ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೆ ತರಲಾಗಿದ್ದು 2025-26ನೇ ಸಾಲಿಗೆ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಕೃಷಿ ಇಲಾಖೆ ತಿಳಿಸಿದೆ.

ಪ್ರಸ್ತುತ ಜಿಲ್ಲೆಯಲ್ಲಿ ಇದುವರೆಗೆ 836 ರೈತರು ‘ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ’ ನೋಂದಣಿ ಮಾಡಿಕೊಂಡಿದ್ದಾರೆ. ದೇವನಹಳ್ಳಿ ತಾಲ್ಲೂಕಿನಲ್ಲಿ 209, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 365, ಹೊಸಕೋಟೆ ತಾಲ್ಲೂಕಿನಲ್ಲಿ 191, ನೆಲಮಂಗಲ ತಾಲ್ಲೂಕಿನಲ್ಲಿ 71 ರೈತರು ಮಾತ್ರ ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಭವಿಷ್ಯದಲ್ಲಿ ಅತಿವೃಷ್ಟಿ ಅನಾವೃಷ್ಟಿ ಆದಲ್ಲಿ ಬೆಳೆ ವಿಮೆ ರೈತರ ಕೈ ಹಿಡಿಯಲಿದೆ. ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಆಗಸ್ಟ್ 16 ಕೊನೆಯ ದಿನವಾಗಿದೆ.

ಕಳೆದ ಸಾಲಿನಲ್ಲಿ ಈ ಯೋಜನೆಗೆ ಜಿಲ್ಲೆಯಲ್ಲಿ ಒಟ್ಟು 5710 ರೈತರು ನೋಂದಣಿ ಮಾಡಿಸಿಕೊಂಡಿದ್ದು, ಅದರಲ್ಲಿ 1770 ರೈತರಿಗೆ ರೂ,79 ಲಕ್ಷ ಪರಿಹಾರ ವಿಮೆ ದೊರೆತಿದೆ.

ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ ಎಂಬುದನ್ನು ನೋಡುವುದಾದರೆ ರಾಗಿ (ಮಳೆಯಾಶ್ರಿತ) ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 340 ಪಾವತಿಸಿದರೆ ವಿಮಾ ಮೊತ್ತ 17000 ಪಡೆಯಬಹುದು.

ರಾಗಿ (ನೀರಾವರಿ ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 406 ಪಾವತಿಸಿದರೆ ವಿಮಾ ಮೊತ್ತ 20300 ಪಡೆಯಬಹುದು.

ಭತ್ತ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 746 ಪಾವತಿಸಿದರೆ ವಿಮಾ ಮೊತ್ತ 37300 ಪಡೆಯಬಹುದು.
ಮುಸುಕಿನ ಜೋಳ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 452 ಪಾವತಿಸಿದರೆ ವಿಮಾ ಮೊತ್ತ 22600 ಪಡೆಯಬಹುದು.

ಮುಸುಕಿನ ಜೋಳ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 516 ಪಾವತಿಸಿದರೆ ವಿಮಾ ಮೊತ್ತ 25800 ಪಡೆಯಬಹುದು.

ಹುರಳಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 164 ಪಾವತಿಸಿದರೆ ವಿಮಾ ಮೊತ್ತ 8200 ಪಡೆಯಬಹುದು.
ನೆಲಗಡಲೆ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 436 ವತಿಸಿದರೆ ವಿಮಾ ಮೊತ್ತ 21800 ಪಡೆಯಬಹುದು.

ತೊಗರಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 384 ಪಾವತಿಸಿದರೆ ವಿಮಾ ಮೊತ್ತ 19200 ಪಡೆಯಬಹುದು.

ತೊಗರಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 402 ಪಾವತಿಸಿದರೆ ವಿಮಾ ಮೊತ್ತ 20100 ಪಡೆಯಬಹುದು.

ಟಮೊಟೊ ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 1132 ಪಾವತಿಸಿದರೆ ವಿಮಾ ಮೊತ್ತ 56600 ಪಡೆಯಬಹುದು.

ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ಫ್ಯಾಕ್ಸ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಿ.ಎಚ್.ಸಿ ನಾಗರಿಕ ಸೇವಾಕೆಂದ್ರ ಹಾಗೂ ಬ್ಯಾಂಕ್ ಗಳಲ್ಲಿ ರೈತರು ಅಗತ್ಯ ದಾಖಲೆಗಳಾದ ವಿಮಾ ಪ್ರಸ್ತಾವನೆ, ಪಹಣಿ, ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾರ್ ಕಾರ್ಡ್ ನೊಂದಿಗೆ ನೋಂದಾಯಿಸಿಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

15 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

17 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

20 hours ago