2023 ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ.
ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ/ನಾಟಿ ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುವುದು. ಹಾಲಿ ಇರುವ ಬೆಳೆಗಳಿಗೆ (ಬಿತ್ತನೆಯಿಂದ ಕಟಾವಿನ ಹಂತದವರೆಗೆ) ಬರ/ಶುಷ್ಕ ಪರಿಸ್ಥಿತಿ, ನೆರೆ/ಪ್ರವಾಹಗಳಿಂದ ಬೆಳೆ ಮುಳಗಡೆ, ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ, ಭೂಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವುದು ಹಾಗೂ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (14 ದಿನಗಳವರೆಗೆ) ಆಲಿಕಲ್ಲು ಮಳೆ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ನಷ್ಟ ಪರಿಹಾರವನ್ನು ಒದಗಿಸುವುದು ಯೋಜನೆಯ ಪ್ರಮುಖ ಅಂಶಗಳಾಗಿರುತ್ತವೆ.
ಪ್ರಸ್ತುತ ವಿಮಾ ನೋಂದಣಿ ಪ್ರಗತಿಯಲ್ಲಿದ್ದು, ಜಿಲ್ಲೆಯ ಅಧಿಸೂಚಿತ ಬೆಳೆಗಳಾದ ತೊಗರಿ (ಮಳೆಯಾಶ್ರಿತ ಮತ್ತು ನೀರಾವರಿ), ಹುರುಳಿ ನೆಲಗಡಲೆ (ಮಳೆಯಾಶ್ರಿತ) ಮತ್ತು ಟೊಮ್ಯಾಟೊ ಬೆಳೆಗಳಿಗೆ ವಿಮೆಗೆ ನೋಂದಾಯಿಸಲು ಅಂತಿಮ ದಿನಾಂಕ ಮುಗಿದಿದ್ದು, ಉಳಿದಂತೆ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ), ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ಹುರುಳಿ (ಮಳೆಯಾಶ್ರಿತ) ಬೆಳೆಗಳಿಗೆ ಆಗಸ್ಟ್ 16 ಕೊನೆಯ ದಿನಾಂಕವಾಗಿದೆ.
ಅಂತಿಮ ದಿನದವರೆಗೆ ಕಾಯದೆ ವಿಮೆಗೆ ನೋಂದಾಯಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ರೈತರು ಹತ್ತಿರದ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ (Common Service Centre), ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳುವುದು.
ಹೆಚ್ಚಿನ ವಿವರಗಳಿಗೆ
ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿ ನಿಧಿಯನ್ನು ಸಂಪರ್ಕಿಸಬಹುದಾಗಿದೆ. ಆಯ್ಕೆಯಾಗಿರುವ ವಿಮಾ ಸಂಸ್ಥೆ ರಿಲಯನ್ಸ್ ಜನರಲ್ ಇನ್ಶ್ಯೂರನ್ಸ್ ಕಂಪನಿ ಲಿ., (ಟೋಲ್ ಪ್ರೀ ನಂ: 1800 102 4088)
ವಿಮಾ ಸಂಸ್ಥೆಯ ಪ್ರತಿನಿಧಿಗಳ ದೂರವಾಣಿ ಸಂಖ್ಯೆ- ಜಿಲ್ಲಾ ಪ್ರತಿನಿಧಿ: ಸೋಮನಾಥ್ ಕನಗಲ್: +918655952074, ದೇವನಹಳ್ಳಿ ಕಾಂತಕುಮಾರ್ : 9341627547, ದೊಡ್ಡಬಳ್ಳಾಪುರ ರವಿಶಂಕರ್ : 9620838348, ಹೊಸಕೋಟೆ: ಶ್ರೀನಿವಾಸ ಮೂರ್ತಿ 9900450778,
ನೆಲಮಂಗಲ ಕುಮಾರಸ್ವಾಮಿ : 8618812813.
ವಿಶೇಷ ಸೂಚನೆ
ರೈತರು ಅಂದಾಜು / ಅಪೇಕ್ಷಿತ ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲೆ ವಿಮೆಗೆ ನೋಂದಾಯಿಸಿಕೊಳ್ಳಬಹುದು ಹಾಗೂ ಬಿತ್ತನೆ ದೃಡೀಕರಣದ ಅವಶ್ಯಕತೆ ಇರುವುದಿಲ್ಲ. ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ನಿಗದಿಪಡಿಸಿದ ಅವಧಿಯೊಳಗಾಗಿ ತಾವು ನೋಂದಾಯಿಸಿದ ಕೇಂದ್ರಗಳಿಗೆ ತೆರಳಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…