ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯ ನೋಂದಣಿಗೆ ದಿನಾಂಕ ನಿಗದಿ: ಆಗಸ್ಟ್ 16ಕ್ಕೆ ಕೊನೆ ದಿನ

2023 ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ.

ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ/ನಾಟಿ ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುವುದು. ಹಾಲಿ ಇರುವ ಬೆಳೆಗಳಿಗೆ (ಬಿತ್ತನೆಯಿಂದ ಕಟಾವಿನ ಹಂತದವರೆಗೆ) ಬರ/ಶುಷ್ಕ ಪರಿಸ್ಥಿತಿ, ನೆರೆ/ಪ್ರವಾಹಗಳಿಂದ ಬೆಳೆ ಮುಳಗಡೆ, ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ, ಭೂಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವುದು ಹಾಗೂ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (14 ದಿನಗಳವರೆಗೆ) ಆಲಿಕಲ್ಲು ಮಳೆ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ನಷ್ಟ ಪರಿಹಾರವನ್ನು ಒದಗಿಸುವುದು ಯೋಜನೆಯ ಪ್ರಮುಖ ಅಂಶಗಳಾಗಿರುತ್ತವೆ.

ಪ್ರಸ್ತುತ ವಿಮಾ ನೋಂದಣಿ ಪ್ರಗತಿಯಲ್ಲಿದ್ದು, ಜಿಲ್ಲೆಯ ಅಧಿಸೂಚಿತ ಬೆಳೆಗಳಾದ ತೊಗರಿ (ಮಳೆಯಾಶ್ರಿತ ಮತ್ತು ನೀರಾವರಿ), ಹುರುಳಿ ನೆಲಗಡಲೆ (ಮಳೆಯಾಶ್ರಿತ) ಮತ್ತು ಟೊಮ್ಯಾಟೊ ಬೆಳೆಗಳಿಗೆ ವಿಮೆಗೆ ನೋಂದಾಯಿಸಲು ಅಂತಿಮ ದಿನಾಂಕ ಮುಗಿದಿದ್ದು, ಉಳಿದಂತೆ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ), ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ಹುರುಳಿ (ಮಳೆಯಾಶ್ರಿತ) ಬೆಳೆಗಳಿಗೆ ಆಗಸ್ಟ್ 16 ಕೊನೆಯ ದಿನಾಂಕವಾಗಿದೆ.

ಅಂತಿಮ ದಿನದವರೆಗೆ ಕಾಯದೆ ವಿಮೆಗೆ ನೋಂದಾಯಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ರೈತರು ಹತ್ತಿರದ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ (Common Service Centre), ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳುವುದು.

ಹೆಚ್ಚಿನ ವಿವರಗಳಿಗೆ

ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿ ನಿಧಿಯನ್ನು ಸಂಪರ್ಕಿಸಬಹುದಾಗಿದೆ. ಆಯ್ಕೆಯಾಗಿರುವ ವಿಮಾ ಸಂಸ್ಥೆ ರಿಲಯನ್ಸ್ ಜನರಲ್ ಇನ್ಶ್ಯೂರನ್ಸ್ ಕಂಪನಿ ಲಿ., (ಟೋಲ್ ಪ್ರೀ ನಂ: 1800 102 4088)
ವಿಮಾ ಸಂಸ್ಥೆಯ ಪ್ರತಿನಿಧಿಗಳ ದೂರವಾಣಿ ಸಂಖ್ಯೆ- ಜಿಲ್ಲಾ ಪ್ರತಿನಿಧಿ: ಸೋಮನಾಥ್ ಕನಗಲ್: +918655952074, ದೇವನಹಳ್ಳಿ ಕಾಂತಕುಮಾರ್ : 9341627547, ದೊಡ್ಡಬಳ್ಳಾಪುರ ರವಿಶಂಕರ್ : 9620838348, ಹೊಸಕೋಟೆ: ಶ್ರೀನಿವಾಸ ಮೂರ್ತಿ 9900450778,
ನೆಲಮಂಗಲ ಕುಮಾರಸ್ವಾಮಿ : 8618812813.

ವಿಶೇಷ ಸೂಚನೆ

ರೈತರು ಅಂದಾಜು / ಅಪೇಕ್ಷಿತ ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲೆ ವಿಮೆಗೆ ನೋಂದಾಯಿಸಿಕೊಳ್ಳಬಹುದು ಹಾಗೂ ಬಿತ್ತನೆ ದೃಡೀಕರಣದ ಅವಶ್ಯಕತೆ ಇರುವುದಿಲ್ಲ. ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ನಿಗದಿಪಡಿಸಿದ ಅವಧಿಯೊಳಗಾಗಿ ತಾವು ನೋಂದಾಯಿಸಿದ ಕೇಂದ್ರಗಳಿಗೆ ತೆರಳಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

9 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

10 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

15 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

16 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 day ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

1 day ago