ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ವೃತ್ತಿಯ ಕುಶಲಕರ್ಮಿಗಳು ಯೋಜನೆಯ ಸೌಲಭ್ಯ ಪಡೆಯ ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೃತ್ತಿ ಅಭಿವೃದ್ಧಿಗೊಳಿಸಿ ಕೊಳ್ಳುವಿಕೆ, ವೃತ್ತಿ ಉನ್ನತೀಕರಣಗೊಳಿಸಲು ಅಗತ್ಯ ತರಬೇತಿ, ಉಪಕರಣ ಕಿಟ್ ಮತ್ತು ಬಡ್ಡಿ ರಿಯಾಯಿತಿ ದರದಲ್ಲಿ ಆರ್ಥಿಕ ನೆರವು, ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ 18 ವೃತ್ತಿಯ ಕುಶಲಕರ್ಮಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ.
ಬಡಗಿ, ಕಮ್ಮಾರಿಕೆ, ಚಮ್ಮಾರಿಕೆ, ಅಕ್ಕಸಾಲಿಗ, ದೋಬಿ, ಕುಂಬಾರಿಕೆ, ಟೈಲರ್, ಕೌರಿಕ, ಶಿಲ್ಪಿ, ಪೊರಕೆ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ನೇಯ್ಗೆ ಬುಟ್ಟಿ ತಯಾರಿಕೆ, ಗೊಂಬೆ ತಯಾರಿಕೆ, ಮೀನು ಬಲೆ ಮಾಡುವವರು, ಹೂವಿನ ಹಾರ ತಯಾರಿಕೆ, ಬೀಗ ತಯಾರಕರು, ರಕ್ಷಾ ಕವಚ ತಯಾರಕರು, ಹ್ಯಾಮರ್ ಮತ್ತು ಟೂಲ್ ಕಿಟ್ ತಯಾರಿಕೆ, ದೋಣಿ ತಯಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.
ನಿಗದಿಪಡಿಸಿದ 18 ವೃತ್ತಿಗಳಲ್ಲಿ ಒಂದು ವೃತ್ತಿಯಲ್ಲಿ ತೊಡಗಿದಂತ ಕಾರ್ಮಿಕರು, 18 ವರ್ಷ ಪೂರೈಸಿರಬೇಕು, ಕಳೆದ 5 ವರ್ಷಗಳಲ್ಲಿ ಈ ವೃತ್ತಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ / ಕೇಂದ್ರ ಪುರಸ್ಕೃತ ಯಾವುದೇ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದಿರಬಾರದು, ಆದರೆ ಮುದ್ರಾ ಮತ್ತು PM SWANIDI ಯೋಜನೆಗಳ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಸೇವೆಯಲ್ಲಿರುವವರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ.
ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (Common Service Centre) ಗಳಲ್ಲಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಪುಸ್ತಕದೊಂದಿಗೆ, ಖುದ್ದಾಗಿ ಅರ್ಜಿದಾರರೇ ಭೇಟಿ ನೀಡಿ ನೊಂದಾಯಿಸಿಕೊಳ್ಳಲು ಈ ಮೂಲಕ ಕೋರಿದೆ.
ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ- 9448844948 ಹೊಸಕೋಟೆ-9743217605 ನೆಲಮಂಗಲ-9902740998 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…