ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೆ ತರಲಾಗಿದ್ದು 2025-26ನೇ ಸಾಲಿಗೆ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಕೃಷಿ ಇಲಾಖೆ ತಿಳಿಸಿದೆ.

ಪ್ರಸ್ತುತ ಜಿಲ್ಲೆಯಲ್ಲಿ ಇದುವರೆಗೆ 836 ರೈತರು ‘ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ’ ನೋಂದಣಿ ಮಾಡಿಕೊಂಡಿದ್ದಾರೆ. ದೇವನಹಳ್ಳಿ ತಾಲ್ಲೂಕಿನಲ್ಲಿ 209, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 365, ಹೊಸಕೋಟೆ ತಾಲ್ಲೂಕಿನಲ್ಲಿ 191, ನೆಲಮಂಗಲ ತಾಲ್ಲೂಕಿನಲ್ಲಿ 71 ರೈತರು ಮಾತ್ರ ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಭವಿಷ್ಯದಲ್ಲಿ ಅತಿವೃಷ್ಟಿ ಅನಾವೃಷ್ಟಿ ಆದಲ್ಲಿ ಬೆಳೆ ವಿಮೆ ರೈತರ ಕೈ ಹಿಡಿಯಲಿದೆ. ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಆಗಸ್ಟ್ 16 ಕೊನೆಯ ದಿನವಾಗಿದೆ.

ಕಳೆದ ಸಾಲಿನಲ್ಲಿ ಈ ಯೋಜನೆಗೆ ಜಿಲ್ಲೆಯಲ್ಲಿ ಒಟ್ಟು 5710 ರೈತರು ನೋಂದಣಿ ಮಾಡಿಸಿಕೊಂಡಿದ್ದು, ಅದರಲ್ಲಿ 1770 ರೈತರಿಗೆ ರೂ,79 ಲಕ್ಷ ಪರಿಹಾರ ವಿಮೆ ದೊರೆತಿದೆ.

ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ ಎಂಬುದನ್ನು ನೋಡುವುದಾದರೆ ರಾಗಿ (ಮಳೆಯಾಶ್ರಿತ) ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 340 ಪಾವತಿಸಿದರೆ ವಿಮಾ ಮೊತ್ತ 17000 ಪಡೆಯಬಹುದು.

ರಾಗಿ (ನೀರಾವರಿ ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 406 ಪಾವತಿಸಿದರೆ ವಿಮಾ ಮೊತ್ತ 20300 ಪಡೆಯಬಹುದು.

ಭತ್ತ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 746 ಪಾವತಿಸಿದರೆ ವಿಮಾ ಮೊತ್ತ 37300 ಪಡೆಯಬಹುದು.
ಮುಸುಕಿನ ಜೋಳ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 452 ಪಾವತಿಸಿದರೆ ವಿಮಾ ಮೊತ್ತ 22600 ಪಡೆಯಬಹುದು.

ಮುಸುಕಿನ ಜೋಳ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 516 ಪಾವತಿಸಿದರೆ ವಿಮಾ ಮೊತ್ತ 25800 ಪಡೆಯಬಹುದು.

ಹುರಳಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 164 ಪಾವತಿಸಿದರೆ ವಿಮಾ ಮೊತ್ತ 8200 ಪಡೆಯಬಹುದು.
ನೆಲಗಡಲೆ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 436 ವತಿಸಿದರೆ ವಿಮಾ ಮೊತ್ತ 21800 ಪಡೆಯಬಹುದು.

ತೊಗರಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 384 ಪಾವತಿಸಿದರೆ ವಿಮಾ ಮೊತ್ತ 19200 ಪಡೆಯಬಹುದು.

ತೊಗರಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 402 ಪಾವತಿಸಿದರೆ ವಿಮಾ ಮೊತ್ತ 20100 ಪಡೆಯಬಹುದು.

ಟಮೊಟೊ ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 1132 ಪಾವತಿಸಿದರೆ ವಿಮಾ ಮೊತ್ತ 56600 ಪಡೆಯಬಹುದು.

ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ಫ್ಯಾಕ್ಸ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಿ.ಎಚ್.ಸಿ ನಾಗರಿಕ ಸೇವಾಕೆಂದ್ರ ಹಾಗೂ ಬ್ಯಾಂಕ್ ಗಳಲ್ಲಿ ರೈತರು ಅಗತ್ಯ ದಾಖಲೆಗಳಾದ ವಿಮಾ ಪ್ರಸ್ತಾವನೆ, ಪಹಣಿ, ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾರ್ ಕಾರ್ಡ್ ನೊಂದಿಗೆ ನೋಂದಾಯಿಸಿಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

9 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

12 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

12 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

23 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

24 hours ago