ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ವೃತ್ತಿಯ ಕುಶಲಕರ್ಮಿಗಳು ಯೋಜನೆಯ ಸೌಲಭ್ಯ ಪಡೆಯ ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೃತ್ತಿ ಅಭಿವೃದ್ಧಿಗೊಳಿಸಿ ಕೊಳ್ಳುವಿಕೆ, ವೃತ್ತಿ ಉನ್ನತೀಕರಣಗೊಳಿಸಲು ಅಗತ್ಯ ತರಬೇತಿ, ಉಪಕರಣ ಕಿಟ್ ಮತ್ತು ಬಡ್ಡಿ ರಿಯಾಯಿತಿ ದರದಲ್ಲಿ ಆರ್ಥಿಕ ನೆರವು, ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ 18 ವೃತ್ತಿಯ ಕುಶಲಕರ್ಮಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ.
ಬಡಗಿ, ಕಮ್ಮಾರಿಕೆ, ಚಮ್ಮಾರಿಕೆ, ಅಕ್ಕಸಾಲಿಗ, ದೋಬಿ, ಕುಂಬಾರಿಕೆ, ಟೈಲರ್, ಕೌರಿಕ, ಶಿಲ್ಪಿ, ಪೊರಕೆ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ನೇಯ್ಗೆ ಬುಟ್ಟಿ ತಯಾರಿಕೆ, ಗೊಂಬೆ ತಯಾರಿಕೆ, ಮೀನು ಬಲೆ ಮಾಡುವವರು, ಹೂವಿನ ಹಾರ ತಯಾರಿಕೆ, ಬೀಗ ತಯಾರಕರು, ರಕ್ಷಾ ಕವಚ ತಯಾರಕರು, ಹ್ಯಾಮರ್ ಮತ್ತು ಟೂಲ್ ಕಿಟ್ ತಯಾರಿಕೆ, ದೋಣಿ ತಯಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.
ನಿಗದಿಪಡಿಸಿದ 18 ವೃತ್ತಿಗಳಲ್ಲಿ ಒಂದು ವೃತ್ತಿಯಲ್ಲಿ ತೊಡಗಿದಂತ ಕಾರ್ಮಿಕರು, 18 ವರ್ಷ ಪೂರೈಸಿರಬೇಕು, ಕಳೆದ 5 ವರ್ಷಗಳಲ್ಲಿ ಈ ವೃತ್ತಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ / ಕೇಂದ್ರ ಪುರಸ್ಕೃತ ಯಾವುದೇ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದಿರಬಾರದು, ಆದರೆ ಮುದ್ರಾ ಮತ್ತು PM SWANIDI ಯೋಜನೆಗಳ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಸೇವೆಯಲ್ಲಿರುವವರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ.
ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (Common Service Centre) ಗಳಲ್ಲಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಪುಸ್ತಕದೊಂದಿಗೆ, ಖುದ್ದಾಗಿ ಅರ್ಜಿದಾರರೇ ಭೇಟಿ ನೀಡಿ ನೊಂದಾಯಿಸಿಕೊಳ್ಳಲು ಈ ಮೂಲಕ ಕೋರಿದೆ.
ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ- 9448844948 ಹೊಸಕೋಟೆ-9743217605 ನೆಲಮಂಗಲ-9902740998 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…