ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ವೃತ್ತಿಯ  ಕುಶಲಕರ್ಮಿಗಳು ಯೋಜನೆಯ ಸೌಲಭ್ಯ ಪಡೆಯ ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೃತ್ತಿ ಅಭಿವೃದ್ಧಿಗೊಳಿಸಿ ಕೊಳ್ಳುವಿಕೆ, ವೃತ್ತಿ ಉನ್ನತೀಕರಣಗೊಳಿಸಲು ಅಗತ್ಯ ತರಬೇತಿ, ಉಪಕರಣ ಕಿಟ್ ಮತ್ತು ಬಡ್ಡಿ ರಿಯಾಯಿತಿ ದರದಲ್ಲಿ ಆರ್ಥಿಕ ನೆರವು, ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ 18 ವೃತ್ತಿಯ ಕುಶಲಕರ್ಮಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ.

ಬಡಗಿ, ಕಮ್ಮಾರಿಕೆ, ಚಮ್ಮಾರಿಕೆ, ಅಕ್ಕಸಾಲಿಗ, ದೋಬಿ, ಕುಂಬಾರಿಕೆ, ಟೈಲರ್, ಕೌರಿಕ, ಶಿಲ್ಪಿ, ಪೊರಕೆ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ನೇಯ್ಗೆ ಬುಟ್ಟಿ ತಯಾರಿಕೆ,  ಗೊಂಬೆ ತಯಾರಿಕೆ, ಮೀನು ಬಲೆ ಮಾಡುವವರು, ಹೂವಿನ ಹಾರ ತಯಾರಿಕೆ, ಬೀಗ ತಯಾರಕರು, ರಕ್ಷಾ ಕವಚ ತಯಾರಕರು, ಹ್ಯಾಮರ್ ಮತ್ತು ಟೂಲ್ ಕಿಟ್ ತಯಾರಿಕೆ, ದೋಣಿ ತಯಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.

ನಿಗದಿಪಡಿಸಿದ 18 ವೃತ್ತಿಗಳಲ್ಲಿ ಒಂದು ವೃತ್ತಿಯಲ್ಲಿ ತೊಡಗಿದಂತ ಕಾರ್ಮಿಕರು, 18 ವರ್ಷ ಪೂರೈಸಿರಬೇಕು, ಕಳೆದ 5 ವರ್ಷಗಳಲ್ಲಿ ಈ ವೃತ್ತಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ / ಕೇಂದ್ರ ಪುರಸ್ಕೃತ ಯಾವುದೇ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದಿರಬಾರದು, ಆದರೆ ಮುದ್ರಾ ಮತ್ತು PM SWANIDI ಯೋಜನೆಗಳ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಸೇವೆಯಲ್ಲಿರುವವರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ.

ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (Common Service Centre) ಗಳಲ್ಲಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಪುಸ್ತಕದೊಂದಿಗೆ, ಖುದ್ದಾಗಿ ಅರ್ಜಿದಾರರೇ ಭೇಟಿ ನೀಡಿ ನೊಂದಾಯಿಸಿಕೊಳ್ಳಲು ಈ ಮೂಲಕ ಕೋರಿದೆ.

ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ- 9448844948 ಹೊಸಕೋಟೆ-9743217605 ನೆಲಮಂಗಲ-9902740998 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

5 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

18 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

21 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

22 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago