ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ವೃತ್ತಿಯ ಕುಶಲಕರ್ಮಿಗಳು ಯೋಜನೆಯ ಸೌಲಭ್ಯ ಪಡೆಯ ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೃತ್ತಿ ಅಭಿವೃದ್ಧಿಗೊಳಿಸಿ ಕೊಳ್ಳುವಿಕೆ, ವೃತ್ತಿ ಉನ್ನತೀಕರಣಗೊಳಿಸಲು ಅಗತ್ಯ ತರಬೇತಿ, ಉಪಕರಣ ಕಿಟ್ ಮತ್ತು ಬಡ್ಡಿ ರಿಯಾಯಿತಿ ದರದಲ್ಲಿ ಆರ್ಥಿಕ ನೆರವು, ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ 18 ವೃತ್ತಿಯ ಕುಶಲಕರ್ಮಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ.
ಬಡಗಿ, ಕಮ್ಮಾರಿಕೆ, ಚಮ್ಮಾರಿಕೆ, ಅಕ್ಕಸಾಲಿಗ, ದೋಬಿ, ಕುಂಬಾರಿಕೆ, ಟೈಲರ್, ಕೌರಿಕ, ಶಿಲ್ಪಿ, ಪೊರಕೆ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ನೇಯ್ಗೆ ಬುಟ್ಟಿ ತಯಾರಿಕೆ, ಗೊಂಬೆ ತಯಾರಿಕೆ, ಮೀನು ಬಲೆ ಮಾಡುವವರು, ಹೂವಿನ ಹಾರ ತಯಾರಿಕೆ, ಬೀಗ ತಯಾರಕರು, ರಕ್ಷಾ ಕವಚ ತಯಾರಕರು, ಹ್ಯಾಮರ್ ಮತ್ತು ಟೂಲ್ ಕಿಟ್ ತಯಾರಿಕೆ, ದೋಣಿ ತಯಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.
ನಿಗದಿಪಡಿಸಿದ 18 ವೃತ್ತಿಗಳಲ್ಲಿ ಒಂದು ವೃತ್ತಿಯಲ್ಲಿ ತೊಡಗಿದಂತ ಕಾರ್ಮಿಕರು, 18 ವರ್ಷ ಪೂರೈಸಿರಬೇಕು, ಕಳೆದ 5 ವರ್ಷಗಳಲ್ಲಿ ಈ ವೃತ್ತಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ / ಕೇಂದ್ರ ಪುರಸ್ಕೃತ ಯಾವುದೇ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದಿರಬಾರದು, ಆದರೆ ಮುದ್ರಾ ಮತ್ತು PM SWANIDI ಯೋಜನೆಗಳ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಸೇವೆಯಲ್ಲಿರುವವರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ.
ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (Common Service Centre) ಗಳಲ್ಲಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಪುಸ್ತಕದೊಂದಿಗೆ, ಖುದ್ದಾಗಿ ಅರ್ಜಿದಾರರೇ ಭೇಟಿ ನೀಡಿ ನೊಂದಾಯಿಸಿಕೊಳ್ಳಲು ಈ ಮೂಲಕ ಕೋರಿದೆ.
ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ- 9448844948 ಹೊಸಕೋಟೆ-9743217605 ನೆಲಮಂಗಲ-9902740998 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…