ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಸಬ್ಸಿಡಿ ದರದಲ್ಲಿ ಉಚಿತ ಗ್ಯಾಸ್ ಸಂಪರ್ಕ

ದೇವನಹಳ್ಳಿ: ಮಹಿಳೆಯರು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕ ನೀಡುತ್ತಿರುವುದನ್ನು ಸದುಉಪಯೋಗಪಡಿಸಿಕೊಳ್ಳಿ ಹಾಗೂ ಗ್ಯಾಸ್ ಬಳಕೆ ಮಾಡುವಾಗ ರಕ್ಷಣಾ ಕಾರ್ಯತಂತ್ರಗಳನ್ನು ಅನುಸರಿಸುವುದು ಬಹುಮುಖ್ಯ ಎಂದು ಎಸ್ಎಲ್ ಎನ್ಎಸ್ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕ ಶ್ರೇಯಸ್ ತಿಳಿಸಿದರು.

ದೇವನಹಳ್ಳಿ ಪಟ್ಟಣದಲ್ಲಿರುವ ಎಸ್ಎಲ್ಎನ್ಎಸ್ ಭಾರತ್ ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ (PMUY)ಉಚಿತ ಗ್ಯಾಸ್ ಮತ್ತು ಗ್ಯಾಸ್ ಸ್ಟೌವ್ ಸೌಲಭ್ಯ ಸಬ್ಸಿಡಿ ದರದಲ್ಲಿ ವಿತರಣೆ ಮಾಡಿ, ಮಾತನಾಡಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎ .ವಿ ನಾರಾಯಣಸ್ವಾಮಿ ಮಾತನಾಡಿ, ಪ್ರಧಾನಿ‌ ಮೋದಿಯವರು ಮಾತಿನಂತೆ ನಡೆದುಕೊಳ್ಳುವ ವ್ಯಕ್ತಿತ್ವ. ಆದರೆ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಕೇವಲ ನಾಮಾಕವಸ್ಥೆಗೆ ಕೆಲವರಿಗೆ ಮಾತ್ರ ತಲುಪಿಸಿದ್ದು ಬಿಟ್ಟರೆ ಪೂರ್ಣ ಪ್ರಮಾಣದ ಯೋಜನೆಗಳನ್ನು ತಲುಪಿಸಿಲ್ಲ, ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡುವಾಗ ಮಹಿಳೆಯರಿಗೆ ಟಿಬಿ, ಕ್ಷಯ ಮತ್ತು ಶ್ವಾಸಕೋಶದ ಅನಾರೋಗ್ಯ ತೊಂದರೆ ತಪ್ಪಿಸಿ ಮಹಿಳೆಯರ ಅರೋಗ್ಯ ರಕ್ಷಣೆಗಾಗಿ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದರು.

ಬಿಜೆಪಿ ಮುಖಂಡ ಮತ್ತು ಕೊರಮ ಸಮುದಾಯದ ಅಧ್ಯಕ್ಷ ಎಕೆಪಿ ನಾಗೇಶ್ ಮಾತನಾಡಿ, ಮೋದಿಯವರ ಯೋಜನೆಗಳು ಪ್ರತಿಯೊಬ್ಬ ಬಡವನಿಗೂ ತಲುಪುವ ಯೋಜನೆಗಳು ಅದು ಬಿಜೆಪಿಯ ಸಾಧನೆ, ದೇಶದ ಎಲ್ಲಾ ನಾಗರೀಕರಿಗೂ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ವಿದ್ಯಾಭ್ಯಾಸ ನೀಡುವ ಸದುದ್ದೇಶ ಹೊಂದಿದ್ದಾರೆ.
ಅವರ ಆಡಳಿತದಲ್ಲಿ ಪಾರದರ್ಶಕತೆ ಹೊಂದಿದೆ ಹಾಗಾಗಿ ಮುಂಬರುವ ಚುನಾವಣೆಯಲ್ಲೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ‌ ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ರವಿಕುಮಾರ್.ಎಚ್, ಜಿಲ್ಲಾಧ್ಯಕ್ಷ ಶಿವಪ್ರಸಾದ್ ಪ್ರಧಾನ ಕಾರ್ಯದರ್ಶಿ ನಿಲೇರಿ ಮಂಜುನಾಥ್, ಮುಖಂಡರಾದ ಎಸ್ಎಲ್ಎನ್ ಅಶ್ವಥ್ ನಾರಾಯಣ್ ತಾಲೂಕು ಅಧ್ಯಕ್ಷ ಸುನಿಲ್ ಸೇರಿದಂತೆ ಮುಖಂಡರು ಮತ್ತು ಫಲಾನುಭವಿಗಳು ಮತ್ತಿತರರು ಇದ್ದರು.

Ramesh Babu

Journalist

Recent Posts

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

30 minutes ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

18 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

22 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

23 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago