ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ವೃತ್ತಿಯ  ಕುಶಲಕರ್ಮಿಗಳು ಯೋಜನೆಯ ಸೌಲಭ್ಯ ಪಡೆಯ ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೃತ್ತಿ ಅಭಿವೃದ್ಧಿಗೊಳಿಸಿ ಕೊಳ್ಳುವಿಕೆ, ವೃತ್ತಿ ಉನ್ನತೀಕರಣಗೊಳಿಸಲು ಅಗತ್ಯ ತರಬೇತಿ, ಉಪಕರಣ ಕಿಟ್ ಮತ್ತು ಬಡ್ಡಿ ರಿಯಾಯಿತಿ ದರದಲ್ಲಿ ಆರ್ಥಿಕ ನೆರವು, ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ 18 ವೃತ್ತಿಯ ಕುಶಲಕರ್ಮಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ.

ಬಡಗಿ, ಕಮ್ಮಾರಿಕೆ, ಚಮ್ಮಾರಿಕೆ, ಅಕ್ಕಸಾಲಿಗ, ದೋಬಿ, ಕುಂಬಾರಿಕೆ, ಟೈಲರ್, ಕೌರಿಕ, ಶಿಲ್ಪಿ, ಪೊರಕೆ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ನೇಯ್ಗೆ ಬುಟ್ಟಿ ತಯಾರಿಕೆ,  ಗೊಂಬೆ ತಯಾರಿಕೆ, ಮೀನು ಬಲೆ ಮಾಡುವವರು, ಹೂವಿನ ಹಾರ ತಯಾರಿಕೆ, ಬೀಗ ತಯಾರಕರು, ರಕ್ಷಾ ಕವಚ ತಯಾರಕರು, ಹ್ಯಾಮರ್ ಮತ್ತು ಟೂಲ್ ಕಿಟ್ ತಯಾರಿಕೆ, ದೋಣಿ ತಯಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.

ನಿಗದಿಪಡಿಸಿದ 18 ವೃತ್ತಿಗಳಲ್ಲಿ ಒಂದು ವೃತ್ತಿಯಲ್ಲಿ ತೊಡಗಿದಂತ ಕಾರ್ಮಿಕರು, 18 ವರ್ಷ ಪೂರೈಸಿರಬೇಕು, ಕಳೆದ 5 ವರ್ಷಗಳಲ್ಲಿ ಈ ವೃತ್ತಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ / ಕೇಂದ್ರ ಪುರಸ್ಕೃತ ಯಾವುದೇ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದಿರಬಾರದು, ಆದರೆ ಮುದ್ರಾ ಮತ್ತು PM SWANIDI ಯೋಜನೆಗಳ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಸೇವೆಯಲ್ಲಿರುವವರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ.

ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (Common Service Centre) ಗಳಲ್ಲಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಪುಸ್ತಕದೊಂದಿಗೆ, ಖುದ್ದಾಗಿ ಅರ್ಜಿದಾರರೇ ಭೇಟಿ ನೀಡಿ ನೊಂದಾಯಿಸಿಕೊಳ್ಳಲು ಈ ಮೂಲಕ ಕೋರಿದೆ.

ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ- 9448844948 ಹೊಸಕೋಟೆ-9743217605 ನೆಲಮಂಗಲ-9902740998 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

3 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

9 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

10 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

23 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

24 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

1 day ago