಬೆಳಗಿನ ಜಾವವರೆಗೆ ಸರ್ಕಾರದ ಜನ ವಿರೋಧಿ ನೀತಿಗಳನ್ನು ತಿಳಿಸಲು ಅಹೋರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಪ್ರಾಂತ ಸಂಘದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ತಿಳಿಸಿದರು.

ನಗರದಲ್ಲಿ ಸಿಐಟಿಯು, ಎಐಕೆಎಸ್, ಪ್ರಾಂತ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ಸೋಮವಾರ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಜನ ವಿರೋಧಿ ನಿತಿಗಳ ಪ್ರಚಾರೋಂದಲನದಲ್ಲಿ ಅವರು ಮಾತನಾಡಿ, ದೇಶಾದ್ಯಂತ ಪೆಟ್ರೋಲ್, ಡೀಸೆಲ್, ಹಾಲು, ಅಡುಗೆ ಎಣ್ಣೆ, ತರಕಾರಿ, ಗ್ಯಾಸ್ ಸೇರಿದಂತೆ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ‌ ಮಾಡಿ, ತೆರಿಗೆ ವಿಧಿಸಿ ಬಡ, ಮಧ್ಯಮ ವರ್ಗದ ಜನರ ಜೀವನದ ಜೊತೆ ಪ್ರಧಾನಿ ನರೇಂದ್ರ ಮೊದಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಕಳೆದ ಒಂಭತ್ತು ವರ್ಷಗಳಿಂದ ಹಣದುಬ್ಬರ ತಾಂಡವಾಡುತ್ತಿದೆ. ಬೆಲೆ ಏರಿಕೆಯಿಂದ ಬಡ ಜನರನ್ನು ರಕ್ಷಿಸಲು ಮೋದಿ ಸರ್ಕಾರ ಯಾವುದೇ ಕ್ರಮಗಳನ್ನು ಈವರೆಗೆ ತೆಗೆದುಕೊಂಡಿಲ್ಲ. ಬಡ ಜನರಿಗೆ ಪಡಿತರ ನೀಡಲು ಸಿದ್ಧವಿರದ ಕೇಂದ್ರ ಸರ್ಕಾರ ಆಹಾರ ಭದ್ರತೆಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿದೆ. ದೇಶದಲ್ಲಿ ದಿನೇ ದಿನೇ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿದೆ, ಜನರ ನಿಜವಾದ ಆದಾಯ ಕುಸಿಯುತ್ತಿದೆ. ವೆಚ್ಚಕ್ಕೆ, ಬೆಲೆ ಏರಿಕೆ ತಕ್ಕಂತೆ ಕಾರ್ಮಿಕರ ವೇತನ ಹೆಚ್ಚಾಗುತ್ತಿಲ್ಲ. ಪ್ರಸ್ತುತ ರೈತರು ಸಂಕಷ್ಟದಲ್ಲಿದ್ದಾರೆ. ಸ್ವಾಮಿನಾಥನ್ ಶಿಫಾರಸು ನ್ನು ಜಾರಿ ಮಾಡುತ್ತಿಲ್ಲ, ರೈತರು ಉತ್ಪಾದಿಸಿದ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಮಾಡದೆ ರೈತ ವಿರೋಧಿ ಕಾನೂನನ್ನು ಜಾರಿ‌ ಮಾಡಲು ಹೊರಟಿದ್ದಾರೆ ಎಂದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿಎ.ವೆಂಕಟೇಶ ಮಾತನಾಡಿ, ಪ್ರಧಾನಿ ಮೋದಿ ಅವರು ಜನರ ಕಷ್ಟಗಳನ್ನು ನೇರವಾಗಿ ಕೇಳದೆ ಮನ್ ಕೀ ಬಾತ್ ಮಾಡಿ ಅವರಷ್ಟಕ್ಕೆ ಅವರೆ ಮಾತನಾಡಿಕೊಳ್ಳುತ್ತಿದ್ದಾರೆ. 9 ವರ್ಷಗಳ ಅಧಿಕಾರಾವಧಿಯಲ್ಲಿ ಇಲ್ಲಿವರೆಗೆ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಸಾಧನೆ ಬಗ್ಗೆ ಹಾಗೂ ಜನರ ಅಹವಾಲು ಸ್ವೀಕರಿಸಿಲ್ಲ. ಹಲವು ದೇಶಗಳಿಗೆ ಪ್ರಧಾನಿ ಮೋದಿ ಹೋಗಿ ಬಂದಿದ್ದಾರೆ ಅದರ ಪ್ರತಿಫಲವೇನು, 20ಲಕ್ಷ ಕೋಟಿ ಕೋವಿಡ್ ಪರಿಹಾರ ಧನ ಎಲ್ಲಿಗೆ ಹೋಯ್ತು..? ಪ್ರಧಾನಿ ಕೇರ್ಸ್ ಫಂಡ್ ಖಾತೆಗೆ ಜನರು ಹಾಕಿದ ದುಡ್ಡಿಗೆ ಲೆಕ್ಕವನ್ನು ನೀಡಿಲ್ಲ. ರೈಲು, ಬ್ಯಾಂಕ್, ಬಂದರು, ಶಿಕ್ಷಣ, ಆರೋಗ್ಯ ಕ್ಷೇತ್ರಗಳನ್ನು ಖಾಸಗೀಕರಣ ಮಾಡಲು ಹೊರಟ್ಟಿದ್ದಾರೆ.

ಸಿಐಟಿಯು ಮುಖಂಡ ರೇಣುಕಾರಾದ್ಯ, ಸಿಹೆಚ್ ರಾಮಕೃಷ್ಣ, ವಿಜಯಕುಮಾರ್, ಸಾದಿಕ್ ಪಾಷಾ, ಎ.ಜಾರ್ಜ್, ಮಣೀಶ್, ಅನಿಲ್ ಗುಪ್ತಾ,‌ ಕೆ‌ ರಘು‌ಕುಮಾರ್, ಚೌಡಯ್ಯ ಸೈಯದ್ ಅಲಿ ಮತ್ತಿತರರು ಇದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

8 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

23 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago