ಕೋಲಾರ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರು ಎಫ್ಸ್ ಟೀನ್ ಫೈಲ್ ನಲ್ಲಿ ಉಲ್ಲೇಖಿಸಲಾಗಿದ್ದು ಭಾರತ ದೇಶದ ಘನತೆ ಮತ್ತು ಗಾಂಭೀರ್ಯತೆಗೆ ಕಪ್ಪು ಚುಕ್ಕೆ ತಂದಿದ್ದಾರೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಯುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಆಫ್ರೀದ್ ನೇತೃತ್ವದಲ್ಲಿ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು
ಈ ಸಂದರ್ಭದಲ್ಲಿ ಆಫ್ರೀದ್ ಮಾತನಾಡಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ ರವರು ಟ್ರಂಪ್ ಜೊತೆ ಮತ್ತು ಎಫ್ಸ್ ಟೀನ್ ಜೊತೆ ಸಂಬಂಧ ಏನು ಅಂತ ಕೂಡಲೇ ಉತ್ತರ ಕೊಡಬೇಕು ಪ್ರಧಾನಿ ಬೇರೆ ದೇಶದ ಅಧ್ಯಕ್ಷರ ಮುಂದೆ ಕುಣಿತಾರೆ ಅಂದ್ರೆ ನಮ್ಮ ದೇಶಕ್ಕೆ ಅಗೌರವ ತಂದಿದ್ದಾರೆ ಮೋದಿ ಬಂಡವಾಳಶಾಹಿ ಪರವಾಗಿದ್ದಾರೆ ಅದಕ್ಕಾಗಿ ದೇಶವನ್ನು ಮಾರಾಟ ಮಾಡಲು ಸಂಚು ರೂಪಿಸಿದ್ದಾರೆ ಇದಕ್ಕೆ ಕಾಂಗ್ರೆಸ್ ಪಕ್ಷವು ಬಿಡುವುದಿಲ್ಲ ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸಾಧಿಕ್ ಮಾತನಾಡಿ ಎಫ್ಸ್ ಟೀನ್ ಅನ್ನುವವನು ಕಾಮಕ ಕಡಿಮೆ ವಯಸ್ಸಿನ ಮಕ್ಕಳಿಗೆ ಅತ್ಯಾಚಾರ ಮಾಡಿದವನು ಅಂತವರ ಜೊತೆ ಮೋದಿ ಕೈ ಜೋಡಿಸ್ತಾರೆ ಅಂದ್ರೆ ನಮ್ಮ ದೇಶಕ್ಕೆ ತುಂಬಾ ಅವಮಾನ ಆಗುತ್ತೆ ಕೂಡಲೇ ಇದರ ಬಗ್ಗೆ ಉತ್ತರ ಕೊಡಬೇಕು ಇಲ್ಲದಿದ್ದರೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು, ಉಪಾಧ್ಯಕ್ಷ ತೌಫಿಕ್ ಅನ್ವರ್, ಕೋಲಾರ ತಾಲ್ಲೂಕು ಅಧ್ಯಕ್ಷ ಸುಹೈಲ್, ಶ್ರೀನಿವಾಸಪುರ ಅಧ್ಯಕ್ಷ ಮನೋಹರ್, ಮುಳಬಾಗಿಲು ಅಧ್ಯಕ್ಷ ಸೂರಿ, ಕೋಲಾರ ನಗರ ಅಧ್ಯಕ್ಷ ಅರ್ಬಾಜ್, ಗ್ರಾಮಾಂತರ ಅಧ್ಯಕ್ಷ ಬರ್ಕತ್, ಅಭಿಷೇಕ್, ಯುವ ಮುಖಂಡರಾದ ಯತೀಶ್ ನಾಯ್ಡು,ಮನ್ಸೂರ್, ನೂರ್, ಬಾಬರ್ ಷಮ್ಸ್, ನಿಜಾಮುದ್ದೀನ್ ಮುಂತಾದವರು ಇದ್ದರು.
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…