ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ವೃತ್ತಿಯ ಕುಶಲಕರ್ಮಿಗಳು ಯೋಜನೆಯ ಸೌಲಭ್ಯ ಪಡೆಯ ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೃತ್ತಿ ಅಭಿವೃದ್ಧಿಗೊಳಿಸಿ ಕೊಳ್ಳುವಿಕೆ, ವೃತ್ತಿ ಉನ್ನತೀಕರಣಗೊಳಿಸಲು ಅಗತ್ಯ ತರಬೇತಿ, ಉಪಕರಣ ಕಿಟ್ ಮತ್ತು ಬಡ್ಡಿ ರಿಯಾಯಿತಿ ದರದಲ್ಲಿ ಆರ್ಥಿಕ ನೆರವು, ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ 18 ವೃತ್ತಿಯ ಕುಶಲಕರ್ಮಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ.
ಬಡಗಿ, ಕಮ್ಮಾರಿಕೆ, ಚಮ್ಮಾರಿಕೆ, ಅಕ್ಕಸಾಲಿಗ, ದೋಬಿ, ಕುಂಬಾರಿಕೆ, ಟೈಲರ್, ಕೌರಿಕ, ಶಿಲ್ಪಿ, ಪೊರಕೆ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ನೇಯ್ಗೆ ಬುಟ್ಟಿ ತಯಾರಿಕೆ, ಗೊಂಬೆ ತಯಾರಿಕೆ, ಮೀನು ಬಲೆ ಮಾಡುವವರು, ಹೂವಿನ ಹಾರ ತಯಾರಿಕೆ, ಬೀಗ ತಯಾರಕರು, ರಕ್ಷಾ ಕವಚ ತಯಾರಕರು, ಹ್ಯಾಮರ್ ಮತ್ತು ಟೂಲ್ ಕಿಟ್ ತಯಾರಿಕೆ, ದೋಣಿ ತಯಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.
ನಿಗದಿಪಡಿಸಿದ 18 ವೃತ್ತಿಗಳಲ್ಲಿ ಒಂದು ವೃತ್ತಿಯಲ್ಲಿ ತೊಡಗಿದಂತ ಕಾರ್ಮಿಕರು, 18 ವರ್ಷ ಪೂರೈಸಿರಬೇಕು, ಕಳೆದ 5 ವರ್ಷಗಳಲ್ಲಿ ಈ ವೃತ್ತಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ / ಕೇಂದ್ರ ಪುರಸ್ಕೃತ ಯಾವುದೇ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದಿರಬಾರದು, ಆದರೆ ಮುದ್ರಾ ಮತ್ತು PM SWANIDI ಯೋಜನೆಗಳ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಸೇವೆಯಲ್ಲಿರುವವರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ.
ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (Common Service Centre) ಗಳಲ್ಲಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಪುಸ್ತಕದೊಂದಿಗೆ, ಖುದ್ದಾಗಿ ಅರ್ಜಿದಾರರೇ ಭೇಟಿ ನೀಡಿ ನೊಂದಾಯಿಸಿಕೊಳ್ಳಲು ಈ ಮೂಲಕ ಕೋರಿದೆ.
ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ- 9448844948 ಹೊಸಕೋಟೆ-9743217605 ನೆಲಮಂಗಲ-9902740998 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…