ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ವೃತ್ತಿಯ  ಕುಶಲಕರ್ಮಿಗಳು ಯೋಜನೆಯ ಸೌಲಭ್ಯ ಪಡೆಯ ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೃತ್ತಿ ಅಭಿವೃದ್ಧಿಗೊಳಿಸಿ ಕೊಳ್ಳುವಿಕೆ, ವೃತ್ತಿ ಉನ್ನತೀಕರಣಗೊಳಿಸಲು ಅಗತ್ಯ ತರಬೇತಿ, ಉಪಕರಣ ಕಿಟ್ ಮತ್ತು ಬಡ್ಡಿ ರಿಯಾಯಿತಿ ದರದಲ್ಲಿ ಆರ್ಥಿಕ ನೆರವು, ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ 18 ವೃತ್ತಿಯ ಕುಶಲಕರ್ಮಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ.

ಬಡಗಿ, ಕಮ್ಮಾರಿಕೆ, ಚಮ್ಮಾರಿಕೆ, ಅಕ್ಕಸಾಲಿಗ, ದೋಬಿ, ಕುಂಬಾರಿಕೆ, ಟೈಲರ್, ಕೌರಿಕ, ಶಿಲ್ಪಿ, ಪೊರಕೆ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ನೇಯ್ಗೆ ಬುಟ್ಟಿ ತಯಾರಿಕೆ,  ಗೊಂಬೆ ತಯಾರಿಕೆ, ಮೀನು ಬಲೆ ಮಾಡುವವರು, ಹೂವಿನ ಹಾರ ತಯಾರಿಕೆ, ಬೀಗ ತಯಾರಕರು, ರಕ್ಷಾ ಕವಚ ತಯಾರಕರು, ಹ್ಯಾಮರ್ ಮತ್ತು ಟೂಲ್ ಕಿಟ್ ತಯಾರಿಕೆ, ದೋಣಿ ತಯಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.

ನಿಗದಿಪಡಿಸಿದ 18 ವೃತ್ತಿಗಳಲ್ಲಿ ಒಂದು ವೃತ್ತಿಯಲ್ಲಿ ತೊಡಗಿದಂತ ಕಾರ್ಮಿಕರು, 18 ವರ್ಷ ಪೂರೈಸಿರಬೇಕು, ಕಳೆದ 5 ವರ್ಷಗಳಲ್ಲಿ ಈ ವೃತ್ತಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ / ಕೇಂದ್ರ ಪುರಸ್ಕೃತ ಯಾವುದೇ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದಿರಬಾರದು, ಆದರೆ ಮುದ್ರಾ ಮತ್ತು PM SWANIDI ಯೋಜನೆಗಳ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಸೇವೆಯಲ್ಲಿರುವವರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ.

ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (Common Service Centre) ಗಳಲ್ಲಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಪುಸ್ತಕದೊಂದಿಗೆ, ಖುದ್ದಾಗಿ ಅರ್ಜಿದಾರರೇ ಭೇಟಿ ನೀಡಿ ನೊಂದಾಯಿಸಿಕೊಳ್ಳಲು ಈ ಮೂಲಕ ಕೋರಿದೆ.

ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ- 9448844948 ಹೊಸಕೋಟೆ-9743217605 ನೆಲಮಂಗಲ-9902740998 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

38 minutes ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

11 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

22 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

23 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

23 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago