ಪ್ರಭಾವಿ ಕುಟುಂಬ ದಾಖಲಾತಿಗಳಿಲ್ಲದೆ, ಅಕ್ರಮ ಕಟ್ಟಡ ನಿರ್ಮಾಣ ಆರೋಪ: ಸೂಕ್ತ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಒತ್ತಾಯ

ದೊಡ್ಡಬಳ್ಳಾಪುರ : ತಾಲ್ಲೂಕಿನ ಪಾಲನಜೋಗಿಹಳ್ಳಿ ಗ್ರಾಮದಲ್ಲಿ ಗ್ರಾಮಠಾಣಕ್ಕೆ ಸಂಬಂಧಿಸಿದಂತೆ ಒಂದು ಪ್ರಭಾವಿ ಕುಟುಂಬ ದಾಖಲಾತಿಗಳಿಲ್ಲದೆ, ಅಕ್ರಮ ಕಟ್ಟಡ ನಿರ್ಮಾಣ ಮಾಡಿಕೊಂಡು ಗ್ರಾಮಠಾಣದ ಸುಮಾರು ಜಾಗ ಅಕ್ರಮವಾಗಿ ಒತ್ತುವರಿ ಮಾಡಿದ್ದಾರೆ. ಆದರೆ, ಅಧಿಕಾರಿಗಳ ನಿರ್ಲಕ್ಷತೆ, ನಿಯಮಗಳ ಉಲ್ಲಂಘನೆ ಮಾಡಿ ಒತ್ತುವರಿ ಮಾಡಿದ್ದರು ಸೂಕ್ತ ಕ್ರಮ ಕೈಗೊಂಡು ಜಾಗವನ್ನು ವಶಪಡಿಸಿಕೊಳ್ಳದೆ ಇರುವುದು ಸ್ಥಳೀಯ ಅಧಿಕಾರಿಗಳ ನಿರ್ಲಕ್ಷತೆ ತೋರುತ್ತಿದೆ ಎಂದು ಪ್ರಬುದ್ಧ ಕರ್ನಾಟಕ ಭೀಮ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಯು. ಮುನಿರಾಜು ಆರೋಪಿಸಿದರು.

ಅಕ್ರಮ ಭೂಕಬಳಿಕೆ ವಿರುದ್ಧ ಪಾಲನಜೋಗಿಹಳ್ಳಿಯಲ್ಲಿ ಪ್ರಬುದ್ಧ ಕರ್ನಾಟಕ ಭೀಮ ಸೇನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಗ್ರಾಮಠಾಣಾ ವ್ಯಾಪ್ತಿಯ ಸುಮಾರು ಜಾಗಗಳನ್ನು ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಸರ್ವೆ ನಂ.44/1 ರಲ್ಲಿ C.A.ಸೈಟ್, ಉದ್ಯಾನವನ, ಮಾರಾಟ ಸರ್ವೆ ನಂ.22/5 ರಲ್ಲಿ ಅಕ್ರಮ ಖಾತೆ ಸರ್ವೆ ನಂ. 18/4 ರಲ್ಲಿ ಉಂಡೆ ಖಾತೆ ಫಾರಂ ನಂ.9 ಫಾರಂ ನಂ.11 ನ್ನು ವಜಾಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಬುದ್ಧ ಕರ್ನಾಟಕ ಭೀಮಸೇನೆ ಅಗ್ರಹಿಸುತ್ತದೆ ಎಂದರು.

