ದೇವನಹಳ್ಳಿ: ಮಹಿಳೆಯರು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕ ನೀಡುತ್ತಿರುವುದನ್ನು ಸದುಉಪಯೋಗಪಡಿಸಿಕೊಳ್ಳಿ ಹಾಗೂ ಗ್ಯಾಸ್ ಬಳಕೆ ಮಾಡುವಾಗ ರಕ್ಷಣಾ ಕಾರ್ಯತಂತ್ರಗಳನ್ನು ಅನುಸರಿಸುವುದು ಬಹುಮುಖ್ಯ ಎಂದು ಎಸ್ಎಲ್ ಎನ್ಎಸ್ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕ ಶ್ರೇಯಸ್ ತಿಳಿಸಿದರು.
ದೇವನಹಳ್ಳಿ ಪಟ್ಟಣದಲ್ಲಿರುವ ಎಸ್ಎಲ್ಎನ್ಎಸ್ ಭಾರತ್ ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ (PMUY)ಉಚಿತ ಗ್ಯಾಸ್ ಮತ್ತು ಗ್ಯಾಸ್ ಸ್ಟೌವ್ ಸೌಲಭ್ಯ ಸಬ್ಸಿಡಿ ದರದಲ್ಲಿ ವಿತರಣೆ ಮಾಡಿ, ಮಾತನಾಡಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎ .ವಿ ನಾರಾಯಣಸ್ವಾಮಿ ಮಾತನಾಡಿ, ಪ್ರಧಾನಿ ಮೋದಿಯವರು ಮಾತಿನಂತೆ ನಡೆದುಕೊಳ್ಳುವ ವ್ಯಕ್ತಿತ್ವ. ಆದರೆ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಕೇವಲ ನಾಮಾಕವಸ್ಥೆಗೆ ಕೆಲವರಿಗೆ ಮಾತ್ರ ತಲುಪಿಸಿದ್ದು ಬಿಟ್ಟರೆ ಪೂರ್ಣ ಪ್ರಮಾಣದ ಯೋಜನೆಗಳನ್ನು ತಲುಪಿಸಿಲ್ಲ, ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡುವಾಗ ಮಹಿಳೆಯರಿಗೆ ಟಿಬಿ, ಕ್ಷಯ ಮತ್ತು ಶ್ವಾಸಕೋಶದ ಅನಾರೋಗ್ಯ ತೊಂದರೆ ತಪ್ಪಿಸಿ ಮಹಿಳೆಯರ ಅರೋಗ್ಯ ರಕ್ಷಣೆಗಾಗಿ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದರು.
ಬಿಜೆಪಿ ಮುಖಂಡ ಮತ್ತು ಕೊರಮ ಸಮುದಾಯದ ಅಧ್ಯಕ್ಷ ಎಕೆಪಿ ನಾಗೇಶ್ ಮಾತನಾಡಿ, ಮೋದಿಯವರ ಯೋಜನೆಗಳು ಪ್ರತಿಯೊಬ್ಬ ಬಡವನಿಗೂ ತಲುಪುವ ಯೋಜನೆಗಳು ಅದು ಬಿಜೆಪಿಯ ಸಾಧನೆ, ದೇಶದ ಎಲ್ಲಾ ನಾಗರೀಕರಿಗೂ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ವಿದ್ಯಾಭ್ಯಾಸ ನೀಡುವ ಸದುದ್ದೇಶ ಹೊಂದಿದ್ದಾರೆ.
ಅವರ ಆಡಳಿತದಲ್ಲಿ ಪಾರದರ್ಶಕತೆ ಹೊಂದಿದೆ ಹಾಗಾಗಿ ಮುಂಬರುವ ಚುನಾವಣೆಯಲ್ಲೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ರವಿಕುಮಾರ್.ಎಚ್, ಜಿಲ್ಲಾಧ್ಯಕ್ಷ ಶಿವಪ್ರಸಾದ್ ಪ್ರಧಾನ ಕಾರ್ಯದರ್ಶಿ ನಿಲೇರಿ ಮಂಜುನಾಥ್, ಮುಖಂಡರಾದ ಎಸ್ಎಲ್ಎನ್ ಅಶ್ವಥ್ ನಾರಾಯಣ್ ತಾಲೂಕು ಅಧ್ಯಕ್ಷ ಸುನಿಲ್ ಸೇರಿದಂತೆ ಮುಖಂಡರು ಮತ್ತು ಫಲಾನುಭವಿಗಳು ಮತ್ತಿತರರು ಇದ್ದರು.
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…
Welcome to our thorough overview on the very best online slots online casinos. If you're…
ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…