ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಿಸಿ: ಶ್ರೀರಾಮ ಸೇನೆ ಸಂಘಟನೆಯನ್ನ ಬ್ಯಾನ್ ಮಾಡಿ- ವಕೀಲ ಪ್ರೊ.ಹರಿರಾಂ

ಸೆ.24 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ  ಹಿಂದೂಪುರದಿಂದ ಬೆಂಗಳೂರಿಗೆ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನ ತಡೆದು, ಗೋಮಾಂಸ ಸಾಗಾಟ ಮಾಡುತ್ತಿದ್ದ ಮುಸ್ಲಿಂ ಯುವಕರನ್ನ ಥಳಿಸಿ, ಒಂದು ಕಾರಿಗೆ ಬೆಂಕಿ ಇಟ್ಟು ಅಮಾನವೀಯ ಕೃತ್ಯ ಎಸಗಿರುವ ಶ್ರೀರಾಮ ಸೇನೆ ಸಂಘಟನೆಯನ್ನ ಕೂಡಲೇ ರಾಜ್ಯದಲ್ಲಿ ಬ್ಯಾನ್ ಮಾಡಬೇಕು ಎಂದು ವಕೀಲ ಪ್ರೊ.ಹರಿರಾಂ ಆಗ್ರಹಿಸಿದರು.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀರಾಮ ಸೇನೆಯು ಸಂವಿಧಾನ ವಿರೋಧಿ, ಸಮಾಜ ಘಾತುಕ ಹಾಗೂ ಭಯೋತ್ಪಾದಕ ಸಂಘಟನೆಯಾಗಿದೆ. ದಲಿತ, ಅಮಾಯಕ ಯುವಕರನ್ನ ಒಗ್ಗೂಡಿಸಿ, ಕೋಮುವಾದಿ ಕೃತ್ಯಗಳಿಗೆ ಬಳಸಿಕೊಂಡು, ಸಮಾಜ ಘಾತುಕ ಕೆಲಸಗಳನ್ನ ಇವರ ಕೈಯಲ್ಲಿ ಮಾಡಿಸಿ ಜೈಲಿಗೆ ಕಳುಹಿಸುವ ಹುನ್ನಾರ ಮಾಡುತ್ತಿದೆ. ಆದ್ದರಿಂದ ಈ ಸಂಘಟನೆಯನ್ನ ನಿಷೇಧ ಮಾಡಿ, ಇದರ ರಾಜ್ಯಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಅವರ ಮೇಲೂ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಇದೆ. ಯಾರಿಗೆ ಆಗಲಿ ತಮಗೆ ತಪ್ಪು ಅನಿಸಿದರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಅದನ್ನ ಬಿಟ್ಟು ತಾವೇ ಯಾವ ಅಧಿಕಾರವಿಲ್ಲದೇ ತಪ್ಪನ್ನ ಸರಿಪಡಿಸಲು ಮುಂದಾಗುವುದು ಕಾನೂನಾತ್ಮಕವಾಗಿ ಅಪರಾಧ. ದಲಿತರು ಹಾಗೂ ಮುಸ್ಲಿಂರ ನಡುವೆ ಬಿರುಕು ಉಂಟುಮಾಡುವ ಕೆಲಸವನ್ನ ಶ್ರೀ ರಾಮ ಸೇನೆ ಮಾಡುತ್ತಿದೆ ಎಂದು ಆರೋಪಿಸಿದರು.

ಈಗಿನ ರಾಜಕೀಯ ಪಕ್ಷಗಳು ತಮ್ಮ ವೋಟ್ ಬ್ಯಾಂಕ್ ಗಾಗಿ ಎಲ್ಲರನ್ನು ಎಲ್ಲಾ ರೀತಿಯಲ್ಲಿ ಅದರಲ್ಲೂ ಮುಸಲ್ಮಾನರನ್ನ, ದಲಿತರು, ಅಮಾಯಕ ಯುವಕರನ್ನು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿವೆ. ಈಗಿನ ಕಾಂಗ್ರೆಸ್ ಸರ್ಕಾರವು ಸಮಾಜ ಘಾತುಕ ಸಂಘಟನೆಗಳನ್ನು ನಿಷೇಧ ಮಾಡುತ್ತೇವೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು.ಆದರೆ ಇದುವರೆಗೆ ಅಂತಹ ಯಾವ ಸಂಘಟನೆಯನ್ನ ಬ್ಯಾನ್ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಬಿ.ಆರ್.ಭಾಸ್ಕರ್ ಪ್ರಸಾದ್ ಮಾತನಾಡಿ, ಪ್ರತಿದಿನ ನಮ್ಮ ದೇಶದಿಂದ ಹೊರ ದೇಶಕ್ಕೆ ಒಂದೂವರೆ ಲಕ್ಷ ಟನ್ ನಿಂದ ಹಿಡಿದು ಎರಡು ಲಕ್ಷ ಟನ್ ವರೆಗೆ ದನದ ಮಾಂಸ ರಫ್ತು ಆಗುತ್ತದೆ. ಇದನ್ನ ರಫ್ತು ಮಡುತ್ತಿರುವ ಆರು ಕಂಪನಿಗಳ ಮಾಲೀಕರು ಉನ್ನತ ಜಾತಿಗೆ ಸೇರಿದವರು. ಈ ಆರು ಕಂಪನಿಗಳಿಂದ ನೂರಾರು ಕೋಟಿ ರೂಪಾಯಿಗಳನ್ನ ಬಿಜೆಪಿ ದೇಣಿಗೆ ಪಡೆಯುತ್ತಿದೆ. ಅಂತಹ ಕಂಪನಿಗಳ ಮುಂದೆ ಈ ಶ್ರೀರಾಮ ಸೇನೆ ಎಂದಾದರು ಹೋಗಿ ದನದ ಮಾಂಸ ರಫ್ತು ಆಗುವುದನ್ನ ಎಂದಾದರೂ ತಡೆದಿದ್ದಾರಾ?. ತಡೆಯುವ ತಾಕತ್ತು ಈ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಇದಿಯಾ? ಎಂದು ಪ್ರಶ್ನೆ ಮಾಡಿದ್ದಾರೆ.

ದನದ ಚರ್ಮ, ಮೂಳೆಗಳಿಂದ ಚಪ್ಪಲಿ, ಬೆಲ್ಟ್, ಟೋಪಿ, ವ್ಯಾನಿಟಿ ಬ್ಯಾಗ್, ಲಿಪ್‌ಸ್ಟಿಕ್, ಬಿಪಿ ಶುಗರ್ ಮಾತ್ರೆ, ಸಕ್ಕರೆ ಸೇರಿದಂತೆ ಇತರೆ ವಸ್ತುಗಳನ್ನು ತಯಾರಿಸಲಾಗುತ್ತದೆ, ಅದನ್ನು ನಾವು ಉಪಯೋಗಿಸುತ್ತೇವೆ ಎಂದರು.

ಹಫ್ತಾ ಕೊಟ್ಟಿಲ್ಲ ಎಂದು ಏಕಾಏಕಿ ಕಾರಿಗೆ ಬೆಂಕಿ ಇಟ್ಟು ಸಮಾಜದಲ್ಲಿ ಅಶಾಂತಿ ಉಂಟುಮಾಡಿ, ಮುಸ್ಲಿಂ ಯುವಕರನ್ನ ಮನಬಂದಂತೆ ಥಳಿಸಿ, ಗೋ ರುಂಡಗಳನ್ನ ತಲೆ ಮೇಲೆ ಹೊರಿಸಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಒತ್ತಾಯ ಮಾಡಿ ಕೋಮು‌ ಸೌಹಾರ್ದ ಕದಡುವ ಕೆಲಸ ಮಾಡಲಾಗಿದೆ. ಇದು ಅಕ್ಷಮ್ಯ ಅಪರಾಧ. ಇದರಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆ ಆಗಲೇಬೇಕು, ಇನ್ನೂ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಿತ ಇಲಾಖೆ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

4 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

6 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

9 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

10 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

22 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

22 hours ago