ದೊಡ್ಡಬಳ್ಳಾಪುರ : ತಾಲ್ಲೂಕಿನ ಪಾಲನಜೋಗಿಹಳ್ಳಿ ಗ್ರಾಮದಲ್ಲಿ ಗ್ರಾಮಠಾಣಕ್ಕೆ ಸಂಬಂಧಿಸಿದಂತೆ ಒಂದು ಪ್ರಭಾವಿ ಕುಟುಂಬ ದಾಖಲಾತಿಗಳಿಲ್ಲದೆ, ಅಕ್ರಮ ಕಟ್ಟಡ ನಿರ್ಮಾಣ ಮಾಡಿಕೊಂಡು ಗ್ರಾಮಠಾಣದ ಸುಮಾರು ಜಾಗ ಅಕ್ರಮವಾಗಿ ಒತ್ತುವರಿ ಮಾಡಿದ್ದಾರೆ. ಆದರೆ, ಅಧಿಕಾರಿಗಳ ನಿರ್ಲಕ್ಷತೆ, ನಿಯಮಗಳ ಉಲ್ಲಂಘನೆ ಮಾಡಿ ಒತ್ತುವರಿ ಮಾಡಿದ್ದರು ಸೂಕ್ತ ಕ್ರಮ ಕೈಗೊಂಡು ಜಾಗವನ್ನು ವಶಪಡಿಸಿಕೊಳ್ಳದೆ ಇರುವುದು ಸ್ಥಳೀಯ ಅಧಿಕಾರಿಗಳ ನಿರ್ಲಕ್ಷತೆ ತೋರುತ್ತಿದೆ ಎಂದು ಪ್ರಬುದ್ಧ ಕರ್ನಾಟಕ ಭೀಮ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಯು. ಮುನಿರಾಜು ಆರೋಪಿಸಿದರು.
ಅಕ್ರಮ ಭೂಕಬಳಿಕೆ ವಿರುದ್ಧ ಪಾಲನಜೋಗಿಹಳ್ಳಿಯಲ್ಲಿ ಪ್ರಬುದ್ಧ ಕರ್ನಾಟಕ ಭೀಮ ಸೇನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮಠಾಣಾ ವ್ಯಾಪ್ತಿಯ ಸುಮಾರು ಜಾಗಗಳನ್ನು ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಸರ್ವೆ ನಂ.44/1 ರಲ್ಲಿ C.A.ಸೈಟ್, ಉದ್ಯಾನವನ, ಮಾರಾಟ ಸರ್ವೆ ನಂ.22/5 ರಲ್ಲಿ ಅಕ್ರಮ ಖಾತೆ ಸರ್ವೆ ನಂ. 18/4 ರಲ್ಲಿ ಉಂಡೆ ಖಾತೆ ಫಾರಂ ನಂ.9 ಫಾರಂ ನಂ.11 ನ್ನು ವಜಾಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಬುದ್ಧ ಕರ್ನಾಟಕ ಭೀಮಸೇನೆ ಅಗ್ರಹಿಸುತ್ತದೆ ಎಂದರು.
ಗ್ರಾಮಠಾಣ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿರುವುದು ಅಲ್ಲಿನ ಜನರ ಆಕ್ರೋಶಕ್ಕೆ ಕಾರಣವಾಗಿದೆ. ನಮ್ಮ ಪ್ರಬುದ್ಧ ಕರ್ನಾಟಕ ಭೀಮಸೇನೆಯು RTI ಮೂಲಕ ಪಂಚಾಯಿತಿಯಲ್ಲಿ ಸದರಿ ಕಟ್ಟಡಕ್ಕೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಪಡೆದು ಪರಿಶೀಲಿಸಿದಾಗ ಪ್ರಸ್ತುತ ಇರುವ ಕಟ್ಟಡಕ್ಕೂ ದಾಖಲಾತಿಗಳಿಗೂ ಯಾವುದೇ ಸಂಬಂಧವಿಲ್ಲ. ದಾಖಲಾತಿಗಳಿಲ್ಲದೇ ಗ್ರಾಮಠಾಣದಲ್ಲಿ ಕಟ್ಟಡ ನಿರ್ಮಾಣ ಮಾಡಿ ಬಾಡಿಗೆ ಮನೆಗಳಾಗಿ ವಿಂಗಡಿಸಿರುವುದು ಕಾಣುತ್ತದೆ.
ಒಂದು ಲ್ಯಾಂಡ್ ಮಾಡಬೇಕಾದರೆ ಲ್ಯಾಂಡ್ ಮ್ಯಾಪ್, ಲೇಔಟ್ ಪ್ಲಾನ್, ಜಮೀನಿನ ನಕ್ಷೆ ಸರ್ವೆ ನಂಬರು ಯಾವುದು, ಸ್ಕೆಚ್ ಪ್ಲಾನ್ ರಸ್ತೆ ಅನುಮೋದನೆ ನಕ್ಷೆ ಮತ್ತು ಎನ್.ಓ.ಸಿ ಹಿಂಬರಹಗಳನ್ನು ಗ್ರಾಮಪಂಚಾಯಿತಿಯಿಂದ ಹಾಗೂ ಯೋಜನಾ ಪ್ರಾಧಿಕಾರದಿಂದ ತೆಗೆದುಕೊಳ್ಳಬೇಕು. ಆದರೆ ಈ ಪ್ರಕರಣದಲ್ಲಿ ಯಾವುದೇ ದಾಖಲಾತಿಗಳು ಕಾಣುತ್ತಿಲ್ಲ. C.A ಸೈಟ್, ಉದ್ಯಾನವನ, ಇತರೆ ಸರ್ಕಾರಿ ಸೌಲಭ್ಯಕ್ಕಾಗಿ ಯಾವುದು ಜಾಗವನ್ನು ಮೀಸಲಿಟ್ಟಿದ್ದಾರೆ ಎಂಬುದು ಮಾಹಿತಿ ಇಲ್ಲ. ಹಾಗಾಗಿ ನಿಯಮಗಳ ಉಲ್ಲಂಘನೆಯಾಗಿದ್ದರು ಉಂಡೆ ಖಾತೆ, ಫಾರಂ ನಂ.9 ಮತ್ತು ಫಾರಂ ನಂ.11 ನ್ನು ನಿಮ್ಮ ಪಂಚಾಯಿತಿಯಿಂದ ಮಾಡಲಾಗಿದೆ ಎಂದರು.
ದಾಖಲಾತಿಗಳನ್ನು ಪರಿಶೀಲಿಸಿ ನೋಡಿ, ಅಕ್ರಮ ಖಾತೆ, ಉಂಡೆ ಖಾತೆ, ಹಾಗೂ ಗ್ರಾಮಠಾಣದ ಸುಮಾರು ಜಾಗವನ್ನು ಒಂದೇ ಕುಟುಂಬದವರಿಂದ ಒತ್ತುವರಿ ಮತ್ತು ಪಂಚಾಯಿತಿ ಸದಸ್ಯನಿಂದ ಗ್ರಾಮಠಾಣ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ವಿಚಾರಕ್ಕೂ ಅರ್ಜಿ ಸಲ್ಲಿಸಿದ್ದರು ತೆರವುಗೊಳಿಸದೇ ಇರುವುದು ಅಧಿಕಾರಿಗಳ ನಿರ್ಲಕ್ಷತೆ ಎದ್ದು ಕಾಣುತ್ತದೆ ಇಂದು ಸಾಂಕೇತಿಕವಾಗಿ ಒಂದು ದಿನದ ಪ್ರತಿಭಟನೆ ಮಾಡಿದ್ದೇವೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೆ ಇದ್ದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…