ಗ್ರಾಮಠಾಣ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿರುವುದು ಅಲ್ಲಿನ ಜನರ ಆಕ್ರೋಶಕ್ಕೆ ಕಾರಣವಾಗಿದೆ. ನಮ್ಮ ಪ್ರಬುದ್ಧ ಕರ್ನಾಟಕ ಭೀಮಸೇನೆಯು RTI ಮೂಲಕ ಪಂಚಾಯಿತಿಯಲ್ಲಿ ಸದರಿ ಕಟ್ಟಡಕ್ಕೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಪಡೆದು ಪರಿಶೀಲಿಸಿದಾಗ ಪ್ರಸ್ತುತ ಇರುವ ಕಟ್ಟಡಕ್ಕೂ ದಾಖಲಾತಿಗಳಿಗೂ ಯಾವುದೇ ಸಂಬಂಧವಿಲ್ಲ. ದಾಖಲಾತಿಗಳಿಲ್ಲದೇ ಗ್ರಾಮಠಾಣದಲ್ಲಿ ಕಟ್ಟಡ ನಿರ್ಮಾಣ ಮಾಡಿ ಬಾಡಿಗೆ ಮನೆಗಳಾಗಿ ವಿಂಗಡಿಸಿರುವುದು ಕಾಣುತ್ತದೆ.

ಒಂದು ಲ್ಯಾಂಡ್ ಮಾಡಬೇಕಾದರೆ ಲ್ಯಾಂಡ್ ಮ್ಯಾಪ್, ಲೇಔಟ್ ಪ್ಲಾನ್, ಜಮೀನಿನ ನಕ್ಷೆ ಸರ್ವೆ ನಂಬರು ಯಾವುದು, ಸ್ಕೆಚ್ ಪ್ಲಾನ್ ರಸ್ತೆ ಅನುಮೋದನೆ ನಕ್ಷೆ ಮತ್ತು ಎನ್.ಓ.ಸಿ ಹಿಂಬರಹಗಳನ್ನು ಗ್ರಾಮಪಂಚಾಯಿತಿಯಿಂದ ಹಾಗೂ ಯೋಜನಾ ಪ್ರಾಧಿಕಾರದಿಂದ ತೆಗೆದುಕೊಳ್ಳಬೇಕು. ಆದರೆ ಈ ಪ್ರಕರಣದಲ್ಲಿ ಯಾವುದೇ ದಾಖಲಾತಿಗಳು ಕಾಣುತ್ತಿಲ್ಲ. C.A ಸೈಟ್, ಉದ್ಯಾನವನ, ಇತರೆ ಸರ್ಕಾರಿ ಸೌಲಭ್ಯಕ್ಕಾಗಿ ಯಾವುದು ಜಾಗವನ್ನು ಮೀಸಲಿಟ್ಟಿದ್ದಾರೆ ಎಂಬುದು ಮಾಹಿತಿ ಇಲ್ಲ. ಹಾಗಾಗಿ ನಿಯಮಗಳ ಉಲ್ಲಂಘನೆಯಾಗಿದ್ದರು ಉಂಡೆ ಖಾತೆ, ಫಾರಂ ನಂ.9 ಮತ್ತು ಫಾರಂ ನಂ.11 ನ್ನು ನಿಮ್ಮ ಪಂಚಾಯಿತಿಯಿಂದ ಮಾಡಲಾಗಿದೆ ಎಂದರು.

ದಾಖಲಾತಿಗಳನ್ನು ಪರಿಶೀಲಿಸಿ ನೋಡಿ, ಅಕ್ರಮ ಖಾತೆ, ಉಂಡೆ ಖಾತೆ, ಹಾಗೂ ಗ್ರಾಮಠಾಣದ ಸುಮಾರು ಜಾಗವನ್ನು ಒಂದೇ ಕುಟುಂಬದವರಿಂದ ಒತ್ತುವರಿ ಮತ್ತು ಪಂಚಾಯಿತಿ ಸದಸ್ಯನಿಂದ ಗ್ರಾಮಠಾಣ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ವಿಚಾರಕ್ಕೂ ಅರ್ಜಿ ಸಲ್ಲಿಸಿದ್ದರು ತೆರವುಗೊಳಿಸದೇ ಇರುವುದು ಅಧಿಕಾರಿಗಳ ನಿರ್ಲಕ್ಷತೆ ಎದ್ದು ಕಾಣುತ್ತದೆ ಇಂದು ಸಾಂಕೇತಿಕವಾಗಿ ಒಂದು ದಿನದ ಪ್ರತಿಭಟನೆ ಮಾಡಿದ್ದೇವೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೆ ಇದ್ದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

7 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

8 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

10 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

14 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

15 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

15 hours ago