ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಿಸಿ: ಶ್ರೀರಾಮ ಸೇನೆ ಸಂಘಟನೆಯನ್ನ ಬ್ಯಾನ್ ಮಾಡಿ- ವಕೀಲ ಪ್ರೊ.ಹರಿರಾಂ

ಸೆ.24 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ  ಹಿಂದೂಪುರದಿಂದ ಬೆಂಗಳೂರಿಗೆ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನ ತಡೆದು, ಗೋಮಾಂಸ ಸಾಗಾಟ ಮಾಡುತ್ತಿದ್ದ ಮುಸ್ಲಿಂ ಯುವಕರನ್ನ ಥಳಿಸಿ, ಒಂದು ಕಾರಿಗೆ ಬೆಂಕಿ ಇಟ್ಟು ಅಮಾನವೀಯ ಕೃತ್ಯ ಎಸಗಿರುವ ಶ್ರೀರಾಮ ಸೇನೆ ಸಂಘಟನೆಯನ್ನ ಕೂಡಲೇ ರಾಜ್ಯದಲ್ಲಿ ಬ್ಯಾನ್ ಮಾಡಬೇಕು ಎಂದು ವಕೀಲ ಪ್ರೊ.ಹರಿರಾಂ ಆಗ್ರಹಿಸಿದರು.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀರಾಮ ಸೇನೆಯು ಸಂವಿಧಾನ ವಿರೋಧಿ, ಸಮಾಜ ಘಾತುಕ ಹಾಗೂ ಭಯೋತ್ಪಾದಕ ಸಂಘಟನೆಯಾಗಿದೆ. ದಲಿತ, ಅಮಾಯಕ ಯುವಕರನ್ನ ಒಗ್ಗೂಡಿಸಿ, ಕೋಮುವಾದಿ ಕೃತ್ಯಗಳಿಗೆ ಬಳಸಿಕೊಂಡು, ಸಮಾಜ ಘಾತುಕ ಕೆಲಸಗಳನ್ನ ಇವರ ಕೈಯಲ್ಲಿ ಮಾಡಿಸಿ ಜೈಲಿಗೆ ಕಳುಹಿಸುವ ಹುನ್ನಾರ ಮಾಡುತ್ತಿದೆ. ಆದ್ದರಿಂದ ಈ ಸಂಘಟನೆಯನ್ನ ನಿಷೇಧ ಮಾಡಿ, ಇದರ ರಾಜ್ಯಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಅವರ ಮೇಲೂ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಇದೆ. ಯಾರಿಗೆ ಆಗಲಿ ತಮಗೆ ತಪ್ಪು ಅನಿಸಿದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಅದನ್ನ ಬಿಟ್ಟು ತಾವೇ ಯಾವ ಅಧಿಕಾರವಿಲ್ಲದೇ ತಪ್ಪನ್ನ ಸರಿಪಡಿಸಲು ಮುಂದಾಗುವುದು ಕಾನೂನಾತ್ಮಕವಾಗಿ ಅಪರಾಧ. ದಲಿತರು ಹಾಗೂ ಮುಸ್ಲಿಂರ ನಡುವೆ ಬಿರುಕು ಉಂಟುಮಾಡುವ ಕೆಲಸವನ್ನ ಶ್ರೀ ರಾಮ ಸೇನೆ ಮಾಡುತ್ತಿದೆ ಎಂದು ಆರೋಪಿಸಿದರು.

