ಪ್ರಭಾವಿ ಕುಟುಂಬ ದಾಖಲಾತಿಗಳಿಲ್ಲದೆ, ಅಕ್ರಮ ಕಟ್ಟಡ ನಿರ್ಮಾಣ ಆರೋಪ: ಸೂಕ್ತ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಒತ್ತಾಯ

ದೊಡ್ಡಬಳ್ಳಾಪುರ : ತಾಲ್ಲೂಕಿನ ಪಾಲನಜೋಗಿಹಳ್ಳಿ ಗ್ರಾಮದಲ್ಲಿ ಗ್ರಾಮಠಾಣಕ್ಕೆ ಸಂಬಂಧಿಸಿದಂತೆ ಒಂದು ಪ್ರಭಾವಿ ಕುಟುಂಬ ದಾಖಲಾತಿಗಳಿಲ್ಲದೆ, ಅಕ್ರಮ ಕಟ್ಟಡ ನಿರ್ಮಾಣ ಮಾಡಿಕೊಂಡು ಗ್ರಾಮಠಾಣದ ಸುಮಾರು ಜಾಗ ಅಕ್ರಮವಾಗಿ ಒತ್ತುವರಿ ಮಾಡಿದ್ದಾರೆ. ಆದರೆ, ಅಧಿಕಾರಿಗಳ ನಿರ್ಲಕ್ಷತೆ, ನಿಯಮಗಳ ಉಲ್ಲಂಘನೆ ಮಾಡಿ ಒತ್ತುವರಿ ಮಾಡಿದ್ದರು ಸೂಕ್ತ ಕ್ರಮ ಕೈಗೊಂಡು ಜಾಗವನ್ನು ವಶಪಡಿಸಿಕೊಳ್ಳದೆ ಇರುವುದು ಸ್ಥಳೀಯ ಅಧಿಕಾರಿಗಳ ನಿರ್ಲಕ್ಷತೆ ತೋರುತ್ತಿದೆ ಎಂದು ಪ್ರಬುದ್ಧ ಕರ್ನಾಟಕ ಭೀಮ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಯು. ಮುನಿರಾಜು ಆರೋಪಿಸಿದರು.

ಅಕ್ರಮ ಭೂಕಬಳಿಕೆ ವಿರುದ್ಧ ಪಾಲನಜೋಗಿಹಳ್ಳಿಯಲ್ಲಿ ಪ್ರಬುದ್ಧ ಕರ್ನಾಟಕ ಭೀಮ ಸೇನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಗ್ರಾಮಠಾಣಾ ವ್ಯಾಪ್ತಿಯ ಸುಮಾರು ಜಾಗಗಳನ್ನು ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಸರ್ವೆ ನಂ.44/1 ರಲ್ಲಿ C.A.ಸೈಟ್, ಉದ್ಯಾನವನ, ಮಾರಾಟ ಸರ್ವೆ ನಂ.22/5 ರಲ್ಲಿ ಅಕ್ರಮ ಖಾತೆ ಸರ್ವೆ ನಂ. 18/4 ರಲ್ಲಿ ಉಂಡೆ ಖಾತೆ ಫಾರಂ ನಂ.9 ಫಾರಂ ನಂ.11 ನ್ನು ವಜಾಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಬುದ್ಧ ಕರ್ನಾಟಕ ಭೀಮಸೇನೆ ಅಗ್ರಹಿಸುತ್ತದೆ ಎಂದರು.

ಗ್ರಾಮಠಾಣ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿರುವುದು ಅಲ್ಲಿನ ಜನರ ಆಕ್ರೋಶಕ್ಕೆ ಕಾರಣವಾಗಿದೆ. ನಮ್ಮ ಪ್ರಬುದ್ಧ ಕರ್ನಾಟಕ ಭೀಮಸೇನೆಯು RTI ಮೂಲಕ ಪಂಚಾಯಿತಿಯಲ್ಲಿ ಸದರಿ ಕಟ್ಟಡಕ್ಕೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಪಡೆದು ಪರಿಶೀಲಿಸಿದಾಗ ಪ್ರಸ್ತುತ ಇರುವ ಕಟ್ಟಡಕ್ಕೂ ದಾಖಲಾತಿಗಳಿಗೂ ಯಾವುದೇ ಸಂಬಂಧವಿಲ್ಲ. ದಾಖಲಾತಿಗಳಿಲ್ಲದೇ ಗ್ರಾಮಠಾಣದಲ್ಲಿ ಕಟ್ಟಡ ನಿರ್ಮಾಣ ಮಾಡಿ ಬಾಡಿಗೆ ಮನೆಗಳಾಗಿ ವಿಂಗಡಿಸಿರುವುದು ಕಾಣುತ್ತದೆ.

ಒಂದು ಲ್ಯಾಂಡ್ ಮಾಡಬೇಕಾದರೆ ಲ್ಯಾಂಡ್ ಮ್ಯಾಪ್, ಲೇಔಟ್ ಪ್ಲಾನ್, ಜಮೀನಿನ ನಕ್ಷೆ ಸರ್ವೆ ನಂಬರು ಯಾವುದು, ಸ್ಕೆಚ್ ಪ್ಲಾನ್ ರಸ್ತೆ ಅನುಮೋದನೆ ನಕ್ಷೆ ಮತ್ತು ಎನ್.ಓ.ಸಿ ಹಿಂಬರಹಗಳನ್ನು ಗ್ರಾಮಪಂಚಾಯಿತಿಯಿಂದ ಹಾಗೂ ಯೋಜನಾ ಪ್ರಾಧಿಕಾರದಿಂದ ತೆಗೆದುಕೊಳ್ಳಬೇಕು. ಆದರೆ ಈ ಪ್ರಕರಣದಲ್ಲಿ ಯಾವುದೇ ದಾಖಲಾತಿಗಳು ಕಾಣುತ್ತಿಲ್ಲ. C.A ಸೈಟ್, ಉದ್ಯಾನವನ, ಇತರೆ ಸರ್ಕಾರಿ ಸೌಲಭ್ಯಕ್ಕಾಗಿ ಯಾವುದು ಜಾಗವನ್ನು ಮೀಸಲಿಟ್ಟಿದ್ದಾರೆ ಎಂಬುದು ಮಾಹಿತಿ ಇಲ್ಲ. ಹಾಗಾಗಿ ನಿಯಮಗಳ ಉಲ್ಲಂಘನೆಯಾಗಿದ್ದರು ಉಂಡೆ ಖಾತೆ, ಫಾರಂ ನಂ.9 ಮತ್ತು ಫಾರಂ ನಂ.11 ನ್ನು ನಿಮ್ಮ ಪಂಚಾಯಿತಿಯಿಂದ ಮಾಡಲಾಗಿದೆ ಎಂದರು.

ದಾಖಲಾತಿಗಳನ್ನು ಪರಿಶೀಲಿಸಿ ನೋಡಿ, ಅಕ್ರಮ ಖಾತೆ, ಉಂಡೆ ಖಾತೆ, ಹಾಗೂ ಗ್ರಾಮಠಾಣದ ಸುಮಾರು ಜಾಗವನ್ನು ಒಂದೇ ಕುಟುಂಬದವರಿಂದ ಒತ್ತುವರಿ ಮತ್ತು ಪಂಚಾಯಿತಿ ಸದಸ್ಯನಿಂದ ಗ್ರಾಮಠಾಣ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ವಿಚಾರಕ್ಕೂ ಅರ್ಜಿ ಸಲ್ಲಿಸಿದ್ದರು ತೆರವುಗೊಳಿಸದೇ ಇರುವುದು ಅಧಿಕಾರಿಗಳ ನಿರ್ಲಕ್ಷತೆ ಎದ್ದು ಕಾಣುತ್ತದೆ ಇಂದು ಸಾಂಕೇತಿಕವಾಗಿ ಒಂದು ದಿನದ ಪ್ರತಿಭಟನೆ ಮಾಡಿದ್ದೇವೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೆ ಇದ್ದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

10 hours ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

14 hours ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

14 hours ago

ಕೂಗೇನಹಳ್ಳಿ ಗೇಟ್ ಬಳಿ ಟೊಮೆಟೊ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…

16 hours ago

ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವ ಹುಡುಕುತ್ತಾ ಹೊರಟಾಗ……

ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…

2 days ago

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…

2 days ago