ಕೋಲಾರ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರು ಎಫ್ಸ್ ಟೀನ್ ಫೈಲ್ ನಲ್ಲಿ ಉಲ್ಲೇಖಿಸಲಾಗಿದ್ದು ಭಾರತ ದೇಶದ ಘನತೆ ಮತ್ತು ಗಾಂಭೀರ್ಯತೆಗೆ ಕಪ್ಪು ಚುಕ್ಕೆ ತಂದಿದ್ದಾರೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಯುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಆಫ್ರೀದ್ ನೇತೃತ್ವದಲ್ಲಿ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು
ಈ ಸಂದರ್ಭದಲ್ಲಿ ಆಫ್ರೀದ್ ಮಾತನಾಡಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ರವರು ಟ್ರಂಪ್ ಜೊತೆ ಮತ್ತು ಎಫ್ಸ್ ಟೀನ್ ಜೊತೆ ಸಂಬಂಧ ಏನು ಅಂತ ಕೂಡಲೇ ಉತ್ತರ ಕೊಡಬೇಕು ಪ್ರಧಾನಿ ಬೇರೆ ದೇಶದ ಅಧ್ಯಕ್ಷರ ಮುಂದೆ ಕುಣಿತಾರೆ ಅಂದ್ರೆ ನಮ್ಮ ದೇಶಕ್ಕೆ ಅಗೌರವ ತಂದಿದ್ದಾರೆ ಮೋದಿ ಬಂಡವಾಳಶಾಹಿ ಪರವಾಗಿದ್ದಾರೆ ಅದಕ್ಕಾಗಿ ದೇಶವನ್ನು ಮಾರಾಟ ಮಾಡಲು ಸಂಚು ರೂಪಿಸಿದ್ದಾರೆ ಇದಕ್ಕೆ ಕಾಂಗ್ರೆಸ್ ಪಕ್ಷವು ಬಿಡುವುದಿಲ್ಲ ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸಾಧಿಕ್ ಮಾತನಾಡಿ ಎಫ್ಸ್ ಟೀನ್ ಅನ್ನುವವನು ಕಾಮಕ ಕಡಿಮೆ ವಯಸ್ಸಿನ ಮಕ್ಕಳಿಗೆ ಅತ್ಯಾಚಾರ ಮಾಡಿದವನು ಅಂತವರ ಜೊತೆ ಮೋದಿ ಕೈ ಜೋಡಿಸ್ತಾರೆ ಅಂದ್ರೆ ನಮ್ಮ ದೇಶಕ್ಕೆ ತುಂಬಾ ಅವಮಾನ ಆಗುತ್ತೆ ಕೂಡಲೇ ಇದರ ಬಗ್ಗೆ ಉತ್ತರ ಕೊಡಬೇಕು ಇಲ್ಲದಿದ್ದರೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು, ಉಪಾಧ್ಯಕ್ಷ ತೌಫಿಕ್ ಅನ್ವರ್, ಕೋಲಾರ ತಾಲ್ಲೂಕು ಅಧ್ಯಕ್ಷ ಸುಹೈಲ್, ಶ್ರೀನಿವಾಸಪುರ ಅಧ್ಯಕ್ಷ ಮನೋಹರ್, ಮುಳಬಾಗಿಲು ಅಧ್ಯಕ್ಷ ಸೂರಿ, ಕೋಲಾರ ನಗರ ಅಧ್ಯಕ್ಷ ಅರ್ಬಾಜ್, ಗ್ರಾಮಾಂತರ ಅಧ್ಯಕ್ಷ ಬರ್ಕತ್, ಅಭಿಷೇಕ್, ಯುವ ಮುಖಂಡರಾದ ಯತೀಶ್ ನಾಯ್ಡು,ಮನ್ಸೂರ್, ನೂರ್, ಬಾಬರ್ ಷಮ್ಸ್, ನಿಜಾಮುದ್ದೀನ್ ಮುಂತಾದವರು ಇದ್ದರು.
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…