ಈಗಿನ ರಾಜಕೀಯ ಪಕ್ಷಗಳು ತಮ್ಮ ವೋಟ್ ಬ್ಯಾಂಕ್ ಗಾಗಿ ಎಲ್ಲರನ್ನು ಎಲ್ಲಾ ರೀತಿಯಲ್ಲಿ ಅದರಲ್ಲೂ ಮುಸಲ್ಮಾನರನ್ನ, ದಲಿತರು, ಅಮಾಯಕ ಯುವಕರನ್ನು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿವೆ. ಈಗಿನ ಕಾಂಗ್ರೆಸ್ ಸರ್ಕಾರವು ಸಮಾಜ ಘಾತುಕ ಸಂಘಟನೆಗಳನ್ನು ನಿಷೇಧ ಮಾಡುತ್ತೇವೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು.ಆದರೆ ಇದುವರೆಗೆ ಅಂತಹ ಯಾವ ಸಂಘಟನೆಯನ್ನ ಬ್ಯಾನ್ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಬಿ.ಆರ್.ಭಾಸ್ಕರ್ ಪ್ರಸಾದ್ ಮಾತನಾಡಿ, ಪ್ರತಿದಿನ ನಮ್ಮ ದೇಶದಿಂದ ಹೊರ ದೇಶಕ್ಕೆ ಒಂದೂವರೆ ಲಕ್ಷ ಟನ್ ನಿಂದ ಹಿಡಿದು ಎರಡು ಲಕ್ಷ ಟನ್ ವರೆಗೆ ದನದ ಮಾಂಸ ರಫ್ತು ಆಗುತ್ತದೆ. ಇದನ್ನ ರಫ್ತು ಮಡುತ್ತಿರುವ ಆರು ಕಂಪನಿಗಳ ಮಾಲೀಕರು ಉನ್ನತ ಜಾತಿಗೆ ಸೇರಿದವರು. ಈ ಆರು ಕಂಪನಿಗಳಿಂದ ನೂರಾರು ಕೋಟಿ ರೂಪಾಯಿಗಳನ್ನ ಬಿಜೆಪಿ ದೇಣಿಗೆ ಪಡೆಯುತ್ತಿದೆ. ಅಂತಹ ಕಂಪನಿಗಳ ಮುಂದೆ ಈ ಶ್ರೀರಾಮ ಸೇನೆ ಎಂದಾದರು ಹೋಗಿ ದನದ ಮಾಂಸ ರಫ್ತು ಆಗುವುದನ್ನ ಎಂದಾದರೂ ತಡೆದಿದ್ದಾರಾ?. ತಡೆಯುವ ತಾಕತ್ತು ಈ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಇದಿಯಾ? ಎಂದು ಪ್ರಶ್ನೆ ಮಾಡಿದ್ದಾರೆ.

ದನದ ಚರ್ಮ, ಮೂಳೆಗಳಿಂದ ಚಪ್ಪಲಿ, ಬೆಲ್ಟ್, ಟೋಪಿ, ವ್ಯಾನಿಟಿ ಬ್ಯಾಗ್, ಲಿಪ್‌ಸ್ಟಿಕ್, ಬಿಪಿ ಶುಗರ್ ಮಾತ್ರೆ, ಸಕ್ಕರೆ ಸೇರಿದಂತೆ ಇತರೆ ವಸ್ತುಗಳನ್ನು ತಯಾರಿಸಲಾಗುತ್ತದೆ, ಅದನ್ನು ನಾವು ಉಪಯೋಗಿಸುತ್ತೇವೆ ಎಂದರು.

ಹಫ್ತಾ ಕೊಟ್ಟಿಲ್ಲ ಎಂದು ಏಕಾಏಕಿ ಕಾರಿಗೆ ಬೆಂಕಿ ಇಟ್ಟು ಸಮಾಜದಲ್ಲಿ ಅಶಾಂತಿ ಉಂಟುಮಾಡಿ, ಮುಸ್ಲಿಂ ಯುವಕರನ್ನ ಮನಬಂದಂತೆ ಥಳಿಸಿ, ಗೋ ರುಂಡಗಳನ್ನ ತಲೆ ಮೇಲೆ ಹೊರಿಸಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯ ಮಾಡಿ ಕೋಮು‌ ಸೌಹಾರ್ದ ಕದಡುವ ಕೆಲಸ ಮಾಡಲಾಗಿದೆ. ಇದು ಅಕ್ಷಮ್ಯ ಅಪರಾಧ. ಇದರಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆ ಆಗಲೇಬೇಕು, ಇನ್ನೂ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಿತ ಇಲಾಖೆ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.

Ramesh Babu

Journalist

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

1 hour ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

15 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

16 